AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Crime ಅಜ್ಜಿಯನ್ನೇ ಕೊಂದ ಮೊಮ್ಮಗ ಅರೆಸ್ಟ್, ಮತ್ತೊಂದೆಡೆ ಹಳೇ ವೈಷಮ್ಯಕ್ಕೆ ಯುವಕನ ಕೊಲೆ

ಹಣಕಾಸು ವಿಚಾರವಾಗಿ ವೃದ್ಧೆ ಗೌರಮ್ಮ ಜತೆ ಮೊಮ್ಮಗ ಮಂಜುನಾಥ್ನಿಗೆ ಭಿನ್ನಾಭಿಪ್ರಾಯವಾಗಿತ್ತು. ಮಂಜುನಾಥ್ ಕತ್ತು ಹಿಸುಕಿ ಗೌರಮ್ಮ(77) ಕೊಲೆ ಮಾಡಿದ್ದಾನೆ.

Karnataka Crime ಅಜ್ಜಿಯನ್ನೇ ಕೊಂದ ಮೊಮ್ಮಗ ಅರೆಸ್ಟ್, ಮತ್ತೊಂದೆಡೆ ಹಳೇ ವೈಷಮ್ಯಕ್ಕೆ ಯುವಕನ ಕೊಲೆ
ಅಜ್ಜಿಯನ್ನೇ ಕೊಂದ ಮೊಮ್ಮಗ ಅರೆಸ್ಟ್
TV9 Web
| Edited By: |

Updated on: Jul 12, 2021 | 9:46 AM

Share

ಮಡಿಕೇರಿ: ಮಣಜೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವೃದ್ಧೆ ಶವ ಪತ್ತೆಯಾದ ಕೇಸ್ಗೆ ಸಂಬಂಧಿಸಿ ವೃದ್ಧೆ ನಿಗೂಢ ಸಾವಿನ ಕಾರಣ ಬಯಲಾಗಿದೆ. ಮೊಮ್ಮಗನೇ ಅಜ್ಜಿಯನ್ನು ಕೊಂದಿದ್ದು ವೃದ್ಧೆ ಹತ್ಯೆಗೈದಿದ್ದ ಮೊಮ್ಮಗ ಮಂಜುನಾಥ್(40) ಅರೆಸ್ಟ್ ಆಗಿದ್ದಾರೆ. ಕೊಡಗಿನ ಕುಶಾಲನಗರ ತಾಲ್ಲೂಕಿನ ಮಣಜೂರಿನಲ್ಲಿ ಈ ಘಟನೆ ನಡೆದಿದೆ.

ಹಣಕಾಸು ವಿಚಾರವಾಗಿ ವೃದ್ಧೆ ಗೌರಮ್ಮ ಜತೆ ಮೊಮ್ಮಗ ಮಂಜುನಾಥ್ನಿಗೆ ಭಿನ್ನಾಭಿಪ್ರಾಯವಾಗಿತ್ತು. ಮಂಜುನಾಥ್ ಕತ್ತು ಹಿಸುಕಿ ಗೌರಮ್ಮ(77) ಕೊಲೆ ಮಾಡಿದ್ದಾನೆ. ಮಣಜೂರಿನಲ್ಲಿ ಜು.3ರಂದು ಗೌರಮ್ಮ ಶವ ಪತ್ತೆಯಾಗಿತ್ತು. ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸ್ ತನಿಖೆಯಲ್ಲಿ ಕೊಲೆ ಬಹಿರಂಗವಾಗಿದೆ. ಸದ್ಯ ಆರೋಪಿ ಮಂಜುನಾಥ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹಳೇ ವೈಷಮ್ಯಕ್ಕೆ ಕೊಲೆ ಇನ್ನು ಹುಬ್ಬಳ್ಳಿಯಲ್ಲಿ ಚಾಕು ಇರಿದು ಯುವಕನ ಬರ್ಬರ ಹತ್ಯೆ ಮಾಡಲಾಗಿದೆ. ಗೋಪನಕೊಪ್ಪ ಅಮರ ಕಾಲೋನಿ ಕ್ರಾಸ್‌ ಬಳಿ ತಡ ರಾತ್ರಿ ಹಳೇ ವೈಷಮ್ಯ ಹಿನ್ನೆಲೆ ಅಭಿಷೇಕ್ ಗೌಡ ಪಾಟೀಲ್(22) ಹತ್ಯೆ ಮಾಡಲಾಗಿದೆ. ಅಭಿಷೇಕ್, ಬಿಜೆಪಿ ಮುಖಂಡ ಈಶ್ವರ ಗೌಡ ಅಣ್ಣನ ಮಗ. ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

karnataka crime

ಹಳೇ ವೈಷಮ್ಯಕ್ಕೆ ಕೊಲೆಯಾದ ಅಭಿಷೇಕ್ ಗೌಡ ಪಾಟೀಲ್

ರೈಲಿಗೆ ಸಿಲುಕಿ ಸಾವು ತುಮಕೂರಿನ ಕ್ಯಾತ್ಸಂದ್ರ ರೈಲ್ವೆ ನಿಲ್ದಾಣದ ಬಳಿ ದುರ್ಘಟನೆಯೊಂದು ಸಂಭವಿಸಿದೆ. ರೈಲಿಗೆ ಸಿಲುಕಿ ಸುಮಾರು 25 ವರ್ಷದ ಯುವಕ ಮೃತಪಟ್ಟಿದ್ದಾನೆ. ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತುಮಕೂರು ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

(Karnataka Crime man killed her granny and miscreants murdered youth )

ಇದನ್ನೂ ಓದಿ: ಪತ್ನಿ ಶೀಲ ಶಂಕಿಸಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪತಿ; ಎರಡು ಮುಗ್ಧ ಕಂದಮ್ಮಗಳು ಅನಾಥ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್