AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಭಾರೀ ಮಳೆಯ ಕಾರಣ ಕಾವೇರಿ ಜಲಾನಯನ ಪ್ರದೇಶದ ಡ್ಯಾಂಗಳಲ್ಲಿ ಹೆಚ್ಚಾದ ನೀರಿನ ಮಟ್ಟ, ಇಲ್ಲಿದೆ ವಿವರ

ಈ ವರ್ಷ ಅವಧಿಗೂ ಮುನ್ನವೇ ಕರ್ನಾಟಕ ಪ್ರವೇಶಿಸಿದ್ದ ಮುಂಗಾರು ಮಳೆ ರೈತರ ಮುಖದಲ್ಲಿ ಮಂದಹಾಸ ಮೂಸಲು ಕಾರಣವಾಗಿದೆ. ಇದಕ್ಕೆ ಕಾರಣ ರಾಜ್ಯದ ಜಲಾಶಯಗಳಲ್ಲಿ ಬೇಗನೇ ನೀರಿನ ಮಟ್ಟ ಹೆಚ್ಚಾಗಿರುವುದು. ಅದರಲ್ಲಿಯೂ ಕಾವೇರಿ ಜಲಾನಯನ ಪ್ರದೇಶದ ಡ್ಯಾಂಗಳ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಕೆಆರ್​​ಎಸ್ ಸೇರಿದಂತೆ ಇತರ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ.

Karnataka Dam Water Level: ಭಾರೀ ಮಳೆಯ ಕಾರಣ ಕಾವೇರಿ ಜಲಾನಯನ ಪ್ರದೇಶದ ಡ್ಯಾಂಗಳಲ್ಲಿ ಹೆಚ್ಚಾದ ನೀರಿನ ಮಟ್ಟ, ಇಲ್ಲಿದೆ ವಿವರ
ಕೆಆರ್​​ಎಸ್ ಡ್ಯಾಂ (ಸಂಗ್ರಹ ಚಿತ್ರ)
Ganapathi Sharma
|

Updated on:Jun 02, 2025 | 11:26 AM

Share

ಬೆಂಗಳೂರು, ಜೂನ್ 2: ನೈಋತ್ಯ ಮುಂಗಾರು ಮಳೆ (Monsoon Rain) ಕರ್ನಾಟಕದಲ್ಲಿ ಚುರುಕುಪಡೆದುಕೊಂಡ ಬೆನ್ನಲ್ಲೇ ಕಾವೇರಿ ಜಲಾನಯನ ಪ್ರದೇಶಗಳ ಜಲಾಶಯಗಳ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಕೊಡಡು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಪರಿಣಾಮವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆಆರ್​​ಎಸ್ ಡ್ಯಾಂನಲ್ಲಿ (KRS Dam) ನೀರಿನ ಮಟ್ಟ 14 ಅಡಿ ಏರಿಕೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದ ಇತರ ಜಲಾಶಯಗಳಲ್ಲೂ ನೀರಿನ ಮಟ್ಟ ಇದೇ ರೀತಿ ಏರಿಕೆಯಾಗಿದೆ.

ಈ ವರ್ಷ ಅವಧಿಗೂ ಮುನ್ನ ಮುಂಗಾರು ಮಳೆ ಕರ್ನಾಟಕ ಪ್ರವೇಶಿಸಿದೆ. ಮಾನ್ಸೂನ್ ಮಳೆ ಆರಂಭವಾದ ಸಂದರ್ಭದಲ್ಲಿ, ಮೇ 24 ರಂದು ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟವು 89.1 ಅಡಿಗೆ ಇಳಿದಿತ್ತು. ಈ ಜಲಾಶಯದ ಗರಿಷ್ಠ ಸಾಮರ್ಥ್ಯ 124.8 ಅಡಿ ಆಗಿದೆ. ಜೂನ್ 1 ರಂದು ಭಾನುವಾರ ಅಣೆಕಟ್ಟೆಯ ಒಳಹರಿವು 17,544 ಕ್ಯೂಸೆಕ್‌ ಆಗಿದ್ದು, ನೀರಿನ ಮಟ್ಟವು 103.7 ಅಡಿಗಳಷ್ಟಿತ್ತು.

ಕೇರಳದ ವಿವಿಧ ಪ್ರದೇಶಗಳಲ್ಲಿಯೂ ಭಾರಿ ಮಳೆಯಾಗುತ್ತಿರುವ ಕಾರಣ ಮೈಸೂರು ಜಿಲ್ಲೆಯ ಎಚ್‌ಡಿ ಕೋಟೆ ತಾಲ್ಲೂಕಿನಲ್ಲಿರುವ ಕಬಿನಿ ಜಲಾಶಯದ ನೀರಿನ ಒಳಹರಿವು ಹೆಚ್ಚಳವಾಗಿದೆ. ಹೀಗಾಗಿ ನೀರಿನ ಮಟ್ಟ ನಾಲ್ಕು ಅಡಿಗಳಷ್ಟು ಏರಿಕೆಯಾಗಿದೆ.

ಇದನ್ನೂ ಓದಿ
Image
ಬಿಬಿಎಂಪಿ ಶುಭ ಸುದ್ದಿ: ಬಿ ಖಾತಾ ಬದಲಿಗೆ ಎ ಖಾತಾ ನೀಡುವ ಸುಳಿವು!
Image
ಗರ್ಭಿಣಿ ಪ್ರೇಯಸಿ ಜತೆ ಸೇರಿ ಪ್ರಿಯಕರನಿಂದ ಕಳ್ಳತನ, ಪೊಲೀಸ್ ಬಲೆಗೆ ಲವರ್ಸ್
Image
ನಾಲ್ಕೇ ದಿನದಲ್ಲಿ ಕೆಆರ್​​​ಎಸ್​​ಗೆ ಹರಿದುಬಂತು 11 ಅಡಿ ನೀರು
Image
ಮೂರೇ ದಿನಕ್ಕೆ 9 ಅಡಿ ಭರ್ತಿಯಾದ ಕೆಆರ್​ಎಸ್ ಡ್ಯಾಂ​

ಹೇಮಾವತಿ ಡ್ಯಾಂನಲ್ಲಿ ಕಳೆದ ವಾರ ನೀರಿನ ಮಟ್ಟವು ಏಳು ಅಡಿಗಳಿಗಿಂತ ಸ್ವಲ್ಪ ಹೆಚ್ಚಾಗಿತ್ತು. ಜೂನ್ 2 ರಂದು 2,489 ಕ್ಯೂಸೆಕ್‌ಗಳ ಒಳಹರಿವು ದಾಖಲಾಗಿದ್ದು, ಅಣೆಕಟ್ಟಿನ ನೀರಿನ ಮಟ್ಟವು 2,905.97 ಅಡಿಗಳಷ್ಟಾಗಿದೆ.

ಇದನ್ನೂ ಓದಿ: ನಾಲ್ಕೇ ದಿನದಲ್ಲಿ ಕೆಆರ್​​​ಎಸ್​​ಗೆ ಹರಿದುಬಂತು 11 ಅಡಿ ನೀರು: ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ

ಹಾರಂಗಿ ಜಲಾಶಯದ ನೀರಿನ ಮಟ್ಟದಲ್ಲಿ 9 ಅಡಿ ಏರಿಕೆಯಾಗಿದೆ. ಮೇ 24 ರಂದು ನೀರಿನ ಮಟ್ಟ 2,832.78 ಅಡಿಗಳಷ್ಟಿತ್ತು. ಜೂನ್ 2ರ ವೇಳೆಗೆ 2,849.85 ಅಡಿಗೆ ಏರಿಕೆಯಾಗಿದೆ.

ಮೇ 25 ರಿಂದ 31 ರವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ 298 ರಷ್ಟು ಹೆಚ್ಚುವರಿ ಮಳೆಯಾಗಿದ್ದು, ರಾಜ್ಯಾದ್ಯಂತ ಸರಾಸರಿ ಮಳೆ 92 ಮಿ.ಮೀ. ಆಗಿದೆ. ಇದು ಅಣೆಕಟ್ಟೆಗಳ ನೀರಿನ ಮಟ್ಟ ಹೆಚ್ಚಳಕ್ಕೂ ನೆರವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:25 am, Mon, 2 June 25

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು