AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid-19 Karnataka Update: ಕರ್ನಾಟಕದಲ್ಲಿ ಇಂದು 37,733 ಜನರಿಗೆ ಕೊರೊನಾ ಸೋಂಕು, 217 ಮಂದಿ ಸಾವು

ಸೋಂಕಿತರ ಪೈಕಿ 11,64,398 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4,21,436 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Covid-19 Karnataka Update: ಕರ್ನಾಟಕದಲ್ಲಿ ಇಂದು 37,733 ಜನರಿಗೆ ಕೊರೊನಾ ಸೋಂಕು, 217 ಮಂದಿ ಸಾವು
ಪ್ರಾತಿನಿಧಿಕ ಚಿತ್ರ (ಕೃಪೆ: unicef.org)
guruganesh bhat
|

Updated on:May 02, 2021 | 7:56 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಒಂದೇ ದಿನ 37,733 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ ಇಂದು 21,199 ಜನರಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿಂದು ಕೊರೊನಾಗೆ 217 ಜನರ ಮೃತಪಟ್ಟಿದ್ದು, ಬೆಂಗಳೂರಲ್ಲಿ 64 ಜನರ ನಿಧನರಾಗಿದ್ದಾರೆ. ಸೋಂಕಿತರ ಪೈಕಿ 11,64,398 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4,21,436 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು ಒಂದೇ ದಿನ 37,733 ಜನರಿಗೆ ಸೋಂಕು ಕಾಣಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16,01,865ಕ್ಕೇರಿಕೆಯಾಗಿದೆ. ಇಂದು ನಿಧನರಾದ 217 ಜನರನ್ನೂ ಸೇರಿಸಿ ಈವರೆಗೆ ಕರ್ನಾಟಕದಲ್ಲಿ ಕೊರೊನಾದಿಂದ 16,011 ಜನರ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿಂದು ಒಂದೇ ದಿನ ಕೊರೊನಾಗೆ 217 ಜನರ ಬಲಿಯಾಗಿದ್ದು, ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ 64 ಜನರ ಮೃತಪಟ್ಟಿದ್ದಾರೆ. ಬಳ್ಳಾರಿ 18, ಚಾಮರಾಜನಗರ 13, ಶಿವಮೊಗ್ಗ  12, ಹಾಸನ 11, ಮೈಸೂರು, ರಾಮನಗರ ಜಿಲ್ಲೆಯಲ್ಲಿ ತಲಾ 8, ಉತ್ತರ ಕನ್ನಡ, ಕಲಬುರಗಿ ಜಿಲ್ಲೆಯಲ್ಲಿ ತಲಾ 7, ಬೀದರ್ 6, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಪ್ಪಳ, ಮಂಡ್ಯಗಳಲ್ಲಿ 5, ಹಾವೇರಿಯಲ್ಲಿ 4, ವಿಜಯಪುರ, ಧಾರವಾಡ, ಚಿಕ್ಕಬಳ್ಳಾಪುರದಲ್ಲಿ ಮೂವರು, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಯಾದಗಿರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು ಬಲಿಯಾಗಿದ್ದಾರೆ.

ಇದನ್ನೂ ಓದಿ: Mangala Angadi: ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಗೆ 3,986 ಮತಗಳ ರೋಚಕ ಗೆಲುವು

(Karnataka coronavirus update 37733 new cases 217 died today)

Published On - 7:45 pm, Sun, 2 May 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!