ಇಂದೂ ದ್ವಿಶತಕ! ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆ: ಡಿಸ್ಚಾರ್ಜ್​ 3 ಸಾವಿರದತ್ತ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 204 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ ಯಾದಗಿರಿಯಲ್ಲಿ ಅತಿ ಹೆಚ್ಚು ಅಂದ್ರೆ 66 ಕೇಸ್​ ಪತ್ತೆಯಾಗಿದೆ. ಯಾದಗಿರಿಯಲ್ಲಿ 66, ಬೆಂಗಳೂರಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 14, ಬೀದರ್​ನಲ್ಲಿ​ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9 ಕೇಸ್​ ಪತ್ತೆಯಾಗಿದ್ರೆ ಕೋಲಾರದಲ್ಲಿ 6, ಮೈಸೂರು ಮತ್ತು ರಾಮನಗರದಲ್ಲಿ ತಲಾ 5 ಪ್ರಕರಣ, ವಿಜಯಪುರದಲ್ಲಿ 4, ಬಾಗಲಕೋಟೆ ಹಾಗೂ ಉತ್ತರ ಕನ್ನಡದಲ್ಲಿ ತಲಾ […]

ಇಂದೂ ದ್ವಿಶತಕ! ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆ: ಡಿಸ್ಚಾರ್ಜ್​ 3 ಸಾವಿರದತ್ತ
ಸಾಧು ಶ್ರೀನಾಥ್​

Updated on: Jun 11, 2020 | 6:29 PM

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 204 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ ಯಾದಗಿರಿಯಲ್ಲಿ ಅತಿ ಹೆಚ್ಚು ಅಂದ್ರೆ 66 ಕೇಸ್​ ಪತ್ತೆಯಾಗಿದೆ.

ಯಾದಗಿರಿಯಲ್ಲಿ 66, ಬೆಂಗಳೂರಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 14, ಬೀದರ್​ನಲ್ಲಿ​ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9 ಕೇಸ್​ ಪತ್ತೆಯಾಗಿದ್ರೆ ಕೋಲಾರದಲ್ಲಿ 6, ಮೈಸೂರು ಮತ್ತು ರಾಮನಗರದಲ್ಲಿ ತಲಾ 5 ಪ್ರಕರಣ, ವಿಜಯಪುರದಲ್ಲಿ 4, ಬಾಗಲಕೋಟೆ ಹಾಗೂ ಉತ್ತರ ಕನ್ನಡದಲ್ಲಿ ತಲಾ 3 ಕೇಸ್ ಪತ್ತೆಯಾಗಿದೆ. ಜೊತೆಗೆ ದಕ್ಷಿಣ ಕನ್ನಡ, ಹಾಸನ, ಧಾರವಾಡ ತಲಾ 2 ಪ್ರಕರಣಗಳು ಪತ್ತೆಯಾಗಿದೆ. ಇದರೊಟ್ಟಿಗೆ ಬೆಂಗಳೂರು ಗ್ರಾಮಾಂತರ, ಕೊಪ್ಪಳ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 1 ಕೇಸ್​ ವರದಿಯಾಗಿದೆ.

ಸೋಂಕಿನಿಂದ ಇವತ್ತು ಮೂವರು ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲೇ ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾ ಮಹಾಮಾರಿ 72 ಜನರ ಬಲಿಪಡೆದಿದೆ. ಜೊತೆಗೆ ಒಟ್ಟು 6,245 ಸೋಂಕಿತರ ಪೈಕಿ 2,976 ಜನರು ಗುಣಮುಖರಾಗಿದ್ದು ಡಿಸ್ಚಾರ್ಜ್​ ಕೂಡ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 5:57 pm, Thu, 11 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us