Crime News: ವಿದ್ಯುತ್ ತಂತಿ ಎಳೆಯುವ ವೇಳೆ ಅವಘಡ, ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು

ಚಿಂತಾಮಣಿ -ಶಿಡ್ಲಘಟ್ಟ ತಾಲೂಕಿನಲ್ಲಿ 11kv ಲೈನ್ನ ಹಳೇ ತಂತಿ ತೆಗೆದು ಹೊಸ ತಂತಿ ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪ ಮಾಡಿದ್ದಾರೆ.

Crime News: ವಿದ್ಯುತ್ ತಂತಿ ಎಳೆಯುವ ವೇಳೆ ಅವಘಡ, ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರ
Follow us
| Edited By: Ayesha Banu

Updated on:May 25, 2022 | 10:36 PM

ಚಿಕ್ಕಬಳ್ಳಾಪುರ: ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ತಳಗವಾರ-ಮುತ್ತುಗದಹಳ್ಳಿ ಗ್ರಾಮಗಳ ಮಧ್ಯೆ ನಡೆದಿದೆ. ಸಿದ್ದಪ್ಪ(19), ಸಂಜಯ್(22) ಮೃತ ಕಾರ್ಮಿಕರು. ಮತ್ತೊಬ್ಬ ಕಾರ್ಮಿಕ ಫರ್ವೇಜ್ಗೆ ಗಂಭೀರ ಗಾಯಗಳಾಗಿದ್ದು ಗಾಯಾಳನ್ನು ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಚಿಂತಾಮಣಿ -ಶಿಡ್ಲಘಟ್ಟ ತಾಲೂಕಿನಲ್ಲಿ 11kv ಲೈನ್ನ ಹಳೇ ತಂತಿ ತೆಗೆದು ಹೊಸ ತಂತಿ ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪ ಮಾಡಿದ್ದಾರೆ. ತುಮಕೂರು ಮೂಲದ ರಾಜಾ ಎಲೆಕ್ಟ್ರಿಕಲ್ನ ಗಂಗರಾಜ ಎಂಬುವರಿಗೆ ಸೇರಿದ 50 ಕೋಟಿ ರೂಪಾಯಿ ಮೊತ್ತದ ಗುತ್ತಿಗೆ ಕಾಮಗಾರಿ ಇದಾಗಿದ್ದು ಕೂಲಿ ಕಾರ್ಮಿಕರಿಗೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಇದ್ದುದ್ದೇ ದುರಂತ ಕಾರಣ ಎನ್ನಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಭಾರತೀಯ ರೈಲ್ವೆಯಿಂದ ಜೂನ್ 21ಕ್ಕೆ ಶ್ರೀರಾಮಾಯಣ ಯಾತ್ರಾ ರೈಲು ಪ್ರಾರಂಭ

ಲೈಸೆನ್ಸ್ ಇಲ್ಲದ 9 ನಾಡ ಬಂದೂಕು ಸೀಜ್ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಪಾಲಾಕ್ಷಪ್ಪ ಮನೆಯಲ್ಲಿದ್ದ ಲೈಸೆನ್ಸ್ ಇಲ್ಲದ 9 ನಾಡ ಬಂದೂಕು ಜಪ್ತಿ ಮಾಡಲಾಗಿದೆ. ಅಕ್ರಮವಾಗಿ ಬಂದೂಕು ಇಟ್ಟುಕೊಂಡಿದ್ದ ಪಾಲಾಕ್ಷಪ್ಪನನ್ನೂ ಸಹ ಪೊಲೀಸರು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪೊಲೀಸರ ಕಾರ್ಯಾಚರಣೆ, ನಾಲ್ವರು ಕುರಿಗಳ್ಳರ ಬಂಧ‌ನ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಕುರಿಗಳ್ಳರನ್ನು ಬಂಧಿಸಿದ್ದಾರೆ. ಕುರಿಗಳ್ಳರಾದ ದೊಡ್ಡೇಶ್ ಗಿರಿಯಾಪುರ(34), ಪ್ರಭು ಸಾವೇಕರ್(27), ಸಂತೋಷ ತಳವಾರ(31) ಹಾಗೂ ನಟರಾಜ ಪೋತಲಕಟ್ಟೆ ಬಂಧಿತರು. ಹಾಗೂ ಕುರಿ ಕಳ್ಳತನ ಮಾಡಿ ಮಾರಾಟ ಮಾಡಿದ್ದ ಆರೋಪಿಗಳಿಂದ 14,500 ನಗದು ಹಾಗೂ ಕೃತ್ಯಕ್ಕೆ ಬಳಸಿದ ಮೂರು ಲಕ್ಷ ರೂಪಾಯಿ ಮೌಲ್ಯದ ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಲಾಹೋರ್​ನಲ್ಲಿ ಪೆಟ್ರೋಲ್ ಇಲ್ಲ, ಎಟಿಎಂನಲ್ಲಿ ಹಣವಿಲ್ಲ; ಶ್ರೀಲಂಕಾದಲ್ಲಿ ಪಾಕಿಸ್ತಾನದಲ್ಲೂ ಶುರುವಾಯ್ತ ಆರ್ಥಿಕ ಬಿಕ್ಕಟ್ಟು?

ಆರೋಪಿಗಳು ಯರಬಳ್ಳಿ ಗ್ರಾಮದ ಶಶಿಕುಮಾರ ಎಂಬ ರೈತನ ಮೂರು ಕುರಿ ಹಾಗೂ ಒಂದು ಮೇಕೆ ಮರಿ ಕಳ್ಳತನ ಮಾಡಿದ್ದರು. ಅಲ್ಲದೆ ಸುತ್ತಮುತ್ತಲಿನ‌ ಗ್ರಾಮಗಳಲ್ಲಿ ಕುರಿ ಕಳ್ಳತನ ಮಾಡಿ ದಾವಣಗೆರೆ ಸೇರಿದಂತೆ ವಿವಿಧ ಕಡೆ ಮಾರಾಟ ಮಾಡುತ್ತಿದ್ದರು.

Published On - 10:36 pm, Wed, 25 May 22

ತಾಜಾ ಸುದ್ದಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!