
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಾಪುಗಾಲಿಡುತ್ತಾ ಮುನ್ನುಗ್ಗುತ್ತಲ್ಲೇ ಇದೆ. ಇದಕ್ಕೆ ಪೂರಕವಾಗಿ ಇಂದು ರಾಜ್ಯದಲ್ಲಿ 453 ಕೇಸ್ಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,000ದ ಗಡಿ ದಾಟಿದ್ದು 9,150ಕ್ಕೆ ಏರಿದೆ. ಇಂದು ಬೆಂಗಳೂರಲ್ಲಿ ಅತ್ಯಂತ ಹೆಚ್ಚು ಅಂದರೆ 196 ಪ್ರಕರಣಗಳು ಪತ್ತೆಯಾಗಿದೆ.
ಜೊತೆಗೆ ಇಂದು ಬಳ್ಳಾರಿಯಲ್ಲಿ 40, ಕಲಬುರಗಿ ಮತ್ತು ವಿಜಯಪುರದಲ್ಲಿ ತಲಾ 39 ಕೇಸ್ಗಳು ವರದಿಯಾಗಿದೆ. ಮೈಸೂರು ಮತ್ತು ಗದಗದಲ್ಲಿ ತಲಾ 18 ಕೇಸ್, ಧಾರವಾಡದಲ್ಲಿ 15, ಬಾಗಲಕೋಟೆಯಲ್ಲಿ 14, ಬೀದರ್ನಲ್ಲಿ 13 ಪ್ರಕರಣಗಳು ಪತ್ತೆಯಾಗಿದೆ. ದಾವಣಗೆರೆ, ಉತ್ತರ ಕನ್ನಡ ಮತ್ತು ಕೋಲಾರದಲ್ಲಿ ತಲಾ 8 ಪ್ರಕರಣಗಳು ವರದಿಯಾಗಿದೆ. ಇನ್ನು ದಕ್ಷಿಣ ಕನ್ನಡದಲ್ಲಿ 7, ಮಂಡ್ಯ ಮತ್ತು ಹಾಸನದಲ್ಲಿ ತಲಾ 5 ಕೇಸ್ಗಳು, ತುಮಕೂರಿನಲ್ಲಿ 4, ಯಾದಗಿರಿ, ಚಿಕ್ಕಬಳ್ಳಾಪುರ ಹಾಗೂ ಹಾವೇರಿಯಲ್ಲಿ ತಲಾ ಮೂರು ಕೇಸ್ಗಳು ವರದಿಯಾಗಿದೆ. ರಾಯಚೂರು, ಶಿವಮೊಗ್ಗ ಮತ್ತು ರಾಮನಗರದಲ್ಲಿ ತಲಾ 2 ಕೇಸ್ ಪತ್ತೆಯಾಗಿದೆ.
ಕೊರೊನಾ ಸೋಂಕು ರಾಜ್ಯದಲ್ಲಿ ಇಂದು 5 ಜನರನ್ನು ಬಲಿಪಡೆದಿದೆ. ಬೆಂಗಳೂರಿನಲ್ಲಿ ಇಂದು ಮೂವರು ಮೃತಪಟ್ಟಿದ್ದಾರೆ.
Published On - 7:02 pm, Sun, 21 June 20