Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರರನ್ನು ಬಿಜೆಪಿ ನಾಯಕರು ದುರ್ಬಳಕೆ ಮಾಡಿಕೊಂಡಿದ್ದಕ್ಕೆ ಸಾಕ್ಷ್ಯವಿದೆ ಎಂದ ಡಿಕೆ ಶಿವಕುಮಾರ್; ಏನದು?

DK Shivakumar reaction to Contractors allegation; ಎರಡು ದಿನಗಳ ನಂತರ ನಾನು ನಿಮಗೆ ಆಘಾತಕಾರಿ ದಾಖಲೆಗಳನ್ನು ತೋರಿಸುತ್ತೇನೆ. ಗುತ್ತಿಗೆದಾರರನ್ನು ಹೇಗೆ ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಮುಜುಗರಕ್ಕೀಡಾಗಿದ್ದಾರೆ ಎಂದು ನಾನು ವಿವರಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಲ್ಲದೆ, ಗುತ್ತಿಗೆದಾರರನ್ನು ಬಿಜೆಪಿ ನಾಯಕರು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಅವರು ದೂರಿದ್ದಾರೆ.

ಗುತ್ತಿಗೆದಾರರನ್ನು ಬಿಜೆಪಿ ನಾಯಕರು ದುರ್ಬಳಕೆ ಮಾಡಿಕೊಂಡಿದ್ದಕ್ಕೆ ಸಾಕ್ಷ್ಯವಿದೆ ಎಂದ ಡಿಕೆ ಶಿವಕುಮಾರ್; ಏನದು?
ಡಿಸಿಎಂ ಡಿಕೆ ಶಿವಕುಮಾರ್
Follow us
TV9 Web
| Updated By: Ganapathi Sharma

Updated on:Aug 14, 2023 | 3:57 PM

ಬೆಂಗಳೂರು, ಆಗಸ್ಟ್ 14: ಒಂದು ವರ್ಗದ ಗುತ್ತಿಗೆದಾರರನ್ನು ಬಿಜೆಪಿ (BJP) ನಾಯಕರು ದುರ್ಬಳಕೆ ಮಾಡಿಕೊಂಡಿದ್ದಕ್ಕೆ ಸಾಕ್ಷ್ಯವಿದೆ. ಬಿಜೆಪಿ ನಾಯಕರು ಗುತ್ತಿಗೆದಾರರನ್ನು ಹೇಗೆ ದುರುಪಯೋಗಪಡಿಸಿಕೊಂಡರು ಮತ್ತು ಮುಜುಗರಕ್ಕೊಳಗಾದರು ಎಂಬುದನ್ನು ಸಾಬೀತುಪಡಿಸಲು ಎರಡು ದಿನಗಳಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೋಮವಾರ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಹೊರಗೆ ಮಾತನಾಡಿದ ಅವರು, ಕೆಲವು ಗುತ್ತಿಗೆದಾರರು ಮಾಡಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸುವುದಾಗಿ ಹೇಳಿದರು.

ಅವರು (ಬಿಜೆಪಿ ನಾಯಕರು) ಬೆಂಗಳೂರಿನಲ್ಲಿ ಏನು ಮಾಡಿದ್ದಾರೆ ಎಂಬುದನ್ನು ನಾವು ಇನ್ನೂ ಬಹಿರಂಗಪಡಿಸಿಲ್ಲ. ಎಷ್ಟು ಕಾಮಗಾರಿಗಳು ನಡೆದಿವೆ, ಎಷ್ಟು ಬಾಕಿ ಇವೆ ಎಂಬ ಎಲ್ಲ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ. ನಾನು ಯಾರಿಗೂ ಗುತ್ತಿಗೆ ನೀಡಿಲ್ಲ. ಬಿಜೆಪಿ ಆಡಳಿತದಿಂದ ಬಾಕಿ ಉಳಿದಿರುವ ಬಿಲ್‌ಗಳನ್ನು ತೆರವುಗೊಳಿಸಲು ಕೆಲವರು ನನ್ನನ್ನು ಭೇಟಿಯಾದರು. ಕಾಮಗಾರಿಯನ್ನು ಪರಿಶೀಲಿಸಲು ನಿರ್ಧರಿಸಿದ್ದೇವೆ. ಅವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ, ನಾವು ಬಿಲ್‌ಗಳನ್ನು ಬಿಡುಗಡೆ ಮಾಡುತ್ತೇವೆ. ಬಿಜೆಪಿಯವರು ಏಕೆ ಬಿಲ್​​ಗಳನ್ನು ಬಿಡುಗಡೆ ಮಾಡಲಿಲ್ಲ ಎಂದು ಶಿವಕುಮಾರ್ ಪ್ರಶ್ನಿಸಿದ್ದಾರೆ.

ಗುತ್ತಿಗೆದಾರರನ್ನು ಬಿಜೆಪಿ ನಾಯಕರು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಅವರು ದೂರಿದ್ದಾರೆ.

ಎರಡು ದಿನಗಳ ನಂತರ ನಾನು ನಿಮಗೆ ಆಘಾತಕಾರಿ ದಾಖಲೆಗಳನ್ನು ತೋರಿಸುತ್ತೇನೆ. ಗುತ್ತಿಗೆದಾರರನ್ನು ಹೇಗೆ ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಮುಜುಗರಕ್ಕೀಡಾಗಿದ್ದಾರೆ ಎಂದು ನಾನು ವಿವರಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರರ ಒಂದು ವಿಭಾಗವು ಶಿವಕುಮಾರ್ ಅವರ ಬಾಕಿ ಬಿಲ್‌ಗಳನ್ನು ಕ್ಲಿಯರ್ ಮಾಡಲು 10-15 ಪರ್ಸೆಂಟ್ ಕಮಿಷನ್‌ಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪವನ್ನು ತಳ್ಳಿಹಾಕಿದ್ದು, ಇದುವರೆಗೆ ನಮಗೆ ಯಾವುದೇ ದೂರು ಬಂದಿಲ್ಲ ಎಂದು ಹೇಳಿದ್ದಾರೆ.

ಗುತ್ತಿಗೆದಾರರ ಬಗ್ಗೆ ಮಾತನಾಡಲ್ಲ, ಅವರು ಕಷ್ಟದಲ್ಲಿದ್ದಾರೆ; ಡಿಕೆ ಶಿವಕುಮಾರ್

ನಾನು ಗುತ್ತಿಗೆದಾರರ ಬಗ್ಗೆ ಮಾತನಾಡಲ್ಲ, ಅವರು ಕಷ್ಟದಲ್ಲಿದ್ದಾರೆ. ಗುತ್ತಿಗೆದಾರರರನ್ನು ಬಳಸಿಕೊಂಡ ನವರಂಗಿ ನಾರಾಯಣ, ರವಿ, ಮಹಾಲಕ್ಷ್ಮೀಲೇಔಟ್ ಗೋಪಾಲಸ್ವಾಮಿ ಬಗ್ಗೆ ಮಾತಾಡಬೇಕಿದೆ. ನನ್ನ ಬಳಿ ಒಬ್ಬೊಬ್ಬರಾಗಿ ಬರ್ತಾ ಇದ್ದಾರೆ. ಬಿಜೆಪಿ ಶಾಸಕ ಮುನಿರತ್ನ ಬಂದು ಏನೇನೊ ಹೇಳಿಕೊಂಡರು. ಚಿಕ್ಕಪೇಟೆ ಶಾಸಕರು ಬಂದು ಅವರು ಏನೇನೋ ಮಾತಾಡಿದ್ರು. ನಮ್ಮ ಅಜ್ಜಯ್ಯನ ಸಹವಾಸ ಇವರಿಗೆಲ್ಲ ಗೊತ್ತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನವರಂಗಿದೂ (ಅಶ್ವಥ್ಥನಾರಾಯಣರನ್ನು ಉದ್ದೇಶಿಸಿ) ಗೊತ್ತಿದೆ ಹಾಗೂ ಸಾಮ್ರಾಟನದ್ದು (ಆರ್​ ಅಶೋಕ ಅವರನ್ನುದ್ದೇಶಿಸಿ) ನನಗೆ ಗೊತ್ತಿದೆ. ದಾಖಲೆಗಳ ಬಿಡುಗಡೆ ವಿಷಯ ಈಗ ಬೇಡ. ಒಂದೇ ದಿನ ಎಲ್ಲ ದಾಖಲೆ ಬಿಡುಗಡೆ ಬೇಡ ಎಂದು ಅವರು ಹೇಳಿದ್ದಾರೆ.

ಡಿಕೆ ಶಿವಕುಮಾರ್ Vs ಅಶ್ವತ್ಥನಾರಾಯಣ

ಬೆಂಗಳೂರು ಅಭಿವೃದ್ಧಿ ಸಚಿವರನ್ನು ‘ಡಿಸ್ಟ್ರಕ್ಷನ್​​ ಮಿನಿಸ್ಟರ್’ ಎಂದು ಬಿಜೆಪಿ ನಾಯಕ ಅಶ್ವತ್ಥನಾರಾಯಣ ಟೀಕಿಸಿದ್ದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಅಶ್ವತ್ಥನಾರಾಯಣ ಅವರನ್ನು ‘ನವರಂಗಿ ನಾರಾಯಣ’ ಎಂದು ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಅವರು ಅಶ್ವತ್ಥನಾರಾಯಣ ಅಲ್ಲ, ನವರಂಗಿ ನಾರಾಯಣ. ಕಳ್ಳರನ್ನು ರಕ್ಷಿಸಿದ್ದಕ್ಕಾಗಿ ಅವರಿಗೆ ಡಾಕ್ಟರೇಟ್ ನೀಡಲಾಗಿದೆ. ರಾಮನಗರವನ್ನು ಸ್ವಚ್ಛಗೊಳಿಸುತ್ತೇನೆ ಎಂದು ಹೇಳಿದ್ದ ಅವರು ಜಿಲ್ಲೆಯಲ್ಲಿ ತಮ್ಮದೇ ಪಕ್ಷವನ್ನು ಸ್ವಚ್ಛಗೊಳಿಸಿದ್ದಾರೆ. ಅವರು ಮತ್ತು ಅವರ ಪಕ್ಷದ ನಾಯಕರು ಬೆಂಗಳೂರಿನಲ್ಲಿ ಏನು ಮಾಡಿದ್ದಾರೆ ಎಂಬುದನ್ನು ನಾವು ಬಹಿರಂಗಪಡಿಸಿಲ್ಲ. ಈ ಬಗ್ಗೆ ಶೀಘ್ರದಲ್ಲೇ ಬಹಿರಂಗಪಡಿಸುತ್ತೇವೆ ಎಂದು ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಗುತ್ತಿಗೆದಾರ ಯೂಟರ್ನ್​, ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ ಹೇಮಂತ್​ ಕುಮಾರ್

ಈ ಹೇಳಿಕೆಯ ಬೆನ್ನಲ್ಲೇ ಅಶ್ವತ್ಥನಾರಾಯಣ ಅವರು ಶಿವಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.

ನವರಂಗಿ ಯಾರು? ಭ್ರಷ್ಟಾಚಾರಕ್ಕೆ ನಾಂದಿ ಹಾಡಿದ್ದು ಕಾಂಗ್ರೆಸ್ ಪಕ್ಷ. ಅದನ್ನು ಅಭಿಮಾನದಿಂದ ಪೋಷಿಸಿ ಬೆಳೆಸಲಾಗಿದೆ. ಭಿಕ್ಷೆ ಬೇಡಿಕೊಂಡು ಅಧಿಕಾರಕ್ಕೆ ಬಂದರು. ರಾಮನಗರದಲ್ಲಿ ಜನರಿಗೆ ಒಳಚರಂಡಿ ನೀರು ಕೊಡಲಾಗುತ್ತಿದೆ ಎಂದು ಅವರದೇ ಶಾಸಕರು ಹೇಳಿದ್ದಾರೆ. ಕನಕಪುರ ಹಿಂದುಳಿದ ಕ್ಷೇತ್ರವಾಗಿದೆ ಎಂದು ಅಶ್ವತ್ಥನಾರಾಯಣ ಟೀಕಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:11 pm, Mon, 14 August 23

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್