AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಕಾಂಗ್ರೆಸ್​ನಿಂದ ಮತ್ತೊಂದು ಎಡವಟ್ಟು: ಕಾಶ್ಮೀರ ಪಾಕ್​ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್

ಭಾರತ-ಪಾಕಿಸ್ತಾನ ಕದನದ ನಡುವೆ ಕರ್ನಾಟಕ ಕಾಂಗ್ರೆಸ್​ ಮತ್ತೊಂದು ವಿವಾದ ಮಾಡಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದೆ. ಸದ್ಯ ಈ ಬಗ್ಗೆ ಡಿಸಿಎಂ ಡಿಕೆ‌ ಶಿವಕುಮಾರ್​ಗೆ ಗೊತ್ತಾಗುತ್ತಿದ್ದಂತೆ ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಿಬ್ಬಂದಿಯನ್ನ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಕರ್ನಾಟಕ ಕಾಂಗ್ರೆಸ್​ನಿಂದ ಮತ್ತೊಂದು ಎಡವಟ್ಟು: ಕಾಶ್ಮೀರ ಪಾಕ್​ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್
ಕಾಂಗ್ರೆಸ್​ ಪೋಸ್ಟ್
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ|

Updated on:May 12, 2025 | 12:39 PM

Share

ಬೆಂಗಳೂರು, ಮೇ 12: ಆಪರೇಷನ್ ಸಿಂಧೂರ್ (Operation Sindoor) ಮೂಲಕ ಭಾರತೀಯ ಸೇನೆ ಪಾಕ್​ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದೆ. ಭಾರತ-ಪಾಕ್ ಉದ್ವಿಗ್ನ ಸಂದರ್ಭದಲ್ಲಿ ಕಾಂಗ್ರೆಸ್‌ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕರ್ನಾಟಕ ಕಾಂಗ್ರೆಸ್​ನಿಂದ (Karnataka congress) ಮತ್ತೊಂದು ಎಡವಟ್ಟಾಗಿದೆ. ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ಭರದಲ್ಲಿ ಕಾಶ್ಮೀರ ಪಾಕ್​ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್ ಮಾಡಲಾಗಿದೆ. ಆ ಮೂಲಕ ಕಾಂಗ್ರೆಸ್​ ಕಾಶ್ಮೀರವನ್ನ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ. ಬಳಿಕ ಎಡವಟ್ಟು ಗೊತ್ತಾಗ್ತಿದ್ದಂತೆ ಕಾಂಗ್ರೆಸ್ ಪೋಸ್ಟ್ ಡಿಲೀಟ್ ಮಾಡಿದೆ.

ಕಾಶ್ಮೀರವನ್ನ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟ ಕರ್ನಾಟಕ ಕಾಂಗ್ರೆಸ್

ಭಾರತ-ಪಾಕಿಸ್ತಾನ ಕದನದ ನಡುವೆ ಕರ್ನಾಟಕ ಕಾಂಗ್ರೆಸ್​ ಮತ್ತೊಂದು ವಿವಾದ ಮಾಡಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ಭರದಲ್ಲಿ ಕಾಂಗ್ರೆಸ್ ಯಡವಟ್ಟು ಮಾಡಿಕೊಂಡಿದೆ. ಪಾಕಿಸ್ತಾನಕ್ಕೆ ಐಎಂಎಫ್​ (IMF) ಲೋನ್ ನೀಡಿದ್ದನ್ನ ಟೀಕಿಸಿ ಪೋಸ್ಟ್ ಹಾಕಲಾಗಿದೆ.

ಇದನ್ನೂ ಓದಿ: ಅತ್ತ ಆಪರೇಷನ್ ಸಿಂಧೂರ್, ಇತ್ತ ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್​ಗೆ ಜನ ತರಾಟೆ

ಇದನ್ನೂ ಓದಿ
Image
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
Image
ನಂದಿಹಿಲ್ಸ್ ಅಭಿವೃದ್ದಿಗೆ ಪಣ: ಪ್ರವಾಸಿಗರ ಕುಂದು ಕೊರತೆ ಆಲಿಸಿದ ಸಚಿವ
Image
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
Image
ಆಪರೇಷನ್ ಸಿಂಧೂರ್, ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್​ಗೆ ಜನ ತರಾಟೆ

ಆದರೆ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ ಮ್ಯಾಪ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಯಡವಟ್ಟು ಗೊತ್ತಾಗುತ್ತಿದ್ದಂತೆ ಪೋಸ್ಟ್ ಡಿಲೀಟ್ ಮಾಡಲಾಗಿದೆ. ಅಷ್ಟರಲ್ಲಿ ಕರ್ನಾಟಕ ಕಾಂಗ್ರೆಸ್‌ನ ಎಡವಟ್ಟು ಡಿಸಿಎಂ ಡಿಕೆ ಶಿವಕುಮಾರ್​ಗೆ ತಿಳಿದಿದ್ದು, ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಿಬ್ಬಂದಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಎಐಸಿಸಿಗೂ ರಾಜ್ಯ ಕಾಂಗ್ರೆಸ್​ ಎಡವಟ್ಟು ತಲುಪಿದೆ.

ಕೆಲಸ ಮಾಡುವವರನ್ನು ತೆಗೆದು ಬೀಸಾಕಿದ್ದೇನೆ ಎಂದ ಡಿಕೆ ಶಿವಕುಮಾರ್​​

ಇನ್ನು ಕರ್ನಾಟಕ ಕಾಂಗ್ರೆಸ್​​ ಯಡವಟ್ಟಿನ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಇದೆಲ್ಲಾ ಸುಳ್ಳು, ಸಣ್ಣ ತಪ್ಪು ಇತ್ತು. ಅದೆಲ್ಲಾ ಮ್ಯಾಪ್ ತೆಗೆಯೋದಕ್ಕೆ ಆಗಲ್ಲ, ಸರಿ ಪಡಿಸಿದ್ದೇವೆ. ಯಾರು ಕೆಲಸ ಮಾಡುತ್ತಿದ್ದರೋ, ಅವರನ್ನೆಲ್ಲಾ ತೆಗೆದು ಬೀಸಾಕಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 7 ದಿನದ ಕಂದಮ್ಮ, ಬಾಣಂತಿ ಹೆಂಡ್ತಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ

ಭಾರತೀಯ ಸೇನೆ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ನಡೆಸಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿತ್ತು. ಆ ಮೂಲಕ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿತ್ತು. ಈ ದಾಳಿ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್‌ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದು ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಟ್ವೀಟ್ ಡಿಲೀಟ್ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:21 pm, Mon, 12 May 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!