ರಾಜ್ಯದಲ್ಲಿ ಕೊರೊನಾ ಭೀತಿ: ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಪ್ರಮುಖ ಸೂಚನೆ

ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ, ಬೆಂಗಳೂರಿನಲ್ಲಿ ಹೆಚ್ಚಿನ ಸೋಂಕುಗಳು ವರದಿಯಾಗುತ್ತಿವೆ. ರಾಜ್ಯ ಸರ್ಕಾರ ಜನರಲ್ಲಿ ಆತಂಕವನ್ನು ತಪ್ಪಿಸಲು ಮತ್ತು ರೋಗವನ್ನು ನಿಯಂತ್ರಿಸಲು ಕ್ರಮಗಳನ್ನು ಕೈಗೊಂಡಿದೆ. ಮುಖ್ಯವಾಗಿ ಜನರು ಜಾಗರೂಕರಾಗಿರಬೇಕು, ಆರೋಗ್ಯ ಸಲಹೆಗಳನ್ನು ಪಾಲಿಸಬೇಕು ಮತ್ತು ಅಧಿಕೃತ ಮೂಲಗಳಿಂದ ಮಾತ್ರ ಮಾಹಿತಿ ಪಡೆಯಬೇಕು. ವಿದೇಶದಿಂದ ಬರುವ ಪ್ರಯಾಣಿಕರು ತಮ್ಮ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ತಿಳಿಸಬೇಕು. ರೋಗಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ರಾಜ್ಯದಲ್ಲಿ ಕೊರೊನಾ ಭೀತಿ: ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಪ್ರಮುಖ ಸೂಚನೆ
ಸಾಂದರ್ಭಿಕ ಚಿತ್ರ
Edited By:

Updated on: May 31, 2025 | 7:08 PM

ಬೆಂಗಳೂರು, ಮೇ 31: ಕರ್ನಾಟಕದಲ್ಲಿ ಕೊರೋನಾ (Covid) ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಮನೆ ಮಾಡಿದೆ. ರಾಜ್ಯ ಸರ್ಕಾರ (Karnataka Government) ಮತ್ತು ಆರೋಗ್ಯ ಇಲಾಖೆ (Health Department) ಕೊರೋನಾ ರೋಗ ಹಿಮ್ಮೆಟ್ಟಿಸಲು ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಇದೀಗ, ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಸುತ್ತೋಲೆ ಹೊರಡಿಸಿದೆ. ಜನರು ಆತಂಕ ಪಡಬಾರದು, ಜಾಗರೂಕರಾಗಿ ಇರಬೇಕು. ವಿದೇಶದಿಂದ ಬರುವ ಪ್ರಯಾಣಿಕರ ಮಾಹಿತಿಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿ ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.

ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು:

  1. ಜಾಗರೂಕರಾಗಿರಿ, ಆತಂಕಪಡಬೇಡಿ: ಅಧಿಕೃತ ಮೂಲಗಳ ಮೂಲಕ ಮಾಹಿತಿ ಪಡೆಯಿರಿ, ಪರಿಶೀಲಿಸದ ಮಾಹಿತಿಯನ್ನು ಪರಿಗಣಿಸದಿರಿ.
  2. ಆರೋಗ್ಯ ಸಿಬ್ಬಂದಿಯೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಿ: ಅಗತ್ಯ ಅನುಸರಣೆಗಾಗಿ ವಿದೇಶಗಳಿಂದ ಬರುವ ಪ್ರಯಾಣಿಕರ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ತಿಳಿಸಿ.
  3. ವಾಬ್ದಾರಿಯುತ ನಡವಳಿಕೆಯನ್ನು ಅಭ್ಯಾಸ ಮಾಡಿ: ಜನದಟ್ಟಣೆಯ ಸ್ಥಳಗಳಲ್ಲಿ mask ಧರಿಸಿ, ದೈಹಿಕ ಅಂತರವನ್ನು ಕಾಪಾಡಿಕೊಳ್ಳಿ, ಉತ್ತಮ ನೈರ್ಮಲ್ಯವನ್ನು ಅಭ್ಯಾಸ ಮಾಡಿ.
  4. ರೋಗಲಕ್ಷಣಗಳನ್ನು ಮೊದಲೇ ವರದಿ ಮಾಡಿ: ಜ್ವರ, ಕೆಮ್ಮು, ಎದೆನೋವು ಅಥವಾ ಉಸಿರಾಟದ ತೊಂದರೆ ಅನುಭವಿಸಿದರೆ ತಕ್ಷಣ ವೈದ್ಯಕೀಯ ಸಲಹೆ ಪಡೆಯಿರಿ.
  5. ಬೆಂಬಲ ಪರೀಕ್ಷೆ ಮತ್ತು ಕಣಾವಲು: Random ಮಾದರಿಗಳ ಪರೀಕ್ಷೆಗೆ ಸಹಕರಿಸಿ ಮತ್ತು ಕಣಾವಲುಗಾಗಿ ಮಾದರಿ ಸಂಗ್ರಹವನ್ನು ಅನುಮತಿಸಿ.
  6. ಸಮುದಾಯ ಮೇಲ್ವಿಚಾರಣೆ: IHIP ಪೋರ್ಟಲ್‌ನ ಸಮುದಾಯ ಮೇಲ್ವಿಚಾರಣಾ ಉಪಕರಣದ ಮೂಲಕ COVID-19 ತರಹದ ರೋಗಲಕ್ಷಣಗಳಲ್ಲಿ ಅಸಾಮಾನ್ಯ ಹೆಚ್ಚಳವನ್ನು ವರದಿ ಮಾಡಿ.
  7. ಶಾಲೆಗಳಲ್ಲಿ ಕಣಾವಲು: ಅನಾರೋಗ್ಯ ಪೀಡಿತ ಮಕ್ಕಳನ್ನು ಮನೆಯಲ್ಲಿಯೇ ಇರಿಸಿ, ರೋಗಲಕ್ಷಣಗಳಿಗಾಗಿ ವಿದ್ಯಾರ್ಥಿಗಳನ್ನು ಮೇಲ್ವಿಚಾರಣೆ ಮಾಡಿ, ನೈರ್ಮಲ್ಯವನ್ನು ಉತ್ತೇಜಿಸಿ, ಸರಿಯಾದ ಗಾಳಿಯನ್ನು ಖಚಿತಪಡಿಸಿಕೊಳ್ಳಿ.
  8. ನೈರ್ಮಲ್ಯ ಮತ್ತು ಪರಿಸರ ಜಾಗೃತಿ: ಉತ್ತಮ ನೈರ್ಮಲ್ಯವನ್ನು ಅಭ್ಯಾಸ ಮಾಡಿ, ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡಿ, ಸಾರ್ವಜನಿಕ ಪ್ರದೇಶಗಳನ್ನು ಸ್ವಚ್ಚವಾಗಿಡಿ.
  9. ಸರ್ಕಾರದ ಪ್ರತಿಕ್ರಿಯೆ: ಸರ್ಕಾರ ಎಚ್ಚರವಾಗಿದೆ; ಸಾಮಾನ್ಯ ಜೀವನವನ್ನು ನಡೆಸಿ ಆದರೆ ಸಲಹೆಗಳನ್ನು ಅನುಸರಿಸಿ.
  10. ಆರೋಗ್ಯ ಸಲಹೆಗಾಗಿ ಉಚಿತ ಸಹಾಯವಾಣಿ ಸಂಖ್ಯೆ 1800 425 8330 ಗೆ ಕರೆ ಮಾಡಿ ಹಾಗೂ ರೋಗಿಗಳ ತುರ್ತು ಸಾಗಣೆಗೆ 108 ಗೆ ಕರೆ ಮಾಡಿ.

ಇದನ್ನೂ ಓದಿ: ಕರ್ನಾಟಕದಲ್ಲಿ ಕೊರೊನಾ ಅಬ್ಬರ, ಆರೋಗ್ಯ ಇಲಾಖೆಯಿಂದ ಶಾಲೆಗಳಿಗೆ ಗೈಡ್​​ಲೈನ್ಸ್

ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ

ರಾಜ್ಯದಲ್ಲಿ ಮಳೆ ನಡುವೆ ಕೊರೊನಾ ಕ್ರಿಮಿಯ ಅಬ್ಬರ ಜೋರಾಗುತ್ತಿದೆ. ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದರ ಜೊತೆ ದೇಶದ ಹಲವು ರಾಜ್ಯದಲ್ಲೂ ಸೋಂಕಿನ ಸಂಖ್ಯೆ ಹೆಚ್ಚು ಆಗುತ್ತಿರುವುದು ತಲೆ ನೋವಾಗಿ ಪರಿಣಮಿಸಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

ಇದನ್ನೂ ಓದಿ
ರಾಜ್ಯದಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿ, ಟೆಸ್ಟ್​ ಕಡ್ಡಾಯಗೊಳಿಸಿದ ಕೇಂದ್ರ
ಬೆಂಗಳೂರಲ್ಲಿ 200 ರ ಗಡಿ ದಾಟಿದ ಕೊರೊನಾ ಪ್ರಕರಣ: ರಾಜಧಾನಿಯೇ ಹಾಟ್​ಸ್ಪಾಟ್
ಕೊರೊನಾ ಹೊಸ ರೂಪಾಂತರ ಎಷ್ಟು ಅಪಾಯಕಾರಿ?
ಮತ್ತೆ ಬಂತು ಮಹಾಮಾರಿ, ಈ ಬಾರಿ ಈ ಎಚ್ಚರವಹಿಸಲೇಬೇಕು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:05 pm, Sat, 31 May 25