AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು: ಸುಪ್ರೀಂಕೋರ್ಟ್‌ನಿಂದ ಬೈಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದ ಡಿಕೆ ಶಿವಕುಮಾರ್

ತಮಿಳುನಾಡಿಗೆ ಪ್ರತಿದಿ 5 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಸುಪ್ರೀಂಕೋರ್ಟ್‌ನಿಂದ ಬೈಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದಿದ್ದಾರೆ. ಅಲ್ಲದೆ, ಈವರೆಗೆ ನೀರು ಬಿಡುವ ತೀರ್ಮಾನಕ್ಕೆ ನಾವು ಬಂದಿಲ್ಲ. ಇಂದು ರಾತ್ರಿ ಸಿಎಂ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಹೇಳುತ್ತೇನೆ ಎಂದಿದ್ದಾರೆ.

ಕಾವೇರಿ ನೀರು: ಸುಪ್ರೀಂಕೋರ್ಟ್‌ನಿಂದ ಬೈಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ದಿಲೀಪ್​, ಚೌಡಹಳ್ಳಿ
| Edited By: Rakesh Nayak Manchi|

Updated on: Aug 29, 2023 | 8:36 PM

Share

ಮೈಸೂರು, ಆಗಸ್ಟ್ 29: ತಮಿಳುನಾಡಿಗೆ (Tamil Nadu) ಪ್ರತಿದಿ 5 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ ಕಾವೇರಿ ನೀರು (Cauvery Water) ನಿರ್ವಹಣಾ ಪ್ರಾಧಿಕಾರವು ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿಯೂ ಆಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ (DK Shivakumar), ಸುಪ್ರೀಂಕೋರ್ಟ್‌ನಿಂದ ಬೈಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಈ ಸಂಬಂಧ ಶುಕ್ರವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಇದೆ. ಆದೇಶದಂತೆ ಇಂದಿನಿಂದಲೇ ಐದು ಸಾವಿರ ಕ್ಯೂಸೆಕ್‌ ನೀರು ಬಿಡಬೇಕು. ನಾನು ಈವರೆಗೆ ನೀರು ಬಿಡುವಂತೆ ಯಾವುದೇ ಸೂಚನೆ ನೀಡಿಲ್ಲ. ಕಾನೂನು ತಜ್ಞರ ಬಳಿ ಈ ಸಂಬಂಧ ಎಲ್ಲಾ ಮಾಹಿತಿ ಪಡೆದಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ಸೆ.1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್​

ರಾಜ್ಯದ ಪರ ವಕೀಲರು ಸಮರ್ಥವಾಗಿ ವಾದ ಮಂಡಿಸಿದ್ದಾರೆ. ತಮಿಳುನಾಡಿನವರು ನಿತ್ಯ 24 ಸಾವಿರ ಕ್ಯೂಸೆಕ್‌ ನೀರು ಕೇಳಿದ್ದರು. ಇದನ್ನು ರಾಜ್ಯದ ಪರ ವಕೀಲರು ಐದು ಸಾವಿರಕ್ಕೆ ಇಳಿಸಿದ್ದಾರೆ. ಆದರೂ ಈವರೆಗೆ ನೀರು ಬಿಡುವ ತೀರ್ಮಾನಕ್ಕೆ ನಾವು ಬಂದಿಲ್ಲ. ಇಂದು ರಾತ್ರಿ ಮುಖ್ಯಮಂತ್ರಿ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಹೇಳುತ್ತೇನೆ ಎಂದರು.

ರೈತರಿಗೂ ಇದರ ಪರಿಸ್ಥಿತಿ ಗೊತ್ತಿದೆ, ರೈತರ ಹಿತ ಕಾಪಾಡಬೇಕಿದೆ. ಕಾನೂನನ್ನ ಕೂಡ ಗೌರವಿಸಬೇಕಿದೆ ಎಂದು ಹೇಳಿದ ಡಿ.ಕೆ.ಶಿವಕುಮಾರ್, ಈ ಸಂಬಂಧ ಕೀಲಿ ಕೈ ಕೇಂದ್ರ ಸರ್ಕಾರದ ಕೈಯಲ್ಲೂ ಇದೆ. ರಾಜ್ಯ ಬಿಜೆಪಿ ನಮ್ಮನ್ನು ಕಟ್ಟಿ ಹಾಕುವ ಯತ್ನವನ್ನು ಮಾಡುತ್ತಿದೆ. ಯಾರು ಯಾವ ಸಮಯದಲ್ಲಿ ಎಷ್ಟು ನೀರು ಬಿಟ್ಟಿದ್ದಾರೆಂದು ಗೊತ್ತಿದೆ. ನಾನು ರಾಜಕೀಯ ಮಾಡಬಾರದೆಂದು ಸುಮ್ಮನಿದ್ದೇನೆ ಎಂದರು.

ರಾಜ್ಯ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಎಲ್ಲರಿಗೂ ಎಲ್ಲಾ ವಾಸ್ತವ ಸ್ಥಿತಿ ಗೊತ್ತಿದೆ. ಬಿಜೆಪಿಯವರು ರಾಜಕಾರಣ ಮಾಡಬೇಕೆಂದು ನಿರ್ಧರಿಸಿದ್ದಾರೆ, ಮಾಡಲಿ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ