AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಹೂವಿನ ಮಾರ್ಕೆಟ್‌ನಲ್ಲಿರುವ ಮನೆ ಸೀಲ್‌ಡೌನ್; ವಸತಿ ನಿವಾಸದ ಪಕ್ಕದ 5 ಅಂಗಡಿ ಬಂದ್

ಮೊದಲ ಹಂತದ ಸಂಪರ್ಕದಲ್ಲಿ ಇರುವವರಿಗೆ ಕೊವಿಡ್ ಟೆಸ್ಟ್ ಮಾಡಿಸಲು‌ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಇನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ಮನೆ ಸುತ್ತಮುತ್ತಲಿನ 4ರಿಂದ 5 ಅಂಗಡಿಗಳನ್ನು ಕೂಡ ಬಂದ್ ಮಾಡಲಾಗಿದೆ.

ಬಳ್ಳಾರಿ ಹೂವಿನ ಮಾರ್ಕೆಟ್‌ನಲ್ಲಿರುವ ಮನೆ ಸೀಲ್‌ಡೌನ್; ವಸತಿ ನಿವಾಸದ ಪಕ್ಕದ 5 ಅಂಗಡಿ ಬಂದ್
ಸೌಜನ್ಯ : ಅಂತರ್ಜಾಲ
preethi shettigar
| Edited By: |

Updated on: Mar 26, 2021 | 3:47 PM

Share

ಬಳ್ಳಾರಿ: ಒಂದೇ ಮನೆಯ ಐವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಬೆಂಗಳೂರು ರಸ್ತೆಯ ಹೂವಿನ ಮಾರುಕಟ್ಟೆಯಲ್ಲಿರುವ ಸೋಂಕಿತರ ಮನೆಯನ್ನು ಅಧಿಕಾರಿಗಳು ಸೀಲ್‌ಡೌನ್ ಮಾಡಿದ್ದಾರೆ. ಫ್ರೈಮರಿ ಕಾಂಟ್ಯಾಕ್ಟ್ನಲ್ಲಿರುವವರಿಗೆ ಕೊವಿಡ್ ಟೆಸ್ಟ್ ಮಾಡಿಸಲು‌ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಇನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ಮನೆ ಸುತ್ತಮುತ್ತಲಿನ 4ರಿಂದ5 ಅಂಗಡಿಗಳನ್ನು ಕೂಡ ಬಂದ್ ಮಾಡಲಾಗಿದೆ.

ಕೊರೊನಾ ಎರಡನೇ ಅಲೆಗೆ ನಲುಗಿದ ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಶುರುವಾಗಿದ್ದು, ಗ್ರಾಮದ ಖಾಸಗಿ ಶಾಲೆಯ 10 ವಿದ್ಯಾರ್ಥಿಗಳು ಮತ್ತು ಖಾಸಗಿ ಬ್ಯಾಂಕ್‌ನ 6 ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ. ವಾರದ ಹಿಂದಷ್ಟೇ ಗ್ರಾಮದಲ್ಲಿ 24 ಜನರಿಗೆ ಕೊವಿಡ್ ದೃಢಪಟ್ಟಿತ್ತು. ಈಗ ಮತ್ತೆ 16 ಜನರಿಗೆ ಕೊರೊನಾ ಸೋಂಕು ಹರಡಿದೆ. ಇನ್ನು ಗ್ರಾಮದಲ್ಲಿ ಕೊರೊನಾ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರ ಜತೆ ತಹಶೀಲ್ದಾರ್ ಮತ್ತು ಅಧಿಕಾರಿಗಳು ಸಭೆ ನಡೆಸಿದ್ದು, ಕೊವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬಿಬಿಎಂಪಿ ಪ್ರೌಢಶಾಲೆಯ 9 ವಿದ್ಯಾರ್ಥಿಗಳಿಗೆ ಕೊರೊನಾ: ಜೋಗುಪಾಳ್ಯ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜೋಗುಪಾಳ್ಯ ಪ್ರೌಢಶಾಲೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಟಿವಿ9ಗೆ ಬಿಬಿಎಂಪಿ ವಿಶೇಷ ಆಯುಕ್ತರಾದ ಶಂಕರ್‌ ರೆಡ್ಡಿ ಹೇಳಿಕೆ ನೀಡಿದ್ದಾರೆ. ಇನ್ನು ಬಿಬಿಎಂಪಿ ಶಾಲೆಗಳ 8ನೇ ತರಗತಿ ಹಾಗೂ 9ನೇ ತರಗತಿ ಮಕ್ಕಳಿಗೆ ತರಗತಿಗಳನ್ನು ಶಿಫ್ಟ್ ಲೆಕ್ಕದಲ್ಲಿ ನಡೆಸಲು ಅಥವಾ ತಾತ್ಕಾಲಿಕ ವಾಗಿ ಕ್ಲೋಸ್ ಮಾಡುವ ಬಗ್ಗೆ ಆಯುಕ್ತರಿಗೆ ಮನವಿ ಮಾಡುತ್ತೇವೆ ಎಂದು ಟಿವಿ9 ಗೆ ಅವರು ತಿಳಿಸಿದ್ದಾರೆ. ಸದ್ಯ ಬಿಬಿಎಂಪಿ ಅಧಿಕಾರಿಗಳು ಜೋಗುಪಾಳ್ಯ ಬಾಲಕರ ಹೈಸ್ಕೂಲ್​ಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಜೋಗುಪಾಳ್ಯ ವಾರ್ಡ್‌ನಲ್ಲಿರುವ ಬಿಬಿಎಂಪಿ ಪ್ರೌಢಶಾಲೆಗಳಾದ ಆಸ್ಟಿನ್ ಟೌನ್ ಬಾಯ್ಸ್ ಸ್ಕೂಲ್‌ನ ಇಬ್ಬರು ವಿದ್ಯಾರ್ಥಿಗಳು, ಹೇರೋಹಳ್ಳಿ ಬಿಬಿಎಂಪಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು, ಕಾಟನ್‌ಪೇಟೆಯ ಬಿಬಿಎಂಪಿ ಶಾಲೆಯ ಒಬ್ಬ ವಿದ್ಯಾರ್ಥಿಗೆ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ನಿನ್ನೆ ಶಾಲಾ ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಿದಾಗ 9 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ.

ಬೆಂಗಳೂರಿನ ಕೊವಿಡ್ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ: ಬೆಂಗಳೂರಿನಲ್ಲಿ ಕೊವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗಾಗಿ ಒಟ್ಟು 1,800 ಬೆಡ್ ವ್ಯವಸ್ಥೆ ಮಾಡಲಾಗಿದೆ. ವಿಕ್ಟೋರಿಯಾ 400, ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 400, ಚರಕ ಆಸ್ಪತ್ರೆ 400, 3 ಕೊವಿಡ್ ಸೆಂಟರ್‌ನಲ್ಲಿ 600 ಬೆಡ್ ಅನ್ನು ಸೋಂಕಿತರಿಗಾಗಿ ಮೀಸಲಿರಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಸೋಂಕಿತರ ಚಿಕಿತ್ಸೆಗಾಗಿ ಈ ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:

Covid 19 Live Updates Karnataka: ಹೊರರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗೆ ಏಪ್ರಿಲ್ 1ರಿಂದ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ

ಕೊರೊನಾ ಭೀತಿ ನಡುವೆಯೂ ಕೂಲಹಳ್ಳಿಯಲ್ಲಿ ಅದ್ದೂರಿ ಜಾತ್ರೆ: ರಥೋತ್ಸವದ ಸೊಬಗನ್ನು ಕಣ್ತುಂಬಿಕೊಂಡ ಭಕ್ತಸಾಗರ

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್