AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿಂದು 35,297 ಕೊರೊನಾ ಕೇಸ್​ಗಳು ದಾಖಲು; ರಾಜ್ಯ ರಾಜಧಾನಿಯಲ್ಲೇ ಹೆಚ್ಚು, ಹಾವೇರಿಯಲ್ಲಿ ಕಡಿಮೆ

ರಾಜ್ಯದಲ್ಲಿ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿನ ಪ್ರಕರಣಗಳು 50 ಸಾವಿರದವರೆಗೆ ತಲುಪಿದ್ದು ತೀವ್ರ ಆತಂಕ ಮೂಡಿಸಿತ್ತು. ಇದೀಗ ಸ್ವಲ್ಪ ಕಡಿಮೆಯಾಗಿದ್ದು, ಇಂದು ಒಂದೇ ದಿನ 35 ಸಾವಿರ ಕೇಸ್​ಗಳು ದಾಖಲಾಗಿವೆ.

ರಾಜ್ಯದಲ್ಲಿಂದು 35,297 ಕೊರೊನಾ ಕೇಸ್​ಗಳು ದಾಖಲು; ರಾಜ್ಯ ರಾಜಧಾನಿಯಲ್ಲೇ ಹೆಚ್ಚು, ಹಾವೇರಿಯಲ್ಲಿ ಕಡಿಮೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 13, 2021 | 8:46 PM

Share

ಬೆಂಗಳೂರು: ರಾಜ್ಯದಲ್ಲಿ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿತರ ಸಂಖ್ಯೆ ತುಸು ತಗ್ಗಿದಂತೆ ಕಾಣುತ್ತಿದೆ. ಇಂದು 35,297 ಜನರಲ್ಲಿ ಕೊರೊನಾ ದೃಢಪಟ್ಟಿದೆ. ಹಾಗೇ ಕಳೆದ 24ಗಂಟೆಯಲ್ಲಿ ಸೋಂಕಿನಿಂದ 344 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟೂ ಕೊರೊನಾ ಸೋಂಕಿತರ ಸಂಖ್ಯೆ 20,88,488ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 20,712 ಕ್ಕೆ ತಲುಪಿದೆ. ಇಂದು ಒಂದೇ ದಿನ 34057 ಮಂದಿ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದು  ಈವರೆಗೆ ಕೊವಿಡ್​ ಸೋಂಕಿನಿಂದ ಚೇತರಿಸಿಕೊಂಡು ಡಿಸ್​​ಚಾರ್ಜ್ ಆದವರು 14,74,678 ಮಂದಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿನ ಪ್ರಕರಣಗಳು 50 ಸಾವಿರದವರೆಗೆ ತಲುಪಿದ್ದು ತೀವ್ರ ಆತಂಕ ಮೂಡಿಸಿತ್ತು. ಇದೀಗ ಸ್ವಲ್ಪ ಕಡಿಮೆಯಾಗಿದ್ದು, ಇಂದು ಒಂದೇ ದಿನ 35 ಸಾವಿರ ಕೇಸ್​ಗಳು ದಾಖಲಾಗಿವೆ. 5,93,078 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಉಳಿದೆಲ್ಲ ಜಿಲ್ಲೆಗಳಿಗಿಂತ ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್​ ಕಡಿಮೆಯಿದ್ದರೂ ಇಂದು ಒಂದೇ ದಿನ 15,191 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯರಾಜಧಾನಿಯ ಒಟ್ಟು ಸೋಂಕಿತರ ಸಂಖ್ಯೆ 10,14,996ಕ್ಕೆ ಏರಿಕೆಯಾಗಿದೆ. ಅವರಲ್ಲಿ 6,46,305 ಜನರು ಗುಣಮುಖರಾಗಿದ್ದಾರೆ. ಹಾಗೇ, ಬೆಂಗಳೂರಿನಲ್ಲಿ ಇಂದು 161 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 9,125 ಕ್ಕೆ ತಲುಪಿದೆ.

ಉಳಿದಂತೆ ಬಳ್ಳಾರಿ 1865, ತುಮಕೂರು 1798, ಮೈಸೂರು 1260, ಮಂಡ್ಯ 1153, ಬೆಂಗಳೂರು ಗ್ರಾಮಾಂತರ 1079, ಉಡುಪಿ 891, ಶಿವಮೊಗ್ಗ 880, ಚಾಮರಾಜನಗರ 842, ದಕ್ಷಿಣ ಕನ್ನಡ 812, ಹಾಸನ 792, ಉತ್ತರ ಕನ್ನಡ 791, ಧಾರವಾಡ 737, ಬೆಳಗಾವಿ 713, ಯಾದಗಿರಿ 675, ಬಾಗಲಕೋಟೆ 520, ರಾಮನಗರ 518, ಕಲಬುರಗಿ 497, ದಾವಣಗೆರೆ 494, ಕೋಲಾರ 488, ಚಿಕ್ಕಮಗಳೂರು 445, ಕೊಪ್ಪಳ 437, ಗದಗ 430, ಕೊಡಗು 425, ಚಿಕ್ಕಬಳ್ಳಾಪುರ 354, ವಿಜಯಪುರ 331, ಚಿತ್ರದುರ್ಗ 292, ಬೀದರ್ 257, ರಾಯಚೂರು 170, ಹಾವೇರಿಯಲ್ಲಿ 160 ಕೇಸ್​ಗಳು ಇಂದು ದಾಖಲಾಗಿವೆ.

ಇದನ್ನೂ ಓದಿ: ಕೊವಿಡ್ ದೃಢಪಟ್ಟ 1 ಗಂಟೆಯೊಳಗೆ ಐಸೋಲೇಶನ್ ಕಿಟ್ ಮನೆ ಬಾಗಿಲಿಗೆ; ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

Covid-19 Positivity Rate: ಕೊವಿಡ್ ಪಾಸಿಟಿವಿಟಿ ರೇಟ್​ನಲ್ಲಿ ಉತ್ತರ ಕನ್ನಡ ನಂ.1: ಇದು ಗಾಬರಿ ಹುಟ್ಟಿಸುವ ವಿಚಾರ

Published On - 8:41 pm, Thu, 13 May 21

Follow Us
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ