AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಇಂದು 22,823 ಜನರಿಗೆ ಕೊವಿಡ್ ದೃಢ, 52,253 ಜನರು ಗುಣಮುಖ

Bengaluru Covid Update: ಬೆಂಗಳೂರು ನಗರ ಜಿಲ್ಲೆಯಲ್ಲಿ 5736 ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಇಂದು ಒಂದೇ ದಿನ 31,237 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಇಂದು 22,823 ಜನರಿಗೆ ಕೊವಿಡ್ ದೃಢ, 52,253 ಜನರು ಗುಣಮುಖ
ಡಾ.ಕೆ. ಸುಧಾಕರ್​
guruganesh bhat
|

Updated on:May 28, 2021 | 9:12 PM

Share

ಬೆಂಗಳೂರು: ಕರ್ನಾಟಕದಲ್ಲಿ ಇಂದು ಒಂದೇ ದಿನ 22,823 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 52,253 ಜನರು ಕೊವಿಡ್​ನಿಂದ ಗುಣಮುಖರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 5736 ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಇಂದು ಒಂದೇ ದಿನ 31,237 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ರಾಜ್ಯದಲ್ಲಿ ಇಂದು ಒಂದೇ ದಿನ  ಇದೇ ಅವಧಿಯಲ್ಲಿ 1,38,983 ಜನರಿಗೆ ಕೊವಿಡ್ ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಲ್ಲಿ  ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.16.42ರಷ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷ ಒಳಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿಂದು ಒಂದೇ ದಿನ ಕೊರೊನಾಗೆ 401 ಜನರ ನಿಧನರಾಗಿದ್ದಾರೆ.  ಬಾಗಲಕೋಟೆ 252, ಬಳ್ಳಾರಿ 782, ಬೆಳಗಾವಿ 1,319, ಬೆಂಗಳೂರು ಗ್ರಾಮಾಂತರ 514, ಬೆಂಗಳೂರು ನಗರ 5,736 ಬೀದರ್ 64, ಚಾಮರಾಜನಗರ 318, ಚಿಕ್ಕಬಳ್ಳಾಪುರ 337, ಚಿಕ್ಕಮಗಳೂರು 559, ಚಿತ್ರದುರ್ಗ 489, ದಕ್ಷಿಣ ಕನ್ನಡ 799, ದಾವಣಗೆರೆ 522, ಧಾರವಾಡ 700, ಗದಗ 302,​  ಹಾಸನ 1170, ಹಾವೇರಿ 137, ಕಲಬುರಗಿ 91, ಕೊಡಗು 245, ಕೋಲಾರ 656, ಕೊಪ್ಪಳ 339,  ಮಂಡ್ಯ 825, ಮೈಸೂರು 1,677, ರಾಯಚೂರು 365, ರಾಮನಗರ 339, ಶಿವಮೊಗ್ಗ 1135, ತುಮಕೂರು 1,326, ಉಡುಪಿ 766, ಉತ್ತರ ಕನ್ನಡ 692, ವಿಜಯಪುರ 183, ಯಾದಗಿರಿ ಜಿಲ್ಲೆಯಲ್ಲಿ ಇಂದು 184 ಕೊರೊನಾ ಪ್ರಕರಣ ಪತ್ತೆಯಾಗಿದೆ.

ಜಿಲ್ಲಾವಾರು ಮೃತರ ವಿವರ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 401 ಜನರ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 192, ಮೈಸೂರು ಜಿಲ್ಲೆ 20 , ಬಳ್ಳಾರಿ ಜಿಲ್ಲೆ 17, ತುಮಕೂರು ಜಿಲ್ಲೆ 15, ಧಾರವಾಡ ಜಿಲ್ಲೆ 14, ಹಾಸನ, ಶಿವಮೊಗ್ಗ ಜಿಲ್ಲೆ 13, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ ಜಿಲ್ಲೆ 11, ಬೆಳಗಾವಿ ಜಿಲ್ಲೆ 10, ಚಿಕ್ಕಬಳ್ಳಾಪುರ, ಯಾದಗಿರಿ ಜಿಲ್ಲೆ 8, ಮಂಡ್ಯ, ಚಿಕ್ಕಮಗಳೂರು ಜಿಲ್ಲೆ 7, ಕೊಪ್ಪಳ ಜಿಲ್ಲೆ 6, ದಕ್ಷಿಣ ಕನ್ನಡ, ಗದಗ, ಹಾವೇರಿ, ಕಲಬುರಗಿ, ಉಡುಪಿ ಜಿಲ್ಲೆ 5, ವಿಜಯಪುರ, ರಾಯಚೂರು, ಚಾಮರಾಜನಗರ ಜಿಲ್ಲೆ 4, ಬೀದರ್, ಬಾಗಲಕೋಟೆ ಜಿಲ್ಲೆ 3, ಚಿತ್ರದುರ್ಗ, ಕೊಡಗು, ದಾವಣಗೆರೆ ಜಿಲ್ಲೆ 3 ಜನರು ನಿಧನರಾಗಿದ್ದಾರೆ.

ಬಾಕಿ ಹಣ ಪಾವತಿಸಿಲ್ಲ ಎಂದು ಕೊವಿಡ್ ಸೋಂಕಿತರ ಮೃತದೇಹ ಹಸ್ತಾಂತರಿಸಲು ತೊಂದರೆ ಮಾಡುವಂತಿಲ್ಲ

ಬಾಕಿ ಇರುವ ಚಿಕಿತ್ಸಾ ಶುಲ್ಕವನ್ನು ಪಾವತಿ ಮಾಡದ ಕಾರಣ ನೀಡಿ ಕೋವಿಡ್‌ ಸೋಂಕಿತರ ಮೃತ ದೇಹವನ್ನು ಹಸ್ತಾಂತರಿಸುವಲ್ಲಿ ಆಸ್ಪತ್ರೆಗಳು ವಿಳಂಬ ಮಾಡುವಂತಿಲ್ಲ ಅಥವಾ ನಿರಾಕರಿಸುವಂತಿಲ್ಲ ಎಂದು ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ್ ನಾರಾಯಣ ಸರ್ಕಾರಿ ಆದೇಶವನ್ನು ಟ್ವೀಟ್ ಮೂಲಕ ಉಲ್ಲೇಖಿಸಿ ಇಂದು (ಮೇ 28) ಮತ್ತೆ ಎಚ್ಚರಿಕೆ ನೀಡಿದ್ದಾರೆ.

ಮೇ 24ರಂದು ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು. ಅಶ್ವತ್ಥ್ ನಾರಾಯಣ ಆ ಸೂಚನೆಯನ್ನು ಇಂದು ಮತ್ತೆ ಹಂಚಿಕೊಂಡಿದ್ದಾರೆ. ಇಂತಹ ಪ್ರಕರಣಗಳು ವರದಿಯಾದಲ್ಲಿ ಅಂತಹ ಆಸ್ಪತ್ರೆಗಳ ನೋಂದಣಿಯನ್ನು ರದ್ದುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊರೊನಾ ಮೃತದೇಹ ನೀಡಲು ತೊಂದರೆ ಮಾಡಿದರೆ ಆಸ್ಪತ್ರೆಗೇ ಕುತ್ತು ಉಂಟಾಗಲಿದೆ. ಕೊರೊನಾದಿಂದ ಮೃತಪಟ್ಟವರ ಶವ ಹಸ್ತಾಂತರ ಸುಗಮವಾಗಿ ಆಗಬೇಕು. ಚಿಕಿತ್ಸೆಯ ಬಾಕಿ ಹಣ ಪಾವತಿಸುವಂತೆ ಒತ್ತಾಯ ಸಲ್ಲದು ಎಂದು ಆಸ್ಪತ್ರೆಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೇ 24ರಂದು ಖಡಕ್ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಕೊರೊನಾ ವೈರಸ್ ಎಲ್ಲಿಂದ ಹರಡಿತು? ಕೊವಿಡ್ ರೋಗದ ಸೋಂಕಿನ ಅರಿಯಲು ಸಿಐಎ ತನಿಖೆಗೆ ಆಮೆರಿಕ ಅಧ್ಯಕ್ಷ ಜೋ ಬೈಡೆನ್ ಆದೇಶ

ಡಿಆರ್‌ಡಿಒದ ಆಂಟಿ-ಕೊವಿಡ್ ಡ್ರಗ್ ಪ್ಯಾಕೆಟ್​ಗೆ ₹990; ಸರ್ಕಾರಿ ಆಸ್ಪತ್ರೆಗಳಿಗೆ ರಿಯಾಯಿತಿ ದರದಲ್ಲಿ ಲಭ್ಯ

Karnataka Covid Update 22823 new cases and 52253 discharges today tweets health minister Dr K Sudhakar

Published On - 7:54 pm, Fri, 28 May 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?