AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಶೇ 54ರಷ್ಟು ಕುಟುಂಬಗಳ ಕನಿಷ್ಠ ಒಬ್ಬರಿಗಿದೆ ಕೋವಿಡ್ ಸೋಂಕು: ಸಮೀಕ್ಷೆ

2023ರ ಆಗಸ್ಟ್‌ನಲ್ಲಿ ಕರ್ನಾಟಕದಲ್ಲಿ ಇದೇ ರೀತಿಯ ಸಮೀಕ್ಷೆಯನ್ನು ನಡೆಸಲಾಗಿತ್ತು. ಆಗ, ಶೇ 33 ಕುಟುಂಬಗಳ ಒಬ್ಬ ಅಥವಾ ಹೆಚ್ಚಿನ ವ್ಯಕ್ತಿಗಳು ಕೋವಿಡ್ ಅಥವಾ ವೈರಲ್ ರೋಗಲಕ್ಷಣಗ ಹೊಂದಿರುವುದು ಕಂಡುಬಂದಿತ್ತು. ಆದರೆ ಈ ಬಾರಿ ಪ್ರಮಾಣ ಶೇ 54 ರಷ್ಟಿದೆ.

ಕರ್ನಾಟಕದ ಶೇ 54ರಷ್ಟು ಕುಟುಂಬಗಳ ಕನಿಷ್ಠ ಒಬ್ಬರಿಗಿದೆ ಕೋವಿಡ್ ಸೋಂಕು: ಸಮೀಕ್ಷೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 05, 2024 | 10:39 AM

Share

ಬೆಂಗಳೂರು, ಜನವರಿ 5: ಕರ್ನಾಟಕದಲ್ಲಿ ಕೊರೊನಾ ವೈರಸ್ (Coronavirus) ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯದ ಶೇ 54ರಷ್ಟು ಕುಟುಂಬಗಳ ಕನಿಷ್ಠ ಒಬ್ಬರು ಕೋವಿಡ್​​ನಿಂದ (Covid 19) ಬಳಲುತ್ತಿದ್ದಾರೆ ಎಂದು ಸಮೀಕ್ಷಾ ವರದಿಯೊಂದು ತಿಳಿಸಿದೆ. ರಾಜ್ಯದ ಹೆಚ್ಚಿನ ಕುಟುಂಬಗಳಲ್ಲಿ ಒಬ್ಬರು ಅಥವಾ ಅದಕ್ಕಿಂತ ಹೆಚ್ಚು ಮಂದಿ ಕೋವಿಡ್ ಅಥವಾ ಇತರ ವೈರಲ್, ಜ್ವರದಂಥ ರೋಗಲಕ್ಷಣ ಹೊಂದಿದ್ದಾರೆ ಎಂದು ಲೋಕಲ್ ಸರ್ಕಲ್ಸ್ ಸಮೀಕ್ಷೆ ತಿಳಿಸಿದೆ.

ಕೋವಿಡ್/ ಫ್ಲೂ /ವೈರಲ್ ಜ್ವರದ ಲಕ್ಷಣಗಳಾದ ಮೂಗು ಸ್ರವಿಸುವಿಕೆ, ಗಂಟಲು ನೋವು, ಕೆಮ್ಮು, ತಲೆನೋವು, ಕೀಲು ನೋವು, ದೇಹ ನೋವು, ಉಸಿರಾಟದ ಸಮಸ್ಯೆಗಳನ್ನು ಕುಟುಂಬದ ಸದಸ್ಯರು ಹೊಂದಿರುವುದಾಗಿ ಸಮೀಕ್ಷೆಯಲ್ಲಿ ಭಾಗವಹಿಸಿರುವವರು ತಿಳಿಸಿದ್ದಾರೆ.

ಒಟ್ಟು 3,783 ಸಮೀಕ್ಷೆಯಲ್ಲಿ ಭಾಗವಹಿಸಿದ್ದು, ಶೇ 23 ರಷ್ಟು ಜನರು ಅವರ ಮನೆಯಲ್ಲಿ ‘ನಾಲ್ಕು ಮಂದಿ ಅಥವಾ ಹೆಚ್ಚಿನ ವ್ಯಕ್ತಿಗಳು’ ಒಂದು ಅಥವಾ ಹೆಚ್ಚಿನ ಕೋವಿಡ್ / ವೈರಲ್ ಜ್ವರ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ. ಶೇ 23ರಷ್ಟು ಮಂದಿ ಎರಡು-ಮೂರು ಸದಸ್ಯರು ರೋಗ ಲಕ್ಷಣ ಹೊಂದಿರುವುದಾಗಿ ಉತ್ತರಿಸಿದ್ದಾರೆ. ಶೇ 8 ರಷ್ಟು ಮಂದಿ, ಒಬ್ಬ ವ್ಯಕ್ತಿ ರೋಗ ಲಕ್ಷಣ ಹೊಂದಿರುವ ಸುಳಿವು ನೀಡಿದ್ದಾರೆ ಮತ್ತು ಶೇ 46 ರಷ್ಟು ಜನರು ಕುಟುಂಬದಲ್ಲಿ ರೋಗ ಲಕ್ಷಣ ಹೊಂದಿರುವವರು ಯಾರೂ ಇಲ್ಲ ಎಂದು ಉತ್ತರಿಸಿದ್ದಾರೆ.

2023ರ ಆಗಸ್ಟ್‌ನಲ್ಲಿ ಕರ್ನಾಟಕದಲ್ಲಿ ಇದೇ ರೀತಿಯ ಸಮೀಕ್ಷೆಯನ್ನು ನಡೆಸಲಾಗಿತ್ತು. ಆಗ, ಶೇ 33 ಕುಟುಂಬಗಳ ಒಬ್ಬ ಅಥವಾ ಹೆಚ್ಚಿನ ವ್ಯಕ್ತಿಗಳು ಕೋವಿಡ್ ಅಥವಾ ವೈರಲ್ ರೋಗಲಕ್ಷಣಗ ಹೊಂದಿರುವುದು ಕಂಡುಬಂದಿತ್ತು. ಆದರೆ ಈ ಬಾರಿ ಪ್ರಮಾಣ ಶೇ 54 ರಷ್ಟಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ 298 ಹೊಸ ಕೊವಿಡ್​ ಕೇಸ್ ಪತ್ತೆ: ನಾಲ್ವರು ಸಾವು

ಕೊರೊನಾ ವೈರಸ್​​ನ ಒಮಿಕ್ರಾನ್ ರೂಪಾಂತರ ಜೆಎನ್​.1 ಹರಡುವಿಕೆ ತೀವ್ರಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಗುರುವಾರ ಹೊಸದಾಗಿ 298 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು.

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?