
ಬೆಂಗಳೂರು, ಸೆಪ್ಟೆಂಬರ್ 20: ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಬಸವಸಾಗರ ಹಾಗೂ ಕಬಿನಿ ಡ್ಯಾಂಗಳ ಇಂದಿನ ನೀರಿನ ಮಟ್ಟ ಮತ್ತು ಹರಿವಿನ ಪ್ರಮಾಣದ ವಿವರಗಳು ಹೊರಬಿದ್ದಿವೆ. ಉತ್ತರ ಕರ್ನಾಟಕದ ಕೃಷ್ಣಾ ನದಿ ಪಾತ್ರದ ಜಲಾಶಯಗಳಲ್ಲಿ ಹೊರಹರಿವು ಮುಂದುವರಿದಿದ್ದರೆ, ದಕ್ಷಿಣ ಕರ್ನಾಟಕದ ಮೈಸೂರು ಭಾಗದ ಕಬಿನಿ ಜಲಾಶಯದಲ್ಲಿ ನೀರಿನ ಸಂಗ್ರಹ ಸಾಧಾರಣ ಮಟ್ಟದಲ್ಲಿದೆ. ವಿಜಯಪುರ, ಯಾದಗಿರಿ ಹಾಗೂ ಮೈಸೂರು ಜಿಲ್ಲೆಗಳ ಈ ಪ್ರಮುಖ ಜಲಾಶಯಗಳ ಇಂದಿನ ನೀರು ಸಂಗ್ರಹ ಹಾಗೂ ಹರಿವಿನ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯದಲ್ಲಿ ಪ್ರಸ್ತುತ ಗರಿಷ್ಠ ಮಟ್ಟದ ಹತ್ತಿರ ನೀರು ಸಂಗ್ರಹವಾಗಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿ ಇರುವ ಬಸವಸಾಗರ ಜಲಾಶಯಕ್ಕೆ ಒಳಹರಿವು ಮುಂದುವರಿದಿದ್ದು, ನದಿಗೆ ನೀರನ್ನು ಹರಿಸಲಾಗುತ್ತಿದೆ.
ಮೈಸೂರು ಜಿಲ್ಲೆಯ ಪ್ರಮುಖ ಜಲಾಶಯವಾದ ಕಬಿನಿ ವ್ಯಾಪ್ತಿಯಲ್ಲಿ 2 ಮಿ.ಮೀ ಮಳೆಯಾಗಿದ್ದು, ನೀರಿನ ಸಂಗ್ರಹ ಕಾಯ್ದುಕೊಳ್ಳಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:55 am, Sun, 20 September 26