AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೂ ದ್ವಿಶತಕ! ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆ: ಡಿಸ್ಚಾರ್ಜ್​ 3 ಸಾವಿರದತ್ತ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 204 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ ಯಾದಗಿರಿಯಲ್ಲಿ ಅತಿ ಹೆಚ್ಚು ಅಂದ್ರೆ 66 ಕೇಸ್​ ಪತ್ತೆಯಾಗಿದೆ. ಯಾದಗಿರಿಯಲ್ಲಿ 66, ಬೆಂಗಳೂರಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 14, ಬೀದರ್​ನಲ್ಲಿ​ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9 ಕೇಸ್​ ಪತ್ತೆಯಾಗಿದ್ರೆ ಕೋಲಾರದಲ್ಲಿ 6, ಮೈಸೂರು ಮತ್ತು ರಾಮನಗರದಲ್ಲಿ ತಲಾ 5 ಪ್ರಕರಣ, ವಿಜಯಪುರದಲ್ಲಿ 4, ಬಾಗಲಕೋಟೆ ಹಾಗೂ ಉತ್ತರ ಕನ್ನಡದಲ್ಲಿ ತಲಾ […]

ಇಂದೂ ದ್ವಿಶತಕ! ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆ: ಡಿಸ್ಚಾರ್ಜ್​ 3 ಸಾವಿರದತ್ತ
ಸಾಧು ಶ್ರೀನಾಥ್​
|

Updated on:Jun 11, 2020 | 6:29 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 204 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ ಯಾದಗಿರಿಯಲ್ಲಿ ಅತಿ ಹೆಚ್ಚು ಅಂದ್ರೆ 66 ಕೇಸ್​ ಪತ್ತೆಯಾಗಿದೆ.

ಯಾದಗಿರಿಯಲ್ಲಿ 66, ಬೆಂಗಳೂರಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 14, ಬೀದರ್​ನಲ್ಲಿ​ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9 ಕೇಸ್​ ಪತ್ತೆಯಾಗಿದ್ರೆ ಕೋಲಾರದಲ್ಲಿ 6, ಮೈಸೂರು ಮತ್ತು ರಾಮನಗರದಲ್ಲಿ ತಲಾ 5 ಪ್ರಕರಣ, ವಿಜಯಪುರದಲ್ಲಿ 4, ಬಾಗಲಕೋಟೆ ಹಾಗೂ ಉತ್ತರ ಕನ್ನಡದಲ್ಲಿ ತಲಾ 3 ಕೇಸ್ ಪತ್ತೆಯಾಗಿದೆ. ಜೊತೆಗೆ ದಕ್ಷಿಣ ಕನ್ನಡ, ಹಾಸನ, ಧಾರವಾಡ ತಲಾ 2 ಪ್ರಕರಣಗಳು ಪತ್ತೆಯಾಗಿದೆ. ಇದರೊಟ್ಟಿಗೆ ಬೆಂಗಳೂರು ಗ್ರಾಮಾಂತರ, ಕೊಪ್ಪಳ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 1 ಕೇಸ್​ ವರದಿಯಾಗಿದೆ.

ಸೋಂಕಿನಿಂದ ಇವತ್ತು ಮೂವರು ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲೇ ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾ ಮಹಾಮಾರಿ 72 ಜನರ ಬಲಿಪಡೆದಿದೆ. ಜೊತೆಗೆ ಒಟ್ಟು 6,245 ಸೋಂಕಿತರ ಪೈಕಿ 2,976 ಜನರು ಗುಣಮುಖರಾಗಿದ್ದು ಡಿಸ್ಚಾರ್ಜ್​ ಕೂಡ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 5:57 pm, Thu, 11 June 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ