AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೂ ದ್ವಿಶತಕ! ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆ: ಡಿಸ್ಚಾರ್ಜ್​ 3 ಸಾವಿರದತ್ತ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 204 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ ಯಾದಗಿರಿಯಲ್ಲಿ ಅತಿ ಹೆಚ್ಚು ಅಂದ್ರೆ 66 ಕೇಸ್​ ಪತ್ತೆಯಾಗಿದೆ. ಯಾದಗಿರಿಯಲ್ಲಿ 66, ಬೆಂಗಳೂರಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 14, ಬೀದರ್​ನಲ್ಲಿ​ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9 ಕೇಸ್​ ಪತ್ತೆಯಾಗಿದ್ರೆ ಕೋಲಾರದಲ್ಲಿ 6, ಮೈಸೂರು ಮತ್ತು ರಾಮನಗರದಲ್ಲಿ ತಲಾ 5 ಪ್ರಕರಣ, ವಿಜಯಪುರದಲ್ಲಿ 4, ಬಾಗಲಕೋಟೆ ಹಾಗೂ ಉತ್ತರ ಕನ್ನಡದಲ್ಲಿ ತಲಾ […]

ಇಂದೂ ದ್ವಿಶತಕ! ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆ: ಡಿಸ್ಚಾರ್ಜ್​ 3 ಸಾವಿರದತ್ತ
ಸಾಧು ಶ್ರೀನಾಥ್​
|

Updated on:Jun 11, 2020 | 6:29 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 204 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ ಯಾದಗಿರಿಯಲ್ಲಿ ಅತಿ ಹೆಚ್ಚು ಅಂದ್ರೆ 66 ಕೇಸ್​ ಪತ್ತೆಯಾಗಿದೆ.

ಯಾದಗಿರಿಯಲ್ಲಿ 66, ಬೆಂಗಳೂರಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 14, ಬೀದರ್​ನಲ್ಲಿ​ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9 ಕೇಸ್​ ಪತ್ತೆಯಾಗಿದ್ರೆ ಕೋಲಾರದಲ್ಲಿ 6, ಮೈಸೂರು ಮತ್ತು ರಾಮನಗರದಲ್ಲಿ ತಲಾ 5 ಪ್ರಕರಣ, ವಿಜಯಪುರದಲ್ಲಿ 4, ಬಾಗಲಕೋಟೆ ಹಾಗೂ ಉತ್ತರ ಕನ್ನಡದಲ್ಲಿ ತಲಾ 3 ಕೇಸ್ ಪತ್ತೆಯಾಗಿದೆ. ಜೊತೆಗೆ ದಕ್ಷಿಣ ಕನ್ನಡ, ಹಾಸನ, ಧಾರವಾಡ ತಲಾ 2 ಪ್ರಕರಣಗಳು ಪತ್ತೆಯಾಗಿದೆ. ಇದರೊಟ್ಟಿಗೆ ಬೆಂಗಳೂರು ಗ್ರಾಮಾಂತರ, ಕೊಪ್ಪಳ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 1 ಕೇಸ್​ ವರದಿಯಾಗಿದೆ.

ಸೋಂಕಿನಿಂದ ಇವತ್ತು ಮೂವರು ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲೇ ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾ ಮಹಾಮಾರಿ 72 ಜನರ ಬಲಿಪಡೆದಿದೆ. ಜೊತೆಗೆ ಒಟ್ಟು 6,245 ಸೋಂಕಿತರ ಪೈಕಿ 2,976 ಜನರು ಗುಣಮುಖರಾಗಿದ್ದು ಡಿಸ್ಚಾರ್ಜ್​ ಕೂಡ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 5:57 pm, Thu, 11 June 20

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?