AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಸಿಂಧೂರ್​​ ಬೆನ್ನಲ್ಲೇ ಕರ್ನಾಟದ ಡ್ಯಾಂಗಳಲ್ಲಿ ಹೈ ಅಲರ್ಟ್: ಬಿಗಿ ಭದ್ರತೆ

ಪಾಕಿಸ್ತಾನದ ಉಗ್ರರ ಮೇಲಿನ ವೈಮಾನಿಕ ದಾಳಿಯ ಹಿನ್ನೆಲೆಯಲ್ಲಿ ದೇಶದ ಡ್ಯಾಂಗಳಲ್ಲಿ ಭದ್ರತೆಗೆ ಸೂಚನೆ ನೀಡಲಾಗಿದೆ. ಹೀಗಾಗಿ ಕರ್ನಾಟಕದ ಅಣೆಕಟ್ಟುಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಆಲಮಟ್ಟಿ ಮತ್ತು ಹೇಮಾವತಿ ಅಣೆಕಟ್ಟುಗಳಲ್ಲಿ ಕೈಗಾರಿಕಾ ಭದ್ರತಾ ಪಡೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ, ವಾಹನ ತಪಾಸಣೆ, ಸಿಸಿಟಿವಿ ಕಣ್ಗಾವಲು ಇರಲಿದೆ.

ಆಪರೇಷನ್ ಸಿಂಧೂರ್​​ ಬೆನ್ನಲ್ಲೇ ಕರ್ನಾಟದ ಡ್ಯಾಂಗಳಲ್ಲಿ ಹೈ ಅಲರ್ಟ್: ಬಿಗಿ ಭದ್ರತೆ
ಹೇಮಾವತಿ, ಆಲಮಟ್ಟಿ ಡ್ಯಾಂ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: May 08, 2025 | 2:53 PM

Share

ಬೆಂಗಳೂರು, ಮೇ 08: ಪಾಕ್ ಬೆಂಗಲಿತ ಉಗ್ರರು ಜಮ್ಮು ಕಾಶ್ಮೀರದ ಪೆಹೆಲ್ಗಾಮ್​ನಲ್ಲಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದಕ್ಕೆ ದೇಶದ ಸೇನೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿ ಪ್ರತೀಕಾರ ತೀರಿಸಿಕೊಂಡಿದೆ. ಸದ್ಯ ಪಾಕಿಸ್ತಾನ ಯುದ್ದದ ಭೀತಿ ಎದುರಿಸುತ್ತಿದೆ. ಆಪರೇಷನ್ ಸಿಂಧೂರ್ (Operation Sindoor)​ ಯಶಸ್ವಿ ಹಿನ್ನಲೆ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ಹಾಗಾಗಿ ದೇಶದ ಡ್ಯಾಂಗಳಲ್ಲಿ ಭದ್ರತೆಗೆ ಸೂಚನೆ ಬೆನ್ನಲ್ಲೇ ಇತ್ತ ಕರ್ನಾಟದ ಡ್ಯಾಂಗಳಲ್ಲಿ (Dam) ಬಿಗಿ ಭದ್ರತೆ ಸೂಚಿಸಲಾಗಿದೆ.

ಆಲಮಟ್ಟಿ ಡ್ಯಾಂನಲ್ಲಿ ಭದ್ರತೆ ಬಿರುಸು

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಡ್ಯಾಂನಲ್ಲಿ ಭದ್ರತೆ ಬಿರುಸುಗೊಂಡಿದೆ. ಈಗಾಗಲೇ ಭದ್ರತೆಯ ನೇತೃತ್ವ ವಹಿಸಿಕೊಂಡಿರುವ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಮತ್ತಷ್ಟು ಭದ್ರತೆಯನ್ನು ಹೆಚ್ಚಿಸಿಕೊಂಡಿದೆ.

ಇದನ್ನೂ ಓದಿ: ಭಾರತೀಯ ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಪೂಜೆ ವೇಳೆ ಬಲಭಾಗದಿಂದ ಹೂ ನೀಡಿದ ದೇವರು

ಆಲಮಟ್ಟಿ ಡ್ಯಾಂ ಪ್ರವೇಶ‌ ದ್ವಾರದಿಂದಲೇ ಎಲ್ಲಾ ವಾಹನಗಳ ತಪಾಸಣೆ ಮಾಡಲಾಗುವುದು. ಬಾರೀ ಹಾಗೂ ಗೂಡ್ಸ್ ವಾಹನಗಳಿಗೆ ನಿಷೇಧಿಸಲಾಗಿದೆ, ಓರ್ವ ಡಿವೈಎಸ್​​ಪಿ ನೇತೃತ್ವದಲ್ಲಿ ಒಟ್ಟು 86 ಕೆಎಸ್ಐಎಸ್ಎಫ್ ಅಧಿಕಾರಿಗಳಿಂದ ಆಧುನಿಕ ಶಸ್ತ್ರಾಸ್ತ್ರಗಳ ಸಹಿತ ಭದ್ರತೆ ಒದಗಿಸಲಾಗಿದೆ. ಡ್ಯಾಂ ಆವರಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಇರಲಿದೆ. ನಿತ್ಯ 24 ಗಂಟೆಗಳ ಕಾಲ ಮೂರು ಪಾಳಯದಲ್ಲಿ ಭದ್ರತೆ ಇರಲಿದೆ. ಬೋಟ್ ಮೂಲಕ ಡ್ಯಾಂ ಹಿನ್ನೀರಿನಲ್ಲೂ ತಪಾಸಣೆ ಕಟ್ಟೆಚ್ಚರ ವಹಿಸಲಾಗಿದೆ.

ಹೇಮಾವತಿ ಜಲಾಶಯಕ್ಕೆ ಭದ್ರತೆ ನೀಡಿರುವ ಕೈಗಾರಿಕಾ ಭದ್ರತಾ ಪಡೆ

ಅದೇ ರೀತಿಯಾಗಿ ಹಾಸನ ತಾಲ್ಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯದ ಮೇಲೆ ತೀವ್ರ ನಿಗಾ ಇಡಲು ಭದ್ರತಾ ಪಡೆಗೆ ಭದ್ರತಾ ಇಲಾಖೆ ವಿಶೇಷ ಸೂಚನೆ ನೀಡಿದೆ. ಹೇಮಾವತಿ ಜಲಾಯಶದಲ್ಲಿ ಕೈಗಾರಿಕಾ ಭದ್ರತಾ ಪಡೆಯಿಂದ ಹೈ ಅಲರ್ಟ್ ಘೋಷಿಸಲಾಗಿದೆ. ಓರ್ವ ಪಿಐ, ಓರ್ವ ಪಿಎಸ್​ಐ, ನಾಲ್ವರು ಎಎಸ್​ಐ ಸೇರಿ 22 ಪೊಲೀಸರಿಂದ ಭ ದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: ರಾಯಚೂರಿನಲ್ಲಿ ರೈಲ್ವೆ ಇಲಾಖೆಯಿಂದ ಮಾಕ್ ಡ್ರಿಲ್: ತಾಲೀಮು ಪ್ರದರ್ಶನ ಹೇಗಿತ್ತು ನೋಡಿ

ಏರ್‌ಸ್ಟ್ರೈಕ್, ದ್ರೋಣ್ ಅಟ್ಯಾಕ್ ಆಗವ ಸಾಧ್ಯತೆ ಹಿನ್ನೆಲೆಯಲ್ಲಿ ತೀವ್ರ ನಿಗಾವಹಿಸಲು ಸೂಚಿಸಿದ್ದು, ದಾಳಿಯಾದ ವೇಳೆ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಈಗಾಗಲೇ ಅಧಿಕಾರಿಗಳಿಂದ (ಡೆಮೋ) ಐಎಸ್‌ಡಿ ಡಿಜಿ ಮಾಹಿತಿ ಪಡೆದುಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

ಈ ಬಗ್ಗೆ ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಆಣೆಕಟ್ಟೆ ಭದ್ರತೆಗೆ ಎಲ್ಲಾ ಕಡೆ ಅಲರ್ಟ್ ಮಾಡಲಾಗಿದೆ. ಯಾವ ಟೈಮ್​​ನಲ್ಲಿ ಏನಾದರೂ ಆಗಬಹುದು ಎಂಬ ಕಾರಣಕ್ಕೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ