ಮೇಕೆದಾಟುನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ; ಡಿಸಿಎಂ ಡಿಕೆ ಶಿವಕುಮಾರ್ ಪುನರುಚ್ಚಾರ

ಬೆಂಗಳೂರಿಗೆ ನೀರಿನ ಅವಶ್ಯಕತೆ ತುಂಬಾ ಇದೆ. ಹೀಗಾಗಿಯೇ ನಾವು ಮೇಕೆದಾಟು ಪಾದಯಾತ್ರೆ ಮಾಡಿದ್ದೆವು. ಕಾವೇರಿ ನೀರು ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮೇಕೆದಾಟುನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ; ಡಿಸಿಎಂ ಡಿಕೆ ಶಿವಕುಮಾರ್ ಪುನರುಚ್ಚಾರ
ಡಿಕೆ ಶಿವಕುಮಾರ್
Follow us
| Updated By: ಗಣಪತಿ ಶರ್ಮ

Updated on:Jun 27, 2023 | 3:48 PM

ಬೆಂಗಳೂರು: ಕಾವೇರಿ ನೀರು (Kaveri Water) ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ. ಹೀಗಾಗಿ ಮೇಕೆದಾಟುವಿನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಆ ಮೂಲಕ ಮೇಕೆದಾಟು (Mekedatu) ಯೋಜನೆ ಜಾರಿ ಮಾಡಿಯೇ ಸಿದ್ಧ ಎಂದು ಪರೋಕ್ಷವಾಗಿ ಪುನರುಚ್ಚರಿಸಿದ್ದಾರೆ.

ವಿಧಾನಸೌಧ ಬ್ಯಾಂಕ್ವೆಟ್ ಹಾಲ್​​ನಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬೆಂಗಳೂರಿಗೆ ನೀರಿನ ಅವಶ್ಯಕತೆ ತುಂಬಾ ಇದೆ. ಹೀಗಾಗಿಯೇ ನಾವು ಮೇಕೆದಾಟು ಪಾದಯಾತ್ರೆ ಮಾಡಿದ್ದೆವು. ಕಾವೇರಿ ನೀರು ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ. ಈ ಹಿಂದೆ ಇದ್ದ ಬೊಮ್ಮಾಯಿ ಸರ್ಕಾರ ಈ ಕೆಲಸವನ್ನು ಮಾಡಿಲ್ಲ. ನಾವು ಮೇಕೆದಾಟುವಿನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಮೇಕದಾಟು ಯೋಜನೆ ಬಗ್ಗೆ ಹೇಳಿಕೆ ನೀಡಿದ್ದರು. ಇದಕ್ಕೆ ತಮಿಳುನಾಡು ಸರ್ಕಾರದಿಂದ ಆಕ್ಷೇಪವೂ ವ್ಯಕ್ತವಾಗಿತ್ತು.

ಇದನ್ನೂ ಓದಿ: Mekedatu project ಮೇಕೆದಾಟು ಬಗ್ಗೆ ತಮಿಳುನಾಡು ಸರ್ಕಾರದಿಂದ ಹೊಸ ಕ್ಯಾತೆ ; ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಗೆ ಮನವಿ

‘ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು ನಾವು’

ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟುಕೊಂಡ ಜನ ನಾವು. ಕೆಂಪೇಗೌಡ ಜಯಂತಿ ಕೇವಲ ಬೆಂಗಳೂರಿಗೆ ಸೀಮಿತ ಆಗಬಾರದು. ರಾಜ್ಯಮಟ್ಟದಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಬೇಕು. ಟೀಕೆ ಮಾಡುವವರು ಮಾಡುತ್ತಾ ಇರಲಿ. ಬಾವುಟ ಕಟ್ಟೋರು ಕಟ್ತಿರಲಿ, ಸೌಂಡ್ ಮಾಡೋರು ಮಾಡುತ್ತಿರಲಿ. ಧರಣಿ ಕೂರುತ್ತೇನೆ ಅನ್ನೋ ನಾಯಕರು ಧರಣಿ ಕೂರಲಿ. ನಾನು ಮಾತ್ರ ನಿಲ್ಲೋನಲ್ಲ, ಮುಂದಕ್ಕೆ ಹೋಗ್ತಾ ಇರುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:46 pm, Tue, 27 June 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ