ಚೆನ್ನೈ: ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಮಿಳುನಾಡಿನ ತಿರುನಲ್ಲೂರ್ ಶನೇಶ್ವರ ದೇಗುಲಕ್ಕೆ ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಶನಿ ದೇವರ ಆರಾಧನೆಗಾಗಿ ತೆರಳಿದ್ದ ಅಶ್ವತ್ಥನಾರಾಯಣ ಅವರನ್ನು ದೇಗುಲದ ಸಂಪ್ರದಾಯದಂತೆ ಬರಮಾಡಿಕೊಳ್ಳಲಾಯಿತು. ಅವರಿಗೆ ಕಾರೈಕಲ್ ಜಿಲ್ಲೆಯ ಅಧಿಕಾರಿಗಳು ಸಾಥ್ ನೀಡಿದರು.
ಚಾಲೆಂಜಿಗ್ ಸ್ಟಾರ್ ದರ್ಶನ್ ಕೂಡ ಇಂದು ತಿರುನಲ್ಲೂರ್ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶನಿ ದೇವರ ಪ್ರಸಿದ್ಧ ದೇಗುಲವಾಗಿರುವ ತಿರುನಲ್ಲೂರಿಗೆ ದೇಶದೆಲ್ಲೆಡೆಯಿಂದ ಭಕ್ತಾದಿಗಳು ಆಗಮಿಸುತ್ತಾರೆ. ಈ ಬಾರಿ ಆನ್ಲೈನ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.
ಯಾರೂ ಇಲ್ಲದ ವೇಳೆ ಡಾ.ವಿಷ್ಣು ಪ್ರತಿಮೆ ಧ್ವಂಸಗೊಳಿಸಿದ್ದು ನಾಚಿಕೆಯ ಸಂಗತಿ -ದರ್ಶನ್ ಆಕ್ರೋಶ