ಕರ್ನಾಟಕ ಕಾಂಗ್ರೆಸ್​ನಿಂದ ಮತ್ತೊಂದು ಎಡವಟ್ಟು: ಕಾಶ್ಮೀರ ಪಾಕ್​ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್

ಭಾರತ-ಪಾಕಿಸ್ತಾನ ಕದನದ ನಡುವೆ ಕರ್ನಾಟಕ ಕಾಂಗ್ರೆಸ್​ ಮತ್ತೊಂದು ವಿವಾದ ಮಾಡಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದೆ. ಸದ್ಯ ಈ ಬಗ್ಗೆ ಡಿಸಿಎಂ ಡಿಕೆ‌ ಶಿವಕುಮಾರ್​ಗೆ ಗೊತ್ತಾಗುತ್ತಿದ್ದಂತೆ ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಿಬ್ಬಂದಿಯನ್ನ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಕರ್ನಾಟಕ ಕಾಂಗ್ರೆಸ್​ನಿಂದ ಮತ್ತೊಂದು ಎಡವಟ್ಟು: ಕಾಶ್ಮೀರ ಪಾಕ್​ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್
ಕಾಂಗ್ರೆಸ್​ ಪೋಸ್ಟ್
Edited By:

Updated on: May 12, 2025 | 12:39 PM

ಬೆಂಗಳೂರು, ಮೇ 12: ಆಪರೇಷನ್ ಸಿಂಧೂರ್ (Operation Sindoor) ಮೂಲಕ ಭಾರತೀಯ ಸೇನೆ ಪಾಕ್​ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದೆ. ಭಾರತ-ಪಾಕ್ ಉದ್ವಿಗ್ನ ಸಂದರ್ಭದಲ್ಲಿ ಕಾಂಗ್ರೆಸ್‌ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕರ್ನಾಟಕ ಕಾಂಗ್ರೆಸ್​ನಿಂದ (Karnataka congress) ಮತ್ತೊಂದು ಎಡವಟ್ಟಾಗಿದೆ. ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ಭರದಲ್ಲಿ ಕಾಶ್ಮೀರ ಪಾಕ್​ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್ ಮಾಡಲಾಗಿದೆ. ಆ ಮೂಲಕ ಕಾಂಗ್ರೆಸ್​ ಕಾಶ್ಮೀರವನ್ನ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ. ಬಳಿಕ ಎಡವಟ್ಟು ಗೊತ್ತಾಗ್ತಿದ್ದಂತೆ ಕಾಂಗ್ರೆಸ್ ಪೋಸ್ಟ್ ಡಿಲೀಟ್ ಮಾಡಿದೆ.

ಕಾಶ್ಮೀರವನ್ನ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟ ಕರ್ನಾಟಕ ಕಾಂಗ್ರೆಸ್

ಭಾರತ-ಪಾಕಿಸ್ತಾನ ಕದನದ ನಡುವೆ ಕರ್ನಾಟಕ ಕಾಂಗ್ರೆಸ್​ ಮತ್ತೊಂದು ವಿವಾದ ಮಾಡಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ಭರದಲ್ಲಿ ಕಾಂಗ್ರೆಸ್ ಯಡವಟ್ಟು ಮಾಡಿಕೊಂಡಿದೆ. ಪಾಕಿಸ್ತಾನಕ್ಕೆ ಐಎಂಎಫ್​ (IMF) ಲೋನ್ ನೀಡಿದ್ದನ್ನ ಟೀಕಿಸಿ ಪೋಸ್ಟ್ ಹಾಕಲಾಗಿದೆ.

ಇದನ್ನೂ ಓದಿ: ಅತ್ತ ಆಪರೇಷನ್ ಸಿಂಧೂರ್, ಇತ್ತ ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್​ಗೆ ಜನ ತರಾಟೆ

ಇದನ್ನೂ ಓದಿ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ನಂದಿಹಿಲ್ಸ್ ಅಭಿವೃದ್ದಿಗೆ ಪಣ: ಪ್ರವಾಸಿಗರ ಕುಂದು ಕೊರತೆ ಆಲಿಸಿದ ಸಚಿವ
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಆಪರೇಷನ್ ಸಿಂಧೂರ್, ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್​ಗೆ ಜನ ತರಾಟೆ

ಆದರೆ ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ ಮ್ಯಾಪ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಯಡವಟ್ಟು ಗೊತ್ತಾಗುತ್ತಿದ್ದಂತೆ ಪೋಸ್ಟ್ ಡಿಲೀಟ್ ಮಾಡಲಾಗಿದೆ. ಅಷ್ಟರಲ್ಲಿ ಕರ್ನಾಟಕ ಕಾಂಗ್ರೆಸ್‌ನ ಎಡವಟ್ಟು ಡಿಸಿಎಂ ಡಿಕೆ ಶಿವಕುಮಾರ್​ಗೆ ತಿಳಿದಿದ್ದು, ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಿಬ್ಬಂದಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಎಐಸಿಸಿಗೂ ರಾಜ್ಯ ಕಾಂಗ್ರೆಸ್​ ಎಡವಟ್ಟು ತಲುಪಿದೆ.

ಕೆಲಸ ಮಾಡುವವರನ್ನು ತೆಗೆದು ಬೀಸಾಕಿದ್ದೇನೆ ಎಂದ ಡಿಕೆ ಶಿವಕುಮಾರ್​​

ಇನ್ನು ಕರ್ನಾಟಕ ಕಾಂಗ್ರೆಸ್​​ ಯಡವಟ್ಟಿನ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಇದೆಲ್ಲಾ ಸುಳ್ಳು, ಸಣ್ಣ ತಪ್ಪು ಇತ್ತು. ಅದೆಲ್ಲಾ ಮ್ಯಾಪ್ ತೆಗೆಯೋದಕ್ಕೆ ಆಗಲ್ಲ, ಸರಿ ಪಡಿಸಿದ್ದೇವೆ. ಯಾರು ಕೆಲಸ ಮಾಡುತ್ತಿದ್ದರೋ, ಅವರನ್ನೆಲ್ಲಾ ತೆಗೆದು ಬೀಸಾಕಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 7 ದಿನದ ಕಂದಮ್ಮ, ಬಾಣಂತಿ ಹೆಂಡ್ತಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ

ಭಾರತೀಯ ಸೇನೆ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ನಡೆಸಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿತ್ತು. ಆ ಮೂಲಕ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿತ್ತು. ಈ ದಾಳಿ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್‌ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದು ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಟ್ವೀಟ್ ಡಿಲೀಟ್ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:21 pm, Mon, 12 May 25

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us