
ಬೆಂಗಳೂರು, ಜುಲೈ 31: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶ ಹೊರಬಿದ್ದ ಬೆನ್ನಲ್ಲೇ ಕಾವೇರಿ ಕೊಳ್ಳದ ಪ್ರಮುಖ ಜಲಾಶಯವಾದ ಕೆಆರ್ಎಸ್ನಲ್ಲಿ ನೀರಿನ ಅಭಾವ ಭೀತಿ ಎದುರಾಗಿದೆ. ಕಳೆದ ಒಂದು ವಾರದಿಂದ ಕೆಆರ್ಎಸ್ ಡ್ಯಾಂ ನೀರಿನ ಮಟ್ಟ 90 ಅಡಿ ದಾಟಿದ್ದರೂ ಸಹ, ಸದ್ಯಕ್ಕೆ 92.85 ಅಡಿಯಲ್ಲೇ ಸ್ಥಿರವಾಗಿದ್ದು, ಜಲಾಶಯ ಭರ್ತಿಯಾಗಲು ಇನ್ನೂ ಬಹುದೂರ ಸಾಗಬೇಕಿದೆ. ಒಂದು ಕಡೆ ಮಳೆಯ ಕೊರತೆಯಿಂದ ಕಾವೇರಿ ಕೊಳ್ಳದ ಜಲಾಶಯಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗದೇ ಕಂಗೆಟ್ಟಿದ್ದರೆ, ಇನ್ನೊಂದೆಡೆ ತಮಿಳುನಾಡಿಗೆ ನೀರು ಹರಿಸಬೇಕಾದ ಅನಿವಾರ್ಯತೆ ರಾಜ್ಯಕ್ಕೆ ಎದುರಾಗಿದೆ. ಆದರೆ ಕೃಷ್ಣಾ ಕೊಳ್ಳದ ಆಲಮಟ್ಟಿ ಹಾಗೂ ಕಾವೇರಿ ಕೊಳ್ಳದ ಕಬಿನಿ ಮತ್ತು ಹಾರಂಗಿ ಜಲಾಶಯಗಳಿಗೆ ಉತ್ತಮ ಒಳಹರಿವು ಇರುವುದು ಕೊಂಚ ಸಮಾಧಾನ ತಂದಿದೆ.
ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.
ವಯನಾಡು ಭಾಗದಲ್ಲಿ ಮಳೆ ಹೆಚ್ಚಾಗಿರುವುದರಿಂದ ಕಬಿನಿ ಭರ್ತಿಗೆ ಕೇವಲ 6 ಅಡಿ ಬಾಕಿಯಿದ್ದು, ಇನ್ನೆರಡು ದಿನಗಳಲ್ಲಿ ಕೋಡಿ ಬೀಳುವ ಸಾಧ್ಯತೆಯಿದೆ.
ಕಳೆದ ವರ್ಷ ಇದೇ ದಿನ: 2,921 ಅಡಿ, 36.137 TMC ಸಂಗ್ರಹವಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಹೇಮಾವತಿಯಲ್ಲಿ ನೀರಿನ ಸಂಗ್ರಹ ಕೊಂಚ ಕಡಿಮೆಯಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:48 am, Fri, 31 July 26