
ಬೆಂಗಳೂರು, ಆಗಸ್ಟ್ 10: ಕರ್ನಾಟಕದ ವಿವಿಧ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು (Dam water level) ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ವಿಜಯಪುರದ ಆಲಮಟ್ಟಿ ಜಲಾಶಯಕ್ಕೆ ಕೃಷ್ಣಾ ನದಿಯಿಂದ ದಾಖಲೆ ಪ್ರಮಾಣದ ನೀರು ಹರಿದುಬರುತ್ತಿದ್ದು, ಇತ್ತ ಮೈಸೂರಿನ ಕಬಿನಿ ಜಲಾಶಯ ಭರ್ತಿಯಾಗಲು ಕೇವಲ ಒಂದೇ ಅಡಿ ಬಾಕಿಯಿದೆ. ಕಾವೇರಿ ಕೊಳ್ಳದ ಕೆಆರ್ಎಸ್ ಡ್ಯಾಂನಲ್ಲೂ ನೀರಿನ ಸಂಗ್ರಹ ದಿನದಿಂದ ದಿನಕ್ಕೆ ಉತ್ತಮಗೊಳ್ಳುತ್ತಿದ್ದು, ರೈತರಲ್ಲಿ ಸಂತಸ ಮೂಡಿಸಿದೆ.
ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂ ಗರಿಷ್ಠ ಮಟ್ಟಕ್ಕೆ ತಲುಪುತ್ತಿದ್ದು, ಕೃಷ್ಣಾ ನದಿಯಿಂದ ಭಾರಿ ಪ್ರಮಾಣದ ಒಳಹರಿವು ಮುಂದುವರಿದಿದೆ.
ಮಂಡ್ಯ ಜಿಲ್ಲೆಯ ಕೆಆರ್ಎಸ್ ಡ್ಯಾಂನಲ್ಲಿ ನೀರಿನ ಒಳಹರಿವು ಸ್ಥಿರವಾಗಿದ್ದು, ಇಂದಿನ ನೀರಿನ ಸಂಗ್ರಹ 30 ಟಿಎಂಸಿ ದಾಟಿದೆ.
ಮೈಸೂರಿನ ಕಬಿನಿ ಜಲಾನಯನ ಪ್ರದೇಶದಲ್ಲಿ 10 ಮಿ.ಮೀ ಮಳೆಯಾಗಿದ್ದು, ಜಲಾಶಯವು ಸಂಪೂರ್ಣವಾಗಿ ಭರ್ತಿಯಾಗಲು ಕೇವಲ 0.96 ಅಡಿ ಮಾತ್ರ ಬಾಕಿಯಿದೆ. ಸುರಕ್ಷತೆಯ ದೃಷ್ಟಿಯಿಂದ ನದಿಗೆ ಭಾರಿ ಪ್ರಮಾಣದ ನೀರನ್ನು ಹರಿಸಲಾಗುತ್ತಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ