AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ವಿದ್ಯುತ್ ತಂತಿ ಎಳೆಯುವ ವೇಳೆ ಅವಘಡ, ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು

ಚಿಂತಾಮಣಿ -ಶಿಡ್ಲಘಟ್ಟ ತಾಲೂಕಿನಲ್ಲಿ 11kv ಲೈನ್ನ ಹಳೇ ತಂತಿ ತೆಗೆದು ಹೊಸ ತಂತಿ ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪ ಮಾಡಿದ್ದಾರೆ.

Crime News: ವಿದ್ಯುತ್ ತಂತಿ ಎಳೆಯುವ ವೇಳೆ ಅವಘಡ, ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:May 25, 2022 | 10:36 PM

Share

ಚಿಕ್ಕಬಳ್ಳಾಪುರ: ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ತಳಗವಾರ-ಮುತ್ತುಗದಹಳ್ಳಿ ಗ್ರಾಮಗಳ ಮಧ್ಯೆ ನಡೆದಿದೆ. ಸಿದ್ದಪ್ಪ(19), ಸಂಜಯ್(22) ಮೃತ ಕಾರ್ಮಿಕರು. ಮತ್ತೊಬ್ಬ ಕಾರ್ಮಿಕ ಫರ್ವೇಜ್ಗೆ ಗಂಭೀರ ಗಾಯಗಳಾಗಿದ್ದು ಗಾಯಾಳನ್ನು ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಚಿಂತಾಮಣಿ -ಶಿಡ್ಲಘಟ್ಟ ತಾಲೂಕಿನಲ್ಲಿ 11kv ಲೈನ್ನ ಹಳೇ ತಂತಿ ತೆಗೆದು ಹೊಸ ತಂತಿ ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪ ಮಾಡಿದ್ದಾರೆ. ತುಮಕೂರು ಮೂಲದ ರಾಜಾ ಎಲೆಕ್ಟ್ರಿಕಲ್ನ ಗಂಗರಾಜ ಎಂಬುವರಿಗೆ ಸೇರಿದ 50 ಕೋಟಿ ರೂಪಾಯಿ ಮೊತ್ತದ ಗುತ್ತಿಗೆ ಕಾಮಗಾರಿ ಇದಾಗಿದ್ದು ಕೂಲಿ ಕಾರ್ಮಿಕರಿಗೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಇದ್ದುದ್ದೇ ದುರಂತ ಕಾರಣ ಎನ್ನಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಭಾರತೀಯ ರೈಲ್ವೆಯಿಂದ ಜೂನ್ 21ಕ್ಕೆ ಶ್ರೀರಾಮಾಯಣ ಯಾತ್ರಾ ರೈಲು ಪ್ರಾರಂಭ

ಲೈಸೆನ್ಸ್ ಇಲ್ಲದ 9 ನಾಡ ಬಂದೂಕು ಸೀಜ್ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಪಾಲಾಕ್ಷಪ್ಪ ಮನೆಯಲ್ಲಿದ್ದ ಲೈಸೆನ್ಸ್ ಇಲ್ಲದ 9 ನಾಡ ಬಂದೂಕು ಜಪ್ತಿ ಮಾಡಲಾಗಿದೆ. ಅಕ್ರಮವಾಗಿ ಬಂದೂಕು ಇಟ್ಟುಕೊಂಡಿದ್ದ ಪಾಲಾಕ್ಷಪ್ಪನನ್ನೂ ಸಹ ಪೊಲೀಸರು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪೊಲೀಸರ ಕಾರ್ಯಾಚರಣೆ, ನಾಲ್ವರು ಕುರಿಗಳ್ಳರ ಬಂಧ‌ನ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಕುರಿಗಳ್ಳರನ್ನು ಬಂಧಿಸಿದ್ದಾರೆ. ಕುರಿಗಳ್ಳರಾದ ದೊಡ್ಡೇಶ್ ಗಿರಿಯಾಪುರ(34), ಪ್ರಭು ಸಾವೇಕರ್(27), ಸಂತೋಷ ತಳವಾರ(31) ಹಾಗೂ ನಟರಾಜ ಪೋತಲಕಟ್ಟೆ ಬಂಧಿತರು. ಹಾಗೂ ಕುರಿ ಕಳ್ಳತನ ಮಾಡಿ ಮಾರಾಟ ಮಾಡಿದ್ದ ಆರೋಪಿಗಳಿಂದ 14,500 ನಗದು ಹಾಗೂ ಕೃತ್ಯಕ್ಕೆ ಬಳಸಿದ ಮೂರು ಲಕ್ಷ ರೂಪಾಯಿ ಮೌಲ್ಯದ ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಲಾಹೋರ್​ನಲ್ಲಿ ಪೆಟ್ರೋಲ್ ಇಲ್ಲ, ಎಟಿಎಂನಲ್ಲಿ ಹಣವಿಲ್ಲ; ಶ್ರೀಲಂಕಾದಲ್ಲಿ ಪಾಕಿಸ್ತಾನದಲ್ಲೂ ಶುರುವಾಯ್ತ ಆರ್ಥಿಕ ಬಿಕ್ಕಟ್ಟು?

ಆರೋಪಿಗಳು ಯರಬಳ್ಳಿ ಗ್ರಾಮದ ಶಶಿಕುಮಾರ ಎಂಬ ರೈತನ ಮೂರು ಕುರಿ ಹಾಗೂ ಒಂದು ಮೇಕೆ ಮರಿ ಕಳ್ಳತನ ಮಾಡಿದ್ದರು. ಅಲ್ಲದೆ ಸುತ್ತಮುತ್ತಲಿನ‌ ಗ್ರಾಮಗಳಲ್ಲಿ ಕುರಿ ಕಳ್ಳತನ ಮಾಡಿ ದಾವಣಗೆರೆ ಸೇರಿದಂತೆ ವಿವಿಧ ಕಡೆ ಮಾರಾಟ ಮಾಡುತ್ತಿದ್ದರು.

Published On - 10:36 pm, Wed, 25 May 22

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ