AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೇ ದಿನಕ್ಕೆ 9 ಅಡಿ ಭರ್ತಿಯಾದ ಕೆಆರ್​ಎಸ್ ಡ್ಯಾಂ​: ಆಲಮಟ್ಟಿ ಸೇರಿ ಉಳಿದ ಜಲಾಶಯಗಳಿಗೂ ಭಾರಿ ಒಳಹರಿವು

Karnataka Dams Water Level Today: ಕರ್ನಾಟಕದಾದ್ಯಂತ ಅವಧಿಗೂ ಮುನ್ನವೇ ಮುಂಗಾರು ಮಳೆ ಬಿರುಸುಗೊಂಡಿದ್ದು, ಕೇವಲ ಮೂರೇ ದಿನಗಳಲ್ಲಿ ಕೆಆರ್​ಎಸ್ ಜಲಾಶಯ 9 ಅಡಿಯಷ್ಟು ತುಂಬಿದೆ. ಆಲಮಟ್ಟಿ ಸೇರಿದಂತೆ ರಾಜ್ಯದ ಇತರ ಅಣೆಕಟ್ಟೆಗಳಲ್ಲಿಯೂ ಒಳಹರಿವು ಬಹಳ ಉತ್ತಮವಾಗಿದೆ. ಮೇ 29 ರಂದು ಡ್ಯಾಂ ನೀರಿನ ಮಟ್ಟದ ಬಗ್ಗೆ ಇಲ್ಲಿದೆ ವಿವರ.

ಮೂರೇ ದಿನಕ್ಕೆ 9 ಅಡಿ ಭರ್ತಿಯಾದ ಕೆಆರ್​ಎಸ್ ಡ್ಯಾಂ​: ಆಲಮಟ್ಟಿ ಸೇರಿ ಉಳಿದ ಜಲಾಶಯಗಳಿಗೂ ಭಾರಿ ಒಳಹರಿವು
ಕೆಆರ್​ಎಸ್ ಡ್ಯಾಂ​ (ಸಂಗ್ರಹ ಚಿತ್ರ)
ದಿಲೀಪ್​, ಚೌಡಹಳ್ಳಿ
| Edited By: |

Updated on: May 29, 2025 | 9:57 AM

Share

ಬೆಂಗಳೂರು, ಮೇ 29: ಅವಧಿಗೂ ಮುನ್ನವೇ ಕರ್ನಾಟಕಕ್ಕೆ ಕಾಲಿಟ್ಟಿರುವ ಮುಂಗಾರು ಮಳೆ (Monsoon Rain)ರಾಜ್ಯದ ಅನೇಕ ಕಡೆಗಳಲ್ಲಿ ಅವಾಂತರಗಳನ್ನೇ ಸೃಷ್ಟಿಸಿದೆ. ಪಶ್ಚಿಮ ಘಟ್ಟ ಪ್ರದೇಶಗಳು ಸೇರಿದಂತೆ ಅನೇಕ ಕಡೆಗಳಲ್ಲಿ ವರ್ಷಧಾರೆ ಸುರಿಯುತ್ತಿದ್ದು, ನದಿಗಳ ಹರಿವಿನ ಮಟ್ಟ ಹೆಚ್ಚಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟ ತಾಲೂಕಿನಲ್ಲಿರುವ ಕೃಷ್ಣರಾಜಸಾಗರ ಜಲಾಶಯ  (KRS Dam) ಮೂರೇ ದಿನಗಳಲ್ಲಿ 9 ಅಡಿ ಭರ್ತಿಯಾಗಿದೆ. ಸದ್ಯ ಜಲಾಶಯದ ನೀರಿನ ಮಟ್ಟ 98 ಅಡಿ ತಲುಪಿದೆ. ಇದು 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಜಲಾಶಯವಾಗಿದೆ.

ಕೆಆರ್​ಎಸ್​ ಜಲಾಶಯಕ್ಕೆ ಸದ್ಯ 22 ಸಾವಿರ ಕ್ಯೂಸೆಕ್ ನೀರು ಒಳಹರಿವು ಇದೆ. ಡ್ಯಾಂನಿಂದ 630 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.

ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಇದೇ ರೀತಿ ಮಳೆ ಮುಂದುವರಿದರೆ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ನೀರಿನ ಮಟ್ಟ 100 ಅಡಿ ದಾಟುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋವಿಡ್ ಆರ್​ಟಿಪಿಸಿಆರ್ ಲ್ಯಾಬ್ ಪುನರಾರಂಭ
Image
ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಜೂನ್ 2ರವರೆಗೆ ಮಳೆಯ ಅಬ್ಬರ
Image
ಬೆಳಗಾವಿ: ಹಳ್ಳದಲ್ಲಿ ಎತ್ತಿನ ಗಾಡಿ ಮಗುಚಿ ಬಿದ್ದು ಇಬ್ಬರು ಮಕ್ಕಳು ಸಾವು
Image
ಭಾರಿ ಮಳೆಯಿಂದ ಕರ್ನಾಟಕದ ಈ ಎರಡು ಕಡೆ ಅರಣ್ಯ ಸಫಾರಿ ರದ್ದು

ಒಂದು ತಿಂಗಳು ಮೊದಲೇ ಡ್ಯಾಂನಲ್ಲಿ ಹೆಚ್ಚಾದ ಸಂಗ್ರಹ

ಸಾಮಾನ್ಯವಾಗಿ ಜೂನ್ ಅಂತ್ಯ ಅಥವಾ ಜುಲೈನಲ್ಲಿ ಮಾತ್ರ ನೀರಿನ ಮಟ್ಟ 100 ಅಡಿ ದಾಟುತ್ತದೆ. ಕಳೆದ ಮೂರು ದಿನಗಳಲ್ಲಿ ಕೊಡಗು ಮತ್ತು ಮೈಸೂರಿನಲ್ಲಿ ಭಾರಿ ಮಳೆಯಾದ ಕಾರಣ ಅಣೆಕಟ್ಟೆಗೆ ಉತ್ತಮ ಪ್ರಮಾಣದ ನೀರು ಬಂದಿದ್ದು, ಒಟ್ಟಾರೆಯಾಗಿ 6 ಅಡಿಗಳಿಗಿಂತ ಹೆಚ್ಚು ಏರಿಕೆಯಾಗಿದೆ. ಶನಿವಾರ 150 ಕ್ಯೂಸೆಕ್ ಇದ್ದ ಒಳಹರಿವು ಬುಧವಾರ ಬೆಳಿಗ್ಗೆ 8 ಗಂಟೆಗೆ 26,424 ಕ್ಯೂಸೆಕ್‌ಗೆ ಏರಿತು ಎಂದು ಮೂಲಗಳು ತಿಳಿಸಿವೆ.

ಆಲಮಟ್ಟಿ ಡ್ಯಾಂಗೆ ಒಳ ಹರಿವು ಹೆಚ್ಚಳ

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ಡ್ಯಾಂಗೆ 60,379 ಕ್ಯೂಸೆಕ್ ಒಳ‌ ಹರಿವು ದಾಖಲಾಗಿದೆ. ಸದ್ಯ ಡ್ಯಾಂನಿಂದ 530 ಕ್ಯೂಸೆಕ್ ನೀರಿನ ಹೊರ ಹರಿವು ಇದೆ. 519.60 ಮೀಟರ್ ಎತ್ತರದ ಡ್ಯಾಂನಲ್ಲಿ 512.78 ಮೀಟರ್ ನೀರು ಸಂಗ್ರಹವಾಗಿದೆ. ವಾಡಿಕೆಗಿಂತ ಮೊದಲೇ ಹೆಚ್ಚಿನ ಒಳ‌ ಹರಿವು ಕಂಡುಬಂದಿರುವುದು ಡ್ಯಾಂ ಬೇಗನೆ ಗರಿಷ್ಠ ಮಟ್ಟ ತಲುಪುವ ಭರವಸೆ ನೀಡಿದೆ. ಇದರಿಂದ ರೈತರೂ ಖುಷಿಯಾಗಿದ್ದಾರೆ.

ಉಳಿದ ಡ್ಯಾಂಗಳಲ್ಲಿ ಹೇಗಿದೆ ನೀರಿನ ಮಟ್ಟ?

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಹಂಚಿಕೊಂಡ ಮಾಹಿತಿಯ ಪ್ರಕಾರ, ಲಿಂಗನಮಕ್ಕಿ ಜಲಾಶಯದ ಒಳಹರಿವು ಹೆಚ್ಚಾಗಿದ್ದು ಮಂಗಳವಾರವೇ 33.39 ಟಿಎಂಸಿಯಷ್ಟು ನೀರು ಸಂಗ್ರಹವಾಗಿತ್ತು. ಇದು ಒಟ್ಟು ಸಂಗ್ರಹ ಸಾಮರ್ಥ್ಯದ ಶೇ 22 ಆಗಿದೆ. ಕಳೆದ ವರ್ಷ ಇದೇ ಸಮಯದಲ್ಲಿ 15.63 ಟಿಎಂಸಿ ನೀರು ಸಂಗ್ರಹವಾಗಿತ್ತು.

ಇದನ್ನೂ ಓದಿ: ಭಾರಿ ಮಳೆ ಕಾರಣ ಮೇ ತಿಂಗಳಲ್ಲೇ ಆಲಮಟ್ಟಿ ಡ್ಯಾಂಗೆ 52,650 ಕ್ಯೂಸೆಕ್ ಒಳ ಹರಿವು: ಸಂಭ್ರಮದಲ್ಲಿ ರೈತರು

ಭದ್ರಾ ಜಲಾಶಯವು ಗರಿಷ್ಠ ಸಾಮರ್ಥ್ಯದ ಶೇ 35, ಅಂದರೆ 71.54 ಟಿಎಂಸಿಗಿಂತಲೂ ಹೆಚ್ಚಿನ ಮಟ್ಟವನ್ನು ತಲುಪಿದೆ. ತುಂಗಭದ್ರಾ ಜಲಾಶಯದ ಗರಿಷ್ಠ ಸಾಮರ್ಥ್ಯ 105.79 ಟಿಎಂಸಿ ಆಗಿದ್ದು, ಶೇ 11 ರಷ್ಟು ಅಂದರೆ 11.24 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ