AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,386 ಕೊರೊನಾ ಪ್ರಕರಣ ಪತ್ತೆ; 61 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 319 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,19,697 ಕ್ಕೆ ಏರಿಕೆಯಾಗಿದೆ. ಆ ಪೈಕಿ 11,90,966 ಜನರು ಗುಣಮುಖರಾಗಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,386 ಕೊರೊನಾ ಪ್ರಕರಣ ಪತ್ತೆ; 61 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on: Jul 12, 2021 | 8:13 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 12) ಹೊಸದಾಗಿ 1,386 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,72,684 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,01,907 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 61 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 35,896ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ 34,858 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಈ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 319 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,19,697 ಕ್ಕೆ ಏರಿಕೆಯಾಗಿದೆ. ಆ ಪೈಕಿ 11,90,966 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 9 ಜನರು ಬಲಿಯಾಗಿದ್ದು, ಕೊರೊನಾದಿಂದ ಈವರೆಗೆ 15,745 ಜನರ ಸಾವು ಸಂಭವಿಸಿದೆ. 12,985 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಸೋಂಕಿತರ ವಿವರ ಬೆಂಗಳೂರು ನಗರ ಜಿಲ್ಲೆ 319, ಮೈಸೂರು ಜಿಲ್ಲೆ 177, ದಕ್ಷಿಣ ಕನ್ನಡ 126, ಹಾಸನ 108, ಕೊಡಗು 73, ತುಮಕೂರು 69, ಶಿವಮೊಗ್ಗ 68, ಉಡುಪಿ 66, ಬೆಂಗಳೂರು ಗ್ರಾಮಾಂತರ 47, ಚಿಕ್ಕಮಗಳೂರು 46, ಮಂಡ್ಯ 44, ಬೆಳಗಾವಿ 32, ಉತ್ತರ ಕನ್ನಡ ಜಿಲ್ಲೆ 32, ಕೋಲಾರ 31, ಚಾಮರಾಜನಗರ 24, ಧಾರವಾಡ 16, ಕಲಬುರಗಿ 16, ದಾವಣಗೆರೆ 15, ರಾಮನಗರ 14, ಚಿತ್ರದುರ್ಗ 13, ಬಳ್ಳಾರಿ 10, ಚಿಕ್ಕಬಳ್ಳಾಪುರ 9, ಬೀದರ್ 5, ಗದಗ 5, ಹಾವೇರಿ 5, ಯಾದಗಿರಿ 5, ವಿಜಯಪುರ 4, ಬಾಗಲಕೋಟೆ 3, ಕೊಪ್ಪಳ 3 ಹಾಗೂ ರಾಯಚೂರು ಜಿಲ್ಲೆಯಲ್ಲಿ 1 ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದೆ.

ಜಿಲ್ಲಾವಾರು ಕೊರೊನಾ ಮೃತರ ಸಂಖ್ಯೆ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 61 ಜನರ ಸಾವು ಸಂಭವಿಸಿದೆ. ದಕ್ಷಿಣ ಕನ್ನಡ ಹಾಗೂ ಮೈಸೂರು ಜಿಲ್ಲೆಯಲ್ಲಿ 10, ಬೆಂಗಳೂರಿನಲ್ಲಿ 9, ಮಂಡ್ಯ ಜಿಲ್ಲೆಯಲ್ಲಿ 4, ಕೋಲಾರ, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 3, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೊಡಗು ಜಿಲ್ಲೆಯಲ್ಲಿ ಇಂದು ತಲಾ 2, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಗದಗ, ಹಾಸನ, ಧಾರವಾಡ, ಹಾವೇರಿ, ರಾಯಚೂರು, ರಾಮನಗರ, ಉಡುಪಿ, ವಿಜಯಪುರ ಜಿಲ್ಲೆಯಲ್ಲಿ ಇಂದು ಕೊರೊನಾಗೆ ಒಬ್ಬರ ಬಲಿಯಾಗಿದೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ ಅಪಾಯದ ನಡುವೆ ಹಬ್ಬಗಳ ಸಾಮೂಹಿಕ ಆಚರಣೆ ಮಾಡುವುದು ಸೂಕ್ತವಲ್ಲ: ಐಎಮ್​ಎ ಮುಖ್ಯಸ್ಥ

ಸಚಿವ ಸಂಪುಟದಲ್ಲಿ ಮಂತ್ರಿಗಳ ಸಂಖ್ಯೆ ಹೆಚ್ಚಾಗಿದೆ; ಕೊರೊನಾ ಲಸಿಕೆ ಸಂಖ್ಯೆ ಏರಿಕೆಯಾಗಿಲ್ಲ: ರಾಹುಲ್ ಗಾಂಧಿ ಟೀಕೆ