AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢ, 476 ಜನರು ನಿಧನ

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 34,635 ಜನರು ಕೊವಿಡ್ ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ.

Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢ, 476 ಜನರು ನಿಧನ
ಪ್ರಾತಿನಿಧಿಕ ಚಿತ್ರ
guruganesh bhat
|

Updated on:May 17, 2021 | 8:53 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಸೋಂಕಿನಿಂದ 476 ಜನರು ನಿಧನರಾಗಿದ್ದಾರೆ. ಇದೇ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 13,338 ಜನರಿಗೆ ಕೊವಿಡ್ ದೃಢಪಟ್ಟಿದ್ದು, 239 ಜನರು ಅಸುನೀಗಿದ್ದಾರೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 34,635 ಜನರು ಕೊವಿಡ್ ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಪತ್ತೆಯಾದ ಕೊರೊನಾ ಸೋಂಕಿತರನ್ನೂ ಸೇರಿಸಿ ಈವರೆಗೆ ರಾಜ್ಯದ ಕೊವಿಡ್ ಸೋಂಕಿತರ ಸಂಖ್ಯೆ 22,42,065ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಈವರೆಗೆ 16,16,092 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 22,313 ಜನರ ಸಾವನ್ನಪ್ಪಿದಂತಾಗಿದೆ. ಸದ್ಯ ರಾಜ್ಯದ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ 6, 03,639 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾವಾರು ಸೋಂಕಿತರ ವಿವರ ಹೀಗಿದೆ ಬೆಂಗಳೂರು ನಗರ ಜಿಲ್ಲೆ 13,338, ಹಾಸನ 2,324 , ಬಳ್ಳಾರಿ 2,322, ಮೈಸೂರು 1,980, ತುಮಕೂರು 1,915, ಬೆಳಗಾವಿ 1,748, ಶಿವಮೊಗ್ಗ 1,322, ಉತ್ತರ ಕನ್ನಡ 1,288, ಮಂಡ್ಯ 1,087, ಧಾರವಾಡ 972, ಉಡುಪಿ 897, ದಕ್ಷಿಣ ಕನ್ನಡ 817, ಚಿಕ್ಕಬಳ್ಳಾಪುರ 799, ದಾವಣಗೆರೆ 747,  ಚಿಕ್ಕಮಗಳೂರು 732, ಕೋಲಾರ 713, ಕಲಬುರಗಿ 695, ರಾಯಚೂರು 562, ಚಾಮರಾಜನಗರ 516, ಗದಗ 475, ಕೊಪ್ಪಳ 470, ಕೊಡಗು 442, ಬೆಂಗಳೂರು ಗ್ರಾಮಾಂತರ 426, ಚಿತ್ರದುರ್ಗ 407, ರಾಮನಗರ 397, ಯಾದಗಿರಿ 360, ಬಾಗಲಕೋಟೆ 305, ವಿಜಯಪುರ 233, ಬೀದರ್ 172 , ಹಾವೇರಿ ಜಿಲ್ಲೆಯಲ್ಲಿ ಇಂದು 142 ಜನರಿಗೆ ಕೊರೊನಾ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಮೃತರ ವಿವರ

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 476 ಜನರ ಸಾವನ್ನಪ್ಪಿದ್ದು,  ಬೆಂಗಳೂರು ನಗರ ಜಿಲ್ಲೆಯಲ್ಲಿ  239, ಹಾಸನ ಜಿಲ್ಲೆ  29 , ಬಳ್ಳಾರಿ ಜಿಲ್ಲೆ 17,  ಕಲಬುರಗಿ, ಉತ್ತರ ಕನ್ನಡ , ಶಿವಮೊಗ್ಗ ಜಿಲ್ಲೆ 15, ತುಮಕೂರು ಜಿಲ್ಲೆ 14, ಬೆಂಗಳೂರು ಗ್ರಾಮಾಂತರ ಜಿಲ್ಲೆ 13, ಹಾವೇರಿ, ಮಂಡ್ಯ ಜಿಲ್ಲೆ 10, ವಿಜಯಪುರ ಜಿಲ್ಲೆ 9, ಚಾಮರಾಜನಗರ, ಕೋಲಾರ ಜಿಲ್ಲೆ 8, ಬೆಳಗಾವಿ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ರಾಮನಗರ, ಯಾದಗಿರಿ  ಜಿಲ್ಲೆ 6, ಧಾರವಾಡ, ಮೈಸೂರು, ಉಡುಪಿ ಜಿಲ್ಲೆ 5, ಬಾಗಲಕೋಟೆ, ಬೀದರ್, ಗದಗ, ಕೊಡಗು, ರಾಯಚೂರು ಜಿಲ್ಲೆ 4, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆ 3, ಕೊಪ್ಪಳ ಜಿಲ್ಲೆ 2, ಚಿತ್ರದುರ್ಗ ಜಿಲ್ಲೆಯಲ್ಲಿ ಓರ್ವ ಕೊವಿಡ್​ನಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲೇ ಉತ್ಪಾದನೆ ಆಗಲಿದೆ ರಾಜ್ಯಕ್ಕೆ ಅಗತ್ಯವಿರುವ ಸ್ಪುಟ್ನಿಕ್ ಕೊವಿಡ್ ಲಸಿಕೆ

ಕೊವಿಡ್​ನಿಂದ ಜನರನ್ನು ಉಳಿಸಲು ಏನ್ಮಾಡ್ತಿದ್ದೀರಾ? ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಪ್ರಶ್ನೆ

(Karnataka Covid 19 update 38603 new cases and 476 deaths in last 24 hours)

Published On - 8:30 pm, Mon, 17 May 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್