AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid-19; ರಾಜ್ಯದಲ್ಲಿ ಮತ್ತೆ ಏರುಗತಿಯಲ್ಲಿ ಕೋವಿಡ್; 1,400ರ ಗಡಿ ದಾಟಿದ ಸಕ್ರಿಯ ಪ್ರಕರಣ

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಾವಳಿ ಮತ್ತೆ ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,400 ದಾಟಿದೆ.

Covid-19; ರಾಜ್ಯದಲ್ಲಿ ಮತ್ತೆ ಏರುಗತಿಯಲ್ಲಿ ಕೋವಿಡ್; 1,400ರ ಗಡಿ ದಾಟಿದ ಸಕ್ರಿಯ ಪ್ರಕರಣ
ಸಾಂದರ್ಭಿಕ ಚಿತ್ರImage Credit source: Getty Images
ಗಣಪತಿ ಶರ್ಮಾ
|

Updated on:Apr 03, 2023 | 4:45 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ (Coronavirus) ಸೋಂಕಿನ ಹಾವಳಿ ಮತ್ತೆ ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,400 ದಾಟಿದೆ. ಈ ಪೈಕಿ ಬೆಂಗಳೂರು ನಗರ (Bengaluru Urban) ವ್ಯಾಪ್ತಿಯಲ್ಲೇ ಶೇ 59ರಷ್ಟು ಹೊಸ ಪ್ರಕರಣಗಳು ದೃಢಪಟ್ಟಿವೆ. ಏಪ್ರಿಲ್ 1ರಂದು ರಾಜ್ಯದಲ್ಲಿ 284 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ರಾಜ್ಯದ ದೈನಂದಿನ ಪಾಸಿಟಿವಿಟಿ ಪ್ರಮಾಣ ಸದ್ಯ ಶೇ 3.2ರಷ್ಟಿದೆ. ಬೆಂಗಳೂರಿನಲ್ಲಿ ಮಾರ್ಚ್​ 1ರ ನಂತರ ಈವರೆಗೆ ಕೋವಿಡ್​ನಿಂದಾಗಿ ಮೂರು ಸಾವು ಸಂಭವಿಸಿವೆ. XBB.1.16 ರೂಪಾಂತರವು ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಲು ಕಾರಣವಾಗುತ್ತಿವೆ. ಪತ್ತೆಯಾದ ಪ್ರಕರಣಗಳ ಪೈಕಿ ಹೆಚ್ಚಿನವರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಕೆಲವರಲ್ಲಿ ಸೌಮ್ಯ ಲಕ್ಷಣಗಳು ಕಂಡುಬಂದಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ. ರಣದೀಪ್ ತಿಳಿಸಿದ್ದಾರೆ.

ಮೃತಪಟ್ಟವರಲ್ಲಿ ಏಕಕಾಲಕ್ಕೆ ಎರಡೆರಡು ಸೋಂಕು ಪತ್ತೆಯಾಗಿದ್ದವು. ಸಾವಿಗೆ ಪ್ರಾಥಮಿಕ ಕಾರಣ ಕೋವಿಡ್ ಅಲ್ಲ ಎಂದು ರಣದೀಪ್ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಕೋವಿಡ್ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ ಕಂಡುಬಂದಿರುವುದು ಕಳವಳಕಾರಿಯಾಗಿದೆ. ಆದರೆ, ಆಸ್ಪತ್ರೆಗೆ ದಾಖಲಾಗುತ್ತಿರುವವರ ಪ್ರಮಾಣ ಹೆಚ್ಚಾಗದಿರುವುದು ನಾವು ನಿಕಟವಾಗಿ ಗಮನಿಸಿದಾಗ ತಿಳಿದುಬಂದಿದೆ. ಸೋಂಕಿತರಲ್ಲಿ ಹೆಚ್ಚಿನವರು ಲಕ್ಷಣರಹಿತರು ಮತ್ತು ಸೌಮ್ಯ ಲಕ್ಷಣಗಳನ್ನು ಹೊಂದಿರುವವರಾಗಿದ್ದಾರೆ ಎಂದು ರಣದೀಪ್ ಮಾಹಿತಿ ನೀಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಸಾತನೂರಿನಲ್ಲಿ ಮುಸ್ಲಿಂ ಯುವಕನ ಬಳಿ 2 ಲಕ್ಷ ನೀಡುವಂತೆ ಪೀಡಿಸಿ ನಂತರ ಕೊಂದಿದ್ದಾರೆ: ಡಿಕೆ ಶಿವಕುಮಾರ್ ಆರೋಪ

XBB.1.16. ರೂಪಾಂತರದಿಂದ ಹರಡುವ ಕೋವಿಡ್​​​ ಸೋಂಕಿನಲ್ಲಿ ಆಸ್ಪತ್ರೆಗೆ ದಾಖಲಾತಿ ಕಡಿಮೆ ಇರಲಿದೆ ಎಂದು ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯ ನಿರ್ದೇಶಕ ಡಾ. ನಾಗರಾಜ್ ತಿಳಿಸಿದ್ದಾರೆ. ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ, ಕಳೆದ 20 ದಿನಗಳಲ್ಲಿ ಕೋವಿಡ್‌ನಿಂದಾಗಿ ಐವರು ರೋಗಿಗಳನ್ನು ದಾಖಲಿಸಿಕೊಳ್ಳಲಾಗಿದೆ. ಈ ಪೈಕಿ ಹೆಚ್ಚಿನವರು ಬೇರೆ ಸೋಂಕಿನಿಂದಲೂ ಬಳಲುತ್ತಿದ್ದರು ಎಂದು ಖಾಸಗಿ ಆಸ್ಪತ್ರೆಗಳ ಮತ್ತು ನರ್ಸಿಂಗ್ ಹೋಮ್​ಗಳ ಸಂಘಟನೆಯ ಅಧ್ಯಕ್ಷ ಡಾ. ಗೋವಿಂದಯ್ಯ ಯತೀಶ್ ತಿಳಿಸಿರುವುದಾಗಿ ವರದಿ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:44 pm, Mon, 3 April 23

Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು