AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಇನ್ನೂ 100 ಅಡಿ ದಾಟಿಲ್ಲ KRS, ಆಲಮಟ್ಟಿಗೆ ಒಳಹರಿವು ಹೆಚ್ಚಳ; ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ

ಕರ್ನಾಟಕದ ಜಲಾಶಯಗಳ ಜುಲೈ 20 ರ ನೀರಿನ ಮಟ್ಟ: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಇನ್ನೂ ನಿರೀಕ್ಷಿತ ಪ್ರಮಾಣಕ್ಕೆ ಏರಿಲ್ಲ. ಬೆಂಗಳೂರಿನ ಕುಡಿಯುವ ನೀರಿನ ಜೀವನಾಡಿಯಾಗಿರುವ ಕೆಆರ್‌ಎಸ್ ಜಲಾಶಯ ಜುಲೈ ಅಂತ್ಯ ಸಮೀಪಿಸಿದ್ದರೂ 100 ಅಡಿ ಗಡಿ ದಾಟಿಲ್ಲ. ಆಲಮಟ್ಟಿಗೆ ಒಳಹರಿವು ಹೆಚ್ಚಳವಾಗಿದ್ದರೆ, ಕಬಿನಿ ಮತ್ತು ತುಂಗಭದ್ರಾದಲ್ಲಿ ಸಂಗ್ರಹ ಕಡಿಮೆಯೇ ಇದೆ.

Karnataka Dam Water Level: ಇನ್ನೂ 100 ಅಡಿ ದಾಟಿಲ್ಲ KRS, ಆಲಮಟ್ಟಿಗೆ ಒಳಹರಿವು ಹೆಚ್ಚಳ; ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ
ತುಂಗಭದ್ರಾ ಡ್ಯಾಂ (ಸಾಂದರ್ಭಿಕ ಚಿತ್ರ)Image Credit source: tv9
ಗಣಪತಿ ಶರ್ಮಾ
|

Updated on: Jul 20, 2026 | 11:23 AM

Share

ಮುಖ್ಯಾಂಶಗಳು

  • ಜುಲೈ ತಿಂಗಳು ಮುಗಿಯುತ್ತಾ ಬಂದರೂ 100 ಅಡಿ ತಲುಪದ ಕೆಆರ್ಎಸ್ ಡ್ಯಾಂ
  • ಬರದ ನಡುವೆಯೂ ಆಲಮಟ್ಟಿ ಡ್ಯಾಂಗೆ ಒಳಹರಿವು ಹೆಚ್ಚಳ
  • ಆಲಮಟ್ಟಿ ಒಳಹರಿವು ಹೆಚ್ಚಳದಿಂದ ರೈತರು ಖುಷ್

ಬೆಂಗಳೂರು, ಜುಲೈ 20: ಕರ್ನಾಟಕದಲ್ಲಿ ಮುಂಗಾರು (Monsoon Rain) ತುಸು ಚುರುಕುಗೊಂಡಿದ್ದರೂ, ಪ್ರಮುಖ ಜಲಾಶಯಗಳ ನೀರಿನ ಮಟ್ಟ (Dam Water Level) ನಿರೀಕ್ಷಿತ ಪ್ರಮಾಣಕ್ಕೆ ಏರಿಕೆಯಾಗಿಲ್ಲ. ಅದರಲ್ಲೂ ಬೆಂಗಳೂರಿಗೆ ಕುಡಿಯುವ ನೀರಿನ ಪ್ರಮುಖ ಮೂಲವಾಗಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ನೀರಿನ ಮಟ್ಟ ಜುಲೈ ಅಂತ್ಯ ಸಮೀಪಿಸುತ್ತಿದ್ದರೂ ಇನ್ನೂ 100 ಅಡಿ ಗಡಿ ದಾಟಿಲ್ಲ. ಸದ್ಯ ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ 92.61 ಅಡಿಯಷ್ಟೇ ಇದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಲಾಶಯದ ಸ್ಥಿತಿ ಆತಂಕ ಮೂಡಿಸುವಂತಿದೆ. ಇನ್ನು ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದರೆ, ತುಂಗಭದ್ರಾ ಮತ್ತು ಕಬಿನಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಇನ್ನೂ ನಿರೀಕ್ಷಿತ ಮಟ್ಟ ತಲುಪಿಲ್ಲ.

ಕೃಷ್ಣರಾಜ ಸಾಗರ ಜಲಾಶಯ ನೀರಿನ ಮಟ್ಟ

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ನೀರಿನ ಮಟ್ಟ: 92.61 ಅಡಿ
  • ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
  • ಇಂದಿನ ಸಂಗ್ರಹ: 17.554 ಟಿಎಂಸಿ
  • ಲೈವ್ ಸ್ಟೋರೇಜ್: 9.175 ಟಿಎಂಸಿ
  • ಒಳಹರಿವು: 828 ಕ್ಯೂಸೆಕ್
  • ಹೊರಹರಿವು: 2,148 ಕ್ಯೂಸೆಕ್ (ಕಾಲುವೆ ಹಾಗೂ ಕುಡಿಯುವ ನೀರು ಸೇರಿ)

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

  • ಗರಿಷ್ಠ ಮಟ್ಟ: 519.60 ಮೀಟರ್
  • ಇಂದಿನ ನೀರಿನ ಮಟ್ಟ: 517.78 ಮೀಟರ್
  • ಒಳಹರಿವು: 40,173 ಕ್ಯೂಸೆಕ್
  • ಹೊರಹರಿವು: 16,458 ಕ್ಯೂಸೆಕ್

ತುಂಗಭದ್ರಾ ಜಲಾಶಯ ನೀರಿನ ಮಟ್ಟ

  • ಗರಿಷ್ಠ ಮಟ್ಟ: 1633.00 ಅಡಿ
  • ಇಂದಿನ ನೀರಿನ ಮಟ್ಟ: 1603.08 ಅಡಿ
  • ಗರಿಷ್ಠ ಸಾಮರ್ಥ್ಯ: 105.788 ಟಿಎಂಸಿ
  • ಇಂದಿನ ಸಂಗ್ರಹ: 25.766 ಟಿಎಂಸಿ
  • ಸರಾಸರಿ ಒಳಹರಿವು (24 ಗಂಟೆ): 1,017 ಕ್ಯೂಸೆಕ್
  • ಪ್ರಸ್ತುತ ಒಳಹರಿವು: 1,050 ಕ್ಯೂಸೆಕ್
  • ಸರಾಸರಿ ಹೊರಹರಿವು (24 ಗಂಟೆ): 3,547 ಕ್ಯೂಸೆಕ್
  • ಕಾಲುವೆಗೆ ಬಿಡುಗಡೆ: 3,547 ಕ್ಯೂಸೆಕ್

ಕಬಿನಿ ಡ್ಯಾಂ ನೀರಿನ ಮಟ್ಟ

  • ಇಂದಿನ ನೀರಿನ ಮಟ್ಟ: 71.77 ಅಡಿ
  • ಜಲಾಶಯದಲ್ಲಿರುವ ನೀರು: 12.56 ಟಿಎಂಸಿ
  • ಒಳಹರಿವು: 2,818 ಕ್ಯೂಸೆಕ್
  • ಹೊರಹರಿವು: 500 ಕ್ಯೂಸೆಕ್
  • ಕಳೆದ 24 ಗಂಟೆಗಳಲ್ಲಿ ದಾಖಲಾಗಿರುವ ಮಳೆ: 5 ಮಿ.ಮೀ.

ಕಳೆದ ವರ್ಷದ ಇದೇ ದಿನ ಕಬಿನಿ ಜಲಾಶಯದ ನೀರಿನ ಮಟ್ಟ 83.33 ಅಡಿ ಹಾಗೂ ಸಂಗ್ರಹ 19.08 ಟಿಎಂಸಿ ಇತ್ತು. ಆಗ ಜಲಾಶಯಕ್ಕೆ 15,206 ಕ್ಯೂಸೆಕ್ ಒಳಹರಿವು ದಾಖಲಾಗಿದ್ದರೆ, ನದಿಗೆ 8,833 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿತ್ತು. ಈ ಬಾರಿ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಮಟ್ಟ ಮತ್ತು ಒಳಹರಿವು ಎರಡೂ ಗಣನೀಯವಾಗಿ ಕಡಿಮೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ
ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ
82 ಸಾವಿರ ಜನರ ಮಧ್ಯೆ ಕುಳಿತು ಫಿಫಾ ವರ್ಲ್ಡ್​​​ಕಪ್ ಫೈನಲ್ ವೀಕ್ಷಿಸಿದ ಮೋಹನ
82 ಸಾವಿರ ಜನರ ಮಧ್ಯೆ ಕುಳಿತು ಫಿಫಾ ವರ್ಲ್ಡ್​​​ಕಪ್ ಫೈನಲ್ ವೀಕ್ಷಿಸಿದ ಮೋಹನ
ರೇವಣ್ಣ ಮನೆ ಬಳಿ ಮಳೆಯ ಮಧ್ಯೆಯೂ ಚೆನ್ನಮ್ಮ ಅಂತಿಮ ದರ್ಶನಕ್ಕೆ ಬಂದ ಜನ!
ರೇವಣ್ಣ ಮನೆ ಬಳಿ ಮಳೆಯ ಮಧ್ಯೆಯೂ ಚೆನ್ನಮ್ಮ ಅಂತಿಮ ದರ್ಶನಕ್ಕೆ ಬಂದ ಜನ!
ಇಂದು ಮಧ್ಯಾಹ್ನ ಚೆನ್ನಮ್ಮ ಅಂತ್ಯಕ್ರಿಯೆ: ಪ್ರಮುಖ ಬಿಜೆಪಿ ನಾಯಕರು ಭಾಗಿ
ಇಂದು ಮಧ್ಯಾಹ್ನ ಚೆನ್ನಮ್ಮ ಅಂತ್ಯಕ್ರಿಯೆ: ಪ್ರಮುಖ ಬಿಜೆಪಿ ನಾಯಕರು ಭಾಗಿ
ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ
ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು