AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ವೀಕೆಂಡ್ ಎಣ್ಣೆ ಪಾರ್ಟಿಗಾಗಿ ಸರಗಳ್ಳತನ ಮಾಡುತ್ತಿದ್ದ ಮೂವರು ಅರೆಸ್ಟ್, ಆರೋಪಿಗಳಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಬೆಂಗಳೂರು: ಅಂತಾರಾಜ್ಯ ಕುಖ್ಯಾತ ದ್ವಿಚಕ್ರ ವಾಹನ ಕಳ್ಳ ಪ್ರಭುನನ್ನು ಬೆಂಗಳೂರಿನ ವಿಜಯನಗರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ತಮಿಳುನಾಡು ಮೂಲದ ಆರೋಪಿ ಪ್ರಭು ತಮಿಳುನಾಡು, ಆಂಧ್ರ, ಕರ್ನಾಟಕದಲ್ಲಿ ಕಳ್ಳತನ ಮಾಡುತ್ತಿದ್ದ.

Crime News: ವೀಕೆಂಡ್ ಎಣ್ಣೆ ಪಾರ್ಟಿಗಾಗಿ ಸರಗಳ್ಳತನ ಮಾಡುತ್ತಿದ್ದ ಮೂವರು ಅರೆಸ್ಟ್, ಆರೋಪಿಗಳಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ
ವೀಕೆಂಡ್ ಎಣ್ಣೆ ಪಾರ್ಟಿಗಾಗಿ ಸರಗಳ್ಳತನ ಮಾಡುತ್ತಿದ್ದ ಮೂವರು ಅರೆಸ್ಟ್
TV9 Web
| Edited By: |

Updated on:Jul 29, 2022 | 8:59 PM

Share

ನೆಲಮಂಗಲ: ವೀಕೆಂಡ್ ಎಣ್ಣೆ ಪಾರ್ಟಿಗಾಗಿ ಸರಗಳ್ಳತನ ಮಾಡುತ್ತಿದ್ದ ಮೂವರನ್ನು ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಂಜಿತ್ ಕುಮಾರ್, ಜಯಚಂದ್ರ, ಕೃಷ್ಣಮೂರ್ತಿ ಬಂಧಿತ ಆರೋಪಿಗಳು. ಬಂಧಿತರಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್, ಕೃತ್ಯಕ್ಕೆ ಬಳಸುತ್ತಿದ್ದ ಬೈಕ್ ಜಪ್ತಿ ಮಾಡಲಾಗಿದೆ. ಹಾಗೂ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂತಾರಾಜ್ಯ ಕುಖ್ಯಾತ ದ್ವಿಚಕ್ರ ವಾಹನ ಕಳ್ಳ ಅರೆಸ್ಟ್

ಬೆಂಗಳೂರು: ಅಂತಾರಾಜ್ಯ ಕುಖ್ಯಾತ ದ್ವಿಚಕ್ರ ವಾಹನ ಕಳ್ಳ ಪ್ರಭುನನ್ನು ಬೆಂಗಳೂರಿನ ವಿಜಯನಗರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ತಮಿಳುನಾಡು ಮೂಲದ ಆರೋಪಿ ಪ್ರಭು ತಮಿಳುನಾಡು, ಆಂಧ್ರ, ಕರ್ನಾಟಕದಲ್ಲಿ ಕಳ್ಳತನ ಮಾಡುತ್ತಿದ್ದ.

ಬೆಂಗಳೂರಿನ ಕಮರ್ಷಿಯಲ್ ಕಾಂಪ್ಲೆಕ್ಸ್ ಮುಂಭಾಗ ಆರೋಪಿ ಬೈಕ್ ಕದಿಯುತ್ತಿದ್ದ. ಈ ವೇಳೆ ಪೊಲೀಸರು ಕಳ್ಳನನ್ನು ಬಂಧಿಸಿ 7 ಲಕ್ಷ ರೂ. ಮೌಲ್ಯದ 9 ಬೈಕ್ ಜಪ್ತಿ ಮಾಡಿದ್ದಾರೆ. ಆರೋಪಿ ಮೇಲೆ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ 9 ಪ್ರಕರಣ ದಾಖಲಾಗಿದೆ.

ವ್ಯಾಪಾರದ ಸೋಗಿನಲ್ಲಿ ಸರಗಳ್ಳತನ

ದೊಡ್ಡಬಳ್ಳಾಪುರದ ತಿಮ್ಮಸಂದ್ರ ಗ್ರಾಮದಲ್ಲಿ ಬ್ಲಾಕ್ ಪಲ್ಸರ್ ನಲ್ಲಿ ಬಂದು ವ್ಯಾಪಾರದ ಸೋಗಿನಲ್ಲಿ ಸರಗಳ್ಳತನ ಮಾಡಿರುವ ಘಟನೆ ನಡೆದಿದೆ. ಅಂಗಡಿಯಲ್ಲಿದ್ದ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಅಂಗಡಿಯಲ್ಲಿ 50 ರೂಪಾಯಿ ವ್ಯಾಪಾರ ಮಾಡಿ ಮಹಿಳೆಯನ್ನ ಯಾಮಾರಿಸಿ ನಂತರ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಮಾಂಗಲ್ಯ ಸರ ಎಗರಿಸಿ ಎಸ್ಕೇಪ್ ಆಗಿದ್ದಾರೆ. ಹಾಡ ಹಗಲೇ ಘಟನೆ ನಡೆದಿದ್ದು ಜನ ಹೆದರಿದ್ದಾರೆ.

ಚಾಲಕನಿಗೆ ಮಚ್ಚು ತೋರಿಸಿ ಹಣ ದರೋಡೆ, ನಾಲ್ವರು ಅರೆಸ್ಟ್

ಕೊಪ್ಪಳ: ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿ ಮತ್ತು ದಾಸನಾಳ ಗ್ರಾಮದ ಬಳಿ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಲಾರಿ ಚಾಲಕರನ್ನು ಮಚ್ಚು ತೋರಿಸಿ ಹಣ ದರೋಡೆ ಮಾಡಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಟ್ರಯ್ಯ, ಹಿರೇಮಠ, ಬಸವರಾಜ್ ಲಿಂಗಪ್ಪ, ಕೃಷ್ಣಾ ಹಾಗೂ ಮಧಸೂಧನ್ ಬಂಧಿತ ಆರೋಪಿಗಳು. ಬಂಧಿತರಿಂದ ಆಟೋ, ಮೊಬೈಲ್, ಎರಡು ಮಚ್ಚು ವಶಕ್ಕೆ ಪಡೆಯಲಾಗಿದೆ. ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:59 pm, Fri, 29 July 22

Follow Us
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?