AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟುನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ; ಡಿಸಿಎಂ ಡಿಕೆ ಶಿವಕುಮಾರ್ ಪುನರುಚ್ಚಾರ

ಬೆಂಗಳೂರಿಗೆ ನೀರಿನ ಅವಶ್ಯಕತೆ ತುಂಬಾ ಇದೆ. ಹೀಗಾಗಿಯೇ ನಾವು ಮೇಕೆದಾಟು ಪಾದಯಾತ್ರೆ ಮಾಡಿದ್ದೆವು. ಕಾವೇರಿ ನೀರು ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮೇಕೆದಾಟುನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ; ಡಿಸಿಎಂ ಡಿಕೆ ಶಿವಕುಮಾರ್ ಪುನರುಚ್ಚಾರ
ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Edited By: |

Updated on:Jun 27, 2023 | 3:48 PM

Share

ಬೆಂಗಳೂರು: ಕಾವೇರಿ ನೀರು (Kaveri Water) ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ. ಹೀಗಾಗಿ ಮೇಕೆದಾಟುವಿನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಆ ಮೂಲಕ ಮೇಕೆದಾಟು (Mekedatu) ಯೋಜನೆ ಜಾರಿ ಮಾಡಿಯೇ ಸಿದ್ಧ ಎಂದು ಪರೋಕ್ಷವಾಗಿ ಪುನರುಚ್ಚರಿಸಿದ್ದಾರೆ.

ವಿಧಾನಸೌಧ ಬ್ಯಾಂಕ್ವೆಟ್ ಹಾಲ್​​ನಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬೆಂಗಳೂರಿಗೆ ನೀರಿನ ಅವಶ್ಯಕತೆ ತುಂಬಾ ಇದೆ. ಹೀಗಾಗಿಯೇ ನಾವು ಮೇಕೆದಾಟು ಪಾದಯಾತ್ರೆ ಮಾಡಿದ್ದೆವು. ಕಾವೇರಿ ನೀರು ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ. ಈ ಹಿಂದೆ ಇದ್ದ ಬೊಮ್ಮಾಯಿ ಸರ್ಕಾರ ಈ ಕೆಲಸವನ್ನು ಮಾಡಿಲ್ಲ. ನಾವು ಮೇಕೆದಾಟುವಿನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಮೇಕದಾಟು ಯೋಜನೆ ಬಗ್ಗೆ ಹೇಳಿಕೆ ನೀಡಿದ್ದರು. ಇದಕ್ಕೆ ತಮಿಳುನಾಡು ಸರ್ಕಾರದಿಂದ ಆಕ್ಷೇಪವೂ ವ್ಯಕ್ತವಾಗಿತ್ತು.

ಇದನ್ನೂ ಓದಿ: Mekedatu project ಮೇಕೆದಾಟು ಬಗ್ಗೆ ತಮಿಳುನಾಡು ಸರ್ಕಾರದಿಂದ ಹೊಸ ಕ್ಯಾತೆ ; ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂಗೆ ಮನವಿ

‘ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು ನಾವು’

ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟುಕೊಂಡ ಜನ ನಾವು. ಕೆಂಪೇಗೌಡ ಜಯಂತಿ ಕೇವಲ ಬೆಂಗಳೂರಿಗೆ ಸೀಮಿತ ಆಗಬಾರದು. ರಾಜ್ಯಮಟ್ಟದಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಬೇಕು. ಟೀಕೆ ಮಾಡುವವರು ಮಾಡುತ್ತಾ ಇರಲಿ. ಬಾವುಟ ಕಟ್ಟೋರು ಕಟ್ತಿರಲಿ, ಸೌಂಡ್ ಮಾಡೋರು ಮಾಡುತ್ತಿರಲಿ. ಧರಣಿ ಕೂರುತ್ತೇನೆ ಅನ್ನೋ ನಾಯಕರು ಧರಣಿ ಕೂರಲಿ. ನಾನು ಮಾತ್ರ ನಿಲ್ಲೋನಲ್ಲ, ಮುಂದಕ್ಕೆ ಹೋಗ್ತಾ ಇರುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:46 pm, Tue, 27 June 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ