AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಬಹುತೇಕ ಭರ್ತಿಗೊಂಡ ಕೆಆರ್​ಎಸ್, ರಾಜ್ಯದ ವಿವಿಧ ಅಣೆಕಟ್ಟುಗಳ ಸದ್ಯದ ಸ್ಥಿತಿಗತಿ ಹೀಗಿದೆ

ಕೆಆರ್​ಎಸ್ ಅಣೆಕಟ್ಟು ಬಹುತೇಕ ಭರ್ತಿಗೊಂಡಿದ್ದು, 49.45 ಟಿಎಂಸಿ ಸಾಮರ್ಥ್ಯದ ಈ ಅಣೆಕಟ್ಟಿನಲ್ಲಿ 46.46 ಟಿಎಂಸಿ ನೀರು ಸಂಗ್ರಹವಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಬಹುತೇಕ ಭರ್ತಿಗೊಂಡ ಕೆಆರ್​ಎಸ್, ರಾಜ್ಯದ ವಿವಿಧ ಅಣೆಕಟ್ಟುಗಳ ಸದ್ಯದ ಸ್ಥಿತಿಗತಿ ಹೀಗಿದೆ
ಅಣೆಕಟ್ಟಿನ ಸಾಂಕೇತಿಕ ಚಿತ್ರ
TV9 Web
| Updated By: Rakesh Nayak Manchi|

Updated on:Jul 10, 2022 | 4:28 PM

Share

ಅರಬ್ಬೀ ಸಮುದ್ರ, ಒಡಿಶಾ ಭಾಗದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮನ ಇಲಾಖೆ ತಿಳಿಸಿದೆ. ಇಂದು ಸೇರಿ ಮುಂದಿನ ನಾಲ್ಕು ದಿನ  ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದ 5 ಜಿಲ್ಲೆಗಳು, ಮಲೆನಾಡಿನ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಬಹುತೇಕ ನದಿಗಳು ಪ್ರವಾಹ ಮಟ್ಟದಲ್ಲಿ ತುಂಬಿ ಹರಿಯಲು ಆರಂಭಿಸಿದ್ದು, ಅಣೆಕಟ್ಟುಗಳಿಗೆ ನೀರಿನ ಒಳಹರಿವು ಹೆಚ್ಚಾಗಿದೆ. ಅದರಂತೆ ಕೆಆರ್​ಎಸ್ ಅಣೆಕಟ್ಟು ಬಹುತೇಕ ಭರ್ತಿಗೊಂಡಿದ್ದು, 49.45 ಟಿಎಂಸಿ ಸಾಮರ್ಥ್ಯದ ಈ ಅಣೆಕಟ್ಟಿನಲ್ಲಿ 46.46 ಟಿಎಂಸಿ ನೀರು ಸಂಗ್ರಹವಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್, ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ, ಇಂದಿನ ನೀರಿನ ಮಟ್ಟ- 46.46 ಟಿಎಂಸಿ, ಇಂದಿನ ಒಳಹರಿವು- 30216 ಕ್ಯೂಸೆಕ್ಸ್​, ಇಂದಿನ ಹೊರಹರಿವು-11633 ಕ್ಯೂಸೆಕ್ಸ್,​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್, ಒಟ್ಟು ಸಾಮರ್ಥ್ಯ – 31.10 ಟಿಎಂಸಿ, ಇಂದಿನ ನೀರಿನ ಮಟ್ಟ- 7.68 ಟಿಎಂಸಿ, ಇಂದಿನ ಒಳಹರಿವು- 7365 ಕ್ಯೂಸೆಕ್ಸ್​, ಇಂದಿನ ಹೊರಹರಿವು- 0​​ ಕ್ಯೂಸೆಕ್.

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್, ಒಟ್ಟು ಸಾಮರ್ಥ್ಯ – 8.50 ಟಿಎಂಸಿ, ಇಂದಿನ ನೀರಿನ ಮಟ್ಟ- 7.10 ಟಿಎಂಸಿ, ಇಂದಿನ ಒಳಹರಿವು- 16017 ಕ್ಯೂಸೆಕ್ಸ್, ​ಇಂದಿನ ಹೊರಹರಿವು- 14823 ಕ್ಯೂಸೆಕ್ಸ್​​

ಇದನ್ನೂ ಓದಿ: Karnataka Rain: ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ ಆರ್ಭಟ; ವಿವಿಧ ಜಿಲ್ಲೆಗಳಿಗೆ ಅಲರ್ಟ್​​ ಘೋಷಣೆ

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್, ಒಟ್ಟು ಸಾಮರ್ಥ್ಯ – 37.10 ಟಿಎಂಸಿ, ಇಂದಿನ ನೀರಿನ ಮಟ್ಟ- 33.80 ಟಿಎಂಸಿ, ಇಂದಿನ ಒಳಹರಿವು-15723 ಕ್ಯೂಸೆಕ್ಸ್​​, ಇಂದಿನ ಹೊರಹರಿವು- 1345 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್, ಒಟ್ಟು ಸಾಮರ್ಥ್ಯ – 19.09 ಟಿಎಂಸಿ, ಇಂದಿನ ನೀರಿನ ಮಟ್ಟ- 18.32 ಟಿಎಂಸಿ, ಇಂದಿನ ಒಳಹರಿವು- 18303 ಕ್ಯೂಸೆಕ್ಸ್​, ಇಂದಿನ ಹೊರಹರಿವು-7458 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್, ಒಟ್ಟು ಸಾಮರ್ಥ್ಯ – 151.75 ಟಿಎಂಸಿ, ಇಂದಿನ ನೀರಿನ ಮಟ್ಟ- 50.13 ಟಿಎಂಸಿ, ಇಂದಿನ ಒಳಹರಿವು- 36086 ಕ್ಯೂಸೆಕ್ಸ್​ಇಂದಿನ ಹೊರಹರಿವು- 2377 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್, ಒಟ್ಟು ಸಾಮರ್ಥ್ಯ- 145.33 ಟಿಎಂಸಿ, ಇಂದಿನ ನೀರಿನ ಮಟ್ಟ-37.20 ಟಿಎಂಸಿ, ಇಂದಿನ ಒಳಹರಿವು- 34739 ಕ್ಯೂಸೆಕ್ಸ್​ಇಂದಿನ ಹೊರಹರಿವು- 0 ಕ್ಯೂಸೆಕ್ಸ್​​

ಇದನ್ನೂ ಓದಿ: Weather: ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಕರ್ನಾಟಕ, ಗುಜರಾತ್ ಕರಾವಳಿಯಲ್ಲಿ ಮುಂದುವರಿಯಲಿದೆ ವರುಣನ ಆರ್ಭಟ

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್, ಒಟ್ಟು ಸಾಮರ್ಥ್ಯ- 100.86 ಟಿಎಂಸಿ, ಇಂದಿನ ನೀರಿನ ಮಟ್ಟ- 80.55 ಟಿಎಂಸಿ, ಇಂದಿನ ಒಳಹರಿವು- 88270 ಕ್ಯೂಸೆಕ್ಸ್​, ಇಂದಿನ ಹೊರಹರಿವು- 320 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್, ಒಟ್ಟು ಸಾಮರ್ಥ್ಯ – 71.54 ಟಿಎಂಸಿ, ಇಂದಿನ ನೀರಿನ ಮಟ್ಟ- 54.23 ಟಿಎಂಸಿ, ಇಂದಿನ ಒಳಹರಿವು- 31989 ಕ್ಯೂಸೆಕ್ಸ್, ​ಇಂದಿನ ಹೊರಹರಿವು-149 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್, ​ಒಟ್ಟು ಸಾಮರ್ಥ್ಯ – 37.73 ಟಿಎಂಸಿ, ಇಂದಿನ ನೀರಿನ ಮಟ್ಟ- 13.82 ಟಿಎಂಸಿ, ಇಂದಿನ ಒಳಹರಿವು- 6791 ಕ್ಯೂಸೆಕ್ಸ್​, ಇಂದಿನ ಹೊರಹರಿವು- 194 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್, ​ಒಟ್ಟು ಸಾಮರ್ಥ್ಯ – 51.00 ಟಿಎಂಸಿ, ಇಂದಿನ ನೀರಿನ ಮಟ್ಟ- 13.17 ಟಿಎಂಸಿ, ಇಂದಿನ ಒಳಹರಿವು- 28247 ಕ್ಯೂಸೆಕ್ಸ್​​, ಇಂದಿನ ಹೊರಹರಿವು- 108 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್, ಒಟ್ಟು ಸಾಮರ್ಥ್ಯ – 123.08 ಟಿಎಂಸಿ, ಇಂದಿನ ನೀರಿನ ಮಟ್ಟ- 77.03 ಟಿಎಂಸಿ, ಇಂದಿನ ಒಳಹರಿವು- 75149 ಕ್ಯೂಸೆಕ್ಸ್​ಇಂದಿನ ಹೊರಹರಿವು- 451 ಕ್ಯೂಸೆಕ್ಸ್.

ಇದನ್ನೂ ಓದಿ: ಮಳೆಗಾಗಿ ವಿಜಯಪುರ ‌ಜಿಲ್ಲೆಯಲ್ಲಿ ವಿಶಿಷ್ಟ ಆಚರಣೆ: ಹೂತಿದ್ದ ಶವ ಮೇಲೆ ನೀರು ಹಾಕಿ‌ ಮಳೆಗಾಗಿ ಪ್ರಾರ್ಥನೆ

Published On - 4:28 pm, Sun, 10 July 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?