AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಶೇ 54ರಷ್ಟು ಕುಟುಂಬಗಳ ಕನಿಷ್ಠ ಒಬ್ಬರಿಗಿದೆ ಕೋವಿಡ್ ಸೋಂಕು: ಸಮೀಕ್ಷೆ

2023ರ ಆಗಸ್ಟ್‌ನಲ್ಲಿ ಕರ್ನಾಟಕದಲ್ಲಿ ಇದೇ ರೀತಿಯ ಸಮೀಕ್ಷೆಯನ್ನು ನಡೆಸಲಾಗಿತ್ತು. ಆಗ, ಶೇ 33 ಕುಟುಂಬಗಳ ಒಬ್ಬ ಅಥವಾ ಹೆಚ್ಚಿನ ವ್ಯಕ್ತಿಗಳು ಕೋವಿಡ್ ಅಥವಾ ವೈರಲ್ ರೋಗಲಕ್ಷಣಗ ಹೊಂದಿರುವುದು ಕಂಡುಬಂದಿತ್ತು. ಆದರೆ ಈ ಬಾರಿ ಪ್ರಮಾಣ ಶೇ 54 ರಷ್ಟಿದೆ.

ಕರ್ನಾಟಕದ ಶೇ 54ರಷ್ಟು ಕುಟುಂಬಗಳ ಕನಿಷ್ಠ ಒಬ್ಬರಿಗಿದೆ ಕೋವಿಡ್ ಸೋಂಕು: ಸಮೀಕ್ಷೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Jan 05, 2024 | 10:39 AM

ಬೆಂಗಳೂರು, ಜನವರಿ 5: ಕರ್ನಾಟಕದಲ್ಲಿ ಕೊರೊನಾ ವೈರಸ್ (Coronavirus) ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯದ ಶೇ 54ರಷ್ಟು ಕುಟುಂಬಗಳ ಕನಿಷ್ಠ ಒಬ್ಬರು ಕೋವಿಡ್​​ನಿಂದ (Covid 19) ಬಳಲುತ್ತಿದ್ದಾರೆ ಎಂದು ಸಮೀಕ್ಷಾ ವರದಿಯೊಂದು ತಿಳಿಸಿದೆ. ರಾಜ್ಯದ ಹೆಚ್ಚಿನ ಕುಟುಂಬಗಳಲ್ಲಿ ಒಬ್ಬರು ಅಥವಾ ಅದಕ್ಕಿಂತ ಹೆಚ್ಚು ಮಂದಿ ಕೋವಿಡ್ ಅಥವಾ ಇತರ ವೈರಲ್, ಜ್ವರದಂಥ ರೋಗಲಕ್ಷಣ ಹೊಂದಿದ್ದಾರೆ ಎಂದು ಲೋಕಲ್ ಸರ್ಕಲ್ಸ್ ಸಮೀಕ್ಷೆ ತಿಳಿಸಿದೆ.

ಕೋವಿಡ್/ ಫ್ಲೂ /ವೈರಲ್ ಜ್ವರದ ಲಕ್ಷಣಗಳಾದ ಮೂಗು ಸ್ರವಿಸುವಿಕೆ, ಗಂಟಲು ನೋವು, ಕೆಮ್ಮು, ತಲೆನೋವು, ಕೀಲು ನೋವು, ದೇಹ ನೋವು, ಉಸಿರಾಟದ ಸಮಸ್ಯೆಗಳನ್ನು ಕುಟುಂಬದ ಸದಸ್ಯರು ಹೊಂದಿರುವುದಾಗಿ ಸಮೀಕ್ಷೆಯಲ್ಲಿ ಭಾಗವಹಿಸಿರುವವರು ತಿಳಿಸಿದ್ದಾರೆ.

ಒಟ್ಟು 3,783 ಸಮೀಕ್ಷೆಯಲ್ಲಿ ಭಾಗವಹಿಸಿದ್ದು, ಶೇ 23 ರಷ್ಟು ಜನರು ಅವರ ಮನೆಯಲ್ಲಿ ‘ನಾಲ್ಕು ಮಂದಿ ಅಥವಾ ಹೆಚ್ಚಿನ ವ್ಯಕ್ತಿಗಳು’ ಒಂದು ಅಥವಾ ಹೆಚ್ಚಿನ ಕೋವಿಡ್ / ವೈರಲ್ ಜ್ವರ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ. ಶೇ 23ರಷ್ಟು ಮಂದಿ ಎರಡು-ಮೂರು ಸದಸ್ಯರು ರೋಗ ಲಕ್ಷಣ ಹೊಂದಿರುವುದಾಗಿ ಉತ್ತರಿಸಿದ್ದಾರೆ. ಶೇ 8 ರಷ್ಟು ಮಂದಿ, ಒಬ್ಬ ವ್ಯಕ್ತಿ ರೋಗ ಲಕ್ಷಣ ಹೊಂದಿರುವ ಸುಳಿವು ನೀಡಿದ್ದಾರೆ ಮತ್ತು ಶೇ 46 ರಷ್ಟು ಜನರು ಕುಟುಂಬದಲ್ಲಿ ರೋಗ ಲಕ್ಷಣ ಹೊಂದಿರುವವರು ಯಾರೂ ಇಲ್ಲ ಎಂದು ಉತ್ತರಿಸಿದ್ದಾರೆ.

2023ರ ಆಗಸ್ಟ್‌ನಲ್ಲಿ ಕರ್ನಾಟಕದಲ್ಲಿ ಇದೇ ರೀತಿಯ ಸಮೀಕ್ಷೆಯನ್ನು ನಡೆಸಲಾಗಿತ್ತು. ಆಗ, ಶೇ 33 ಕುಟುಂಬಗಳ ಒಬ್ಬ ಅಥವಾ ಹೆಚ್ಚಿನ ವ್ಯಕ್ತಿಗಳು ಕೋವಿಡ್ ಅಥವಾ ವೈರಲ್ ರೋಗಲಕ್ಷಣಗ ಹೊಂದಿರುವುದು ಕಂಡುಬಂದಿತ್ತು. ಆದರೆ ಈ ಬಾರಿ ಪ್ರಮಾಣ ಶೇ 54 ರಷ್ಟಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ 298 ಹೊಸ ಕೊವಿಡ್​ ಕೇಸ್ ಪತ್ತೆ: ನಾಲ್ವರು ಸಾವು

ಕೊರೊನಾ ವೈರಸ್​​ನ ಒಮಿಕ್ರಾನ್ ರೂಪಾಂತರ ಜೆಎನ್​.1 ಹರಡುವಿಕೆ ತೀವ್ರಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಗುರುವಾರ ಹೊಸದಾಗಿ 298 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು.

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ