Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು: ಸುಪ್ರೀಂಕೋರ್ಟ್‌ನಿಂದ ಬೈಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದ ಡಿಕೆ ಶಿವಕುಮಾರ್

ತಮಿಳುನಾಡಿಗೆ ಪ್ರತಿದಿ 5 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಸುಪ್ರೀಂಕೋರ್ಟ್‌ನಿಂದ ಬೈಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದಿದ್ದಾರೆ. ಅಲ್ಲದೆ, ಈವರೆಗೆ ನೀರು ಬಿಡುವ ತೀರ್ಮಾನಕ್ಕೆ ನಾವು ಬಂದಿಲ್ಲ. ಇಂದು ರಾತ್ರಿ ಸಿಎಂ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಹೇಳುತ್ತೇನೆ ಎಂದಿದ್ದಾರೆ.

ಕಾವೇರಿ ನೀರು: ಸುಪ್ರೀಂಕೋರ್ಟ್‌ನಿಂದ ಬೈಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi

Updated on: Aug 29, 2023 | 8:36 PM

ಮೈಸೂರು, ಆಗಸ್ಟ್ 29: ತಮಿಳುನಾಡಿಗೆ (Tamil Nadu) ಪ್ರತಿದಿ 5 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ ಕಾವೇರಿ ನೀರು (Cauvery Water) ನಿರ್ವಹಣಾ ಪ್ರಾಧಿಕಾರವು ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿಯೂ ಆಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ (DK Shivakumar), ಸುಪ್ರೀಂಕೋರ್ಟ್‌ನಿಂದ ಬೈಸಿಕೊಳ್ಳಲು ನಾವು ಸಿದ್ಧರಿಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಈ ಸಂಬಂಧ ಶುಕ್ರವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಇದೆ. ಆದೇಶದಂತೆ ಇಂದಿನಿಂದಲೇ ಐದು ಸಾವಿರ ಕ್ಯೂಸೆಕ್‌ ನೀರು ಬಿಡಬೇಕು. ನಾನು ಈವರೆಗೆ ನೀರು ಬಿಡುವಂತೆ ಯಾವುದೇ ಸೂಚನೆ ನೀಡಿಲ್ಲ. ಕಾನೂನು ತಜ್ಞರ ಬಳಿ ಈ ಸಂಬಂಧ ಎಲ್ಲಾ ಮಾಹಿತಿ ಪಡೆದಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ಸೆ.1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್​

ರಾಜ್ಯದ ಪರ ವಕೀಲರು ಸಮರ್ಥವಾಗಿ ವಾದ ಮಂಡಿಸಿದ್ದಾರೆ. ತಮಿಳುನಾಡಿನವರು ನಿತ್ಯ 24 ಸಾವಿರ ಕ್ಯೂಸೆಕ್‌ ನೀರು ಕೇಳಿದ್ದರು. ಇದನ್ನು ರಾಜ್ಯದ ಪರ ವಕೀಲರು ಐದು ಸಾವಿರಕ್ಕೆ ಇಳಿಸಿದ್ದಾರೆ. ಆದರೂ ಈವರೆಗೆ ನೀರು ಬಿಡುವ ತೀರ್ಮಾನಕ್ಕೆ ನಾವು ಬಂದಿಲ್ಲ. ಇಂದು ರಾತ್ರಿ ಮುಖ್ಯಮಂತ್ರಿ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಹೇಳುತ್ತೇನೆ ಎಂದರು.

ರೈತರಿಗೂ ಇದರ ಪರಿಸ್ಥಿತಿ ಗೊತ್ತಿದೆ, ರೈತರ ಹಿತ ಕಾಪಾಡಬೇಕಿದೆ. ಕಾನೂನನ್ನ ಕೂಡ ಗೌರವಿಸಬೇಕಿದೆ ಎಂದು ಹೇಳಿದ ಡಿ.ಕೆ.ಶಿವಕುಮಾರ್, ಈ ಸಂಬಂಧ ಕೀಲಿ ಕೈ ಕೇಂದ್ರ ಸರ್ಕಾರದ ಕೈಯಲ್ಲೂ ಇದೆ. ರಾಜ್ಯ ಬಿಜೆಪಿ ನಮ್ಮನ್ನು ಕಟ್ಟಿ ಹಾಕುವ ಯತ್ನವನ್ನು ಮಾಡುತ್ತಿದೆ. ಯಾರು ಯಾವ ಸಮಯದಲ್ಲಿ ಎಷ್ಟು ನೀರು ಬಿಟ್ಟಿದ್ದಾರೆಂದು ಗೊತ್ತಿದೆ. ನಾನು ರಾಜಕೀಯ ಮಾಡಬಾರದೆಂದು ಸುಮ್ಮನಿದ್ದೇನೆ ಎಂದರು.

ರಾಜ್ಯ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಎಲ್ಲರಿಗೂ ಎಲ್ಲಾ ವಾಸ್ತವ ಸ್ಥಿತಿ ಗೊತ್ತಿದೆ. ಬಿಜೆಪಿಯವರು ರಾಜಕಾರಣ ಮಾಡಬೇಕೆಂದು ನಿರ್ಧರಿಸಿದ್ದಾರೆ, ಮಾಡಲಿ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ