Karnataka Dam Water Level: ತುಂಗಭದ್ರಾದಲ್ಲಿ 10 ಟಿಎಂಸಿ ನೀರು, ಏ.06ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ

|

Updated on: Apr 06, 2024 | 6:10 AM

ಕರ್ನಾಟಕದ ಜಲಾಶಯಗಳ ಏಪ್ರಿಲ್​ 06ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ತುಂಗಭದ್ರಾದಲ್ಲಿ 10 ಟಿಎಂಸಿ ನೀರು, ಏ.06ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ತುಂಗಭದ್ರ ಡ್ಯಾಂ
Follow us on

ಕರ್ನಾಟಕದಲ್ಲಿ ಈ ಬಾರಿ ಸಮರ್ಪಕವಾಗಿ ಮಳೆಯಾಗದೆ ಬರಗಾಲ ಆವರಿಸಿದೆ, ಹನಿ ನೀರಿಗೂ ಜನರು ಪರದಾಡುತ್ತಿದ್ದಾರೆ. ತಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬಿಸಿಲಿನ ಶಾಖಕ್ಕೆ ಜನರು ಬಳಲುತ್ತಿದ್ದಾರೆ. ಜಲಾಶಯಗಳಲ್ಲಿ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಕೆಆರ್​ಎಸ್​ ಡ್ಯಾಂನಲ್ಲಿ ಕೇವಲ 13.08 ಟಿಎಂಸಿ ನೀರು ಮಾತ್ರ ಇದೆ. ಇನ್ನು ರಾಜ್ಯದ ಅತಿ ದೊಡ್ಡ ಜಲಾಶಯ ಎಂಬ ಖ್ಯಾತಿ ಗಳಿಸಿರುವ ತುಂಗಭದ್ರಾ ಆಣೆಕಟ್ಟಿನಲ್ಲಿ ಕೇವಲ 10.19 ಟಿಎಂಸಿ ನೀರು ಇದೆ. ಹಾಗಾದರೆ ರಾಜ್ಯದ ಕೆಆರ್​ಎಸ್​ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಏಪ್ರಿಲ್​ ​06ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 35.89 30.89 0 16446
ತುಂಗಭದ್ರಾ ಜಲಾಶಯ (Tungabhadra Dam) 497.71 105.79 4.38 05.51 0 960
ಮಲಪ್ರಭಾ ಜಲಾಶಯ (Malaprabha Dam) 633.80 37.73 10.19 12.04 0 194
ಕೆ.ಆರ್.ಎಸ್ (KRS Dam) 38.04 49.45 13.08 19.35 78 787
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 28.20 45.52 0 3168
ಕಬಿನಿ ಜಲಾಶಯ (Kabini Dam) 696.13 19.52 09.10 06.58 67 800
ಭದ್ರಾ ಜಲಾಶಯ (Bhadra Dam) 657.73 71.54 18.24 39.91 74 6347
ಘಟಪ್ರಭಾ ಜಲಾಶಯ (Ghataprabha Dam) 662.91 51.00 24.36 13.83 0 5028
ಹೇಮಾವತಿ ಜಲಾಶಯ (Hemavathi Dam) 890.58 37.10 10.42 19.95 8 330
ವರಾಹಿ ಜಲಾಶಯ (Varahi Dam) 594.36 31.10 6.00 6.46 0 709
ಹಾರಂಗಿ ಜಲಾಶಯ (Harangi Dam)​​ 871.38 8.50 3.19 2.87 185 200
ಸೂಫಾ (Supa Dam) 564.00 145.33 48.08 65.30 333 4968

ನೀರಿಲ್ಲದೆ ಪ್ರಾಣಿಗಳು ಸಹಿತ ಒದ್ದಾಡುತ್ತಿವೆ. ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಭಾರಿ ಕಷ್ಟವಾಗಲಿದೆ. ಇದೀಗ ತುರ್ತಾಗಿ ಮಳೆ ಬೇಕಾಗಿದ್ದು, ವರುಣ ದೇವನಲ್ಲಿ ಜನರು ಪಾರ್ಥನೆ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ