AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟುನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ; ಡಿಸಿಎಂ ಡಿಕೆ ಶಿವಕುಮಾರ್ ಪುನರುಚ್ಚಾರ

ಬೆಂಗಳೂರಿಗೆ ನೀರಿನ ಅವಶ್ಯಕತೆ ತುಂಬಾ ಇದೆ. ಹೀಗಾಗಿಯೇ ನಾವು ಮೇಕೆದಾಟು ಪಾದಯಾತ್ರೆ ಮಾಡಿದ್ದೆವು. ಕಾವೇರಿ ನೀರು ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮೇಕೆದಾಟುನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ; ಡಿಸಿಎಂ ಡಿಕೆ ಶಿವಕುಮಾರ್ ಪುನರುಚ್ಚಾರ
ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on:Jun 27, 2023 | 3:48 PM

Share

ಬೆಂಗಳೂರು: ಕಾವೇರಿ ನೀರು (Kaveri Water) ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ. ಹೀಗಾಗಿ ಮೇಕೆದಾಟುವಿನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಆ ಮೂಲಕ ಮೇಕೆದಾಟು (Mekedatu) ಯೋಜನೆ ಜಾರಿ ಮಾಡಿಯೇ ಸಿದ್ಧ ಎಂದು ಪರೋಕ್ಷವಾಗಿ ಪುನರುಚ್ಚರಿಸಿದ್ದಾರೆ.

ವಿಧಾನಸೌಧ ಬ್ಯಾಂಕ್ವೆಟ್ ಹಾಲ್​​ನಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬೆಂಗಳೂರಿಗೆ ನೀರಿನ ಅವಶ್ಯಕತೆ ತುಂಬಾ ಇದೆ. ಹೀಗಾಗಿಯೇ ನಾವು ಮೇಕೆದಾಟು ಪಾದಯಾತ್ರೆ ಮಾಡಿದ್ದೆವು. ಕಾವೇರಿ ನೀರು ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ. ಈ ಹಿಂದೆ ಇದ್ದ ಬೊಮ್ಮಾಯಿ ಸರ್ಕಾರ ಈ ಕೆಲಸವನ್ನು ಮಾಡಿಲ್ಲ. ನಾವು ಮೇಕೆದಾಟುವಿನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಮೇಕದಾಟು ಯೋಜನೆ ಬಗ್ಗೆ ಹೇಳಿಕೆ ನೀಡಿದ್ದರು. ಇದಕ್ಕೆ ತಮಿಳುನಾಡು ಸರ್ಕಾರದಿಂದ ಆಕ್ಷೇಪವೂ ವ್ಯಕ್ತವಾಗಿತ್ತು.

ಇದನ್ನೂ ಓದಿ: Mekedatu project ಮೇಕೆದಾಟು ಬಗ್ಗೆ ತಮಿಳುನಾಡು ಸರ್ಕಾರದಿಂದ ಹೊಸ ಕ್ಯಾತೆ ; ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಗೆ ಮನವಿ

‘ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು ನಾವು’

ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟುಕೊಂಡ ಜನ ನಾವು. ಕೆಂಪೇಗೌಡ ಜಯಂತಿ ಕೇವಲ ಬೆಂಗಳೂರಿಗೆ ಸೀಮಿತ ಆಗಬಾರದು. ರಾಜ್ಯಮಟ್ಟದಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಬೇಕು. ಟೀಕೆ ಮಾಡುವವರು ಮಾಡುತ್ತಾ ಇರಲಿ. ಬಾವುಟ ಕಟ್ಟೋರು ಕಟ್ತಿರಲಿ, ಸೌಂಡ್ ಮಾಡೋರು ಮಾಡುತ್ತಿರಲಿ. ಧರಣಿ ಕೂರುತ್ತೇನೆ ಅನ್ನೋ ನಾಯಕರು ಧರಣಿ ಕೂರಲಿ. ನಾನು ಮಾತ್ರ ನಿಲ್ಲೋನಲ್ಲ, ಮುಂದಕ್ಕೆ ಹೋಗ್ತಾ ಇರುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:46 pm, Tue, 27 June 23

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ