AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 1102 ಮಂದಿಗೆ ಕೊರೊನಾ ಸೋಂಕು, 17 ಸಾವು

ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 0.64 ಇದ್ದರೆ, ಸೋಂಕಿತರ ಸಾವಿನ ಸರಾಸರಿ ಶೇ 1.54 ಇದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 17,058.

Covid 19 Karnataka Update: ಕರ್ನಾಟಕದಲ್ಲಿ 1102 ಮಂದಿಗೆ ಕೊರೊನಾ ಸೋಂಕು, 17 ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 08, 2021 | 10:47 PM

Share

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ ಒಟ್ಟು 1102 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 17 ಮಂದಿ ಸಾವನ್ನಪ್ಪಿದ್ದಾರೆ. 1458 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 0.64 ಇದ್ದರೆ, ಸೋಂಕಿತರ ಸಾವಿನ ಸರಾಸರಿ ಶೇ 1.54 ಇದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 17,058. ರಾಜ್ಯದಲ್ಲಿ ಈವರೆಗೆ 29,58,090 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,03,547 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 37,458 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 338 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ. 277 ಮಂದಿ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಒಟ್ಟು 7119 ಸಕ್ರಿಯ ಪ್ರಕರಣಗಳಿವೆ. ಈವರೆಗೆ 12,40,310 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,17,150 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 16,040 ಮಂದಿ ಮೃತಪಟ್ಟಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 338, ದಕ್ಷಿಣ ಕನ್ನಡ 200, ಉಡುಪಿ 133, ಮೈಸೂರು 64, ಶಿವಮೊಗ್ಗ 55, ಚಿಕ್ಕಮಗಳೂರು, ಹಾಸನ 51, ಉತ್ತರ ಕನ್ನಡ 40, ಕೊಡಗು 33, ತುಮಕೂರು 31, ಮಂಡ್ಯ 20, ಬೆಂಗಳೂರು ಗ್ರಾಮಾಂತರ, ಕೋಲಾರ 12, ಚಾಮರಾಜನಗರ 8, ಬಳ್ಳಾರಿ 6, ಬೆಳಗಾವಿ 4, ಚಿಕ್ಕಬಳ್ಳಾಪುರ 5, ಚಿತ್ರದುರ್ಗ 6, ದಾವಣಗೆರೆ 7, ಧಾರವಾಡ 5, ಹಾವೇರಿ 2, ಕಲಬುರಗಿ 7, ಕೊಪ್ಪಳ 4, ರಾಯಚೂರು 3, ರಾಮನಗರ 4, ವಿಜಯಪುರ 1.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ಬೆಂಗಳೂರು ನಗರ 5, ಉತ್ತರ ಕನ್ನಡ 4, ದಕ್ಷಿಣ ಕನ್ನಡ 3, ಮೈಸೂರು 2, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ 1.

ಕೊರೊನಾ ಸೋಂಕಿಗೆ ಹೆಣ್ಣುಮಗು ಸಾವು

ವಿಜಯಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ 3ನೇ ಅಲೆಗೆ 2 ವರ್ಷದ ಹೆಣ್ಣುಮಗುವೊಂದು ಮೃತಪಟ್ಟಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್​ ಹೇಳಿದ್ದಾರೆ. ಆಗಸ್ಟ್​ 20ರಂದು ಉಸಿರಾಟದ ಸಮಸ್ಯೆಯಿಂದ ಬಾಲಕಿ ಸಾವನ್ನಪ್ಪಿದ್ದಳು. ಆರ್​ಟಿಪಿಸಿಆರ್​ ಟೆಸ್ಟ್​ನಲ್ಲಿ ಕೊವಿಡ್ ನೆಗೆಟಿವ್ ಬಂದಿತ್ತು. ಆದರೆ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದರಿಂದ ಕೊವಿಡ್​ ಎಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.

(Karnataka Covid Numbers 1102 infected 17 deaths on September 8)

ಇದನ್ನೂ ಓದಿ: ಬಿಬಿಎಂಪಿಯಿಂದ ಮನೆ ಮನೆ ಆರೋಗ್ಯ ಸಮೀಕ್ಷೆ; ಬೆಂಗಳೂರಿನಲ್ಲಿ 22,362 ಕೊರೊನಾ ಸೋಂಕಿತರು ಪತ್ತೆ

ಇದನ್ನೂ ಓದಿ: ಹೈಕೋರ್ಟ್ ಸುದ್ದಿಗಳು: ಕೊವಿಡ್ ಚಿಕಿತ್ಸೆಗೆ ಶುಲ್ಕ ನಿಗದಿ ಬಗ್ಗೆ ಸೂಕ್ತ ಪ್ರಚಾರ ನೀಡಲು ಸರ್ಕಾರಕ್ಕೆ ಸೂಚನೆ

Published On - 10:44 pm, Wed, 8 September 21

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!