AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳ ವಿರುದ್ಧ FIR ಹಾಕುವ ಪೊಲೀಸರಿಗೆ ಹೊಸ ಮಾರ್ಗಸೂಚಿ

ಸಾಮಾಜಿಕ ಜಾಲತಾಣದ ಪೋಸ್ಟ್‌ಗಳಿಗೆ ಏಕಾಏಕಿ ಎಫ್‌ಐಆರ್‌ ಹಾಕುವುದು ಅಥವಾ ಆ ವ್ಯಕ್ತಿಯನ್ನು ಬಂಧನ ಮಾಡುವ ಬಗ್ಗೆ ಪೊಲೀಸ್ ಇಲಾಖೆಯಿಂದ ಕಠಿಣ ಮಾರ್ಗಸೂಚಿ ಜಾರಿ ಮಾಡಲಾಗಿದೆ. ಡಿಜಿ, ಐಜಿಪಿ ಎಂಎ ಸಲೀಂ ಈ ಬಗ್ಗೆ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳು ಈ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ಸೂಚಿಸಿದ್ದಾರೆ. ಹಾಗಾದ್ರೆ, ಮಾರ್ಗಸೂಚಿಗಳಲ್ಲಿ ಏನೇನು ಇವೆ ಎಂಬುದು ಇಲ್ಲಿ ತಿಳಿಯಿರಿ.

ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳ ವಿರುದ್ಧ  FIR ಹಾಕುವ ಪೊಲೀಸರಿಗೆ ಹೊಸ ಮಾರ್ಗಸೂಚಿ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Feb 09, 2026 | 4:18 PM

Share

ಬೆಂಗಳೂರು, (ಫೆಬ್ರವರಿ 09): ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಿಂದ ಪೊಲೀಸರ (Police) ಮೇಲೆ ಸಾಕಷ್ಟು ಆರೋಪಗಳು ಕೇಳಿಬರುತ್ತಿರುವುದು ವರದಿಯಾಗಿವೆ. ಹೀಗಾಗಿ ರಾಜ್ಯದ ಪೊಲೀಸರಿಗೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ, ಐಜಿಪಿ) ಎಂಎ ಸಲೀಂ (DG IGP dr Saleem) ಮಹತ್ವದ ಸೂಚನೆ ನೀಡಿದ್ದರು. ಪೊಲೀಸರು ಜನರ ಜೊತೆ ಹೇಗೆ ನಡೆದುಕೊಳ್ಳಬೇಕೆಂದು ಮಾರ್ಗಸೂಚಿಯನ್ನು ಹೊರಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸುವುದು ಮತ್ತು ಆರೋಪಿಗಳನ್ನು ಬಂಧಿಸುವ ಕುರಿತು ಡಿಜಿ, ಐಜಿಪಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಎರಡು ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಮೇಲೆ ಮಾರ್ಗಸೂಚಿ ಪ್ರಕಟಿಸಿದ್ದಾರೆ.

ಇತ್ತೀಚಿನ ಪ್ರಕರಣವೊಂದರಲ್ಲಿ ನೀಡಿದ ನಿರ್ದೇಶನಗಳನ್ನು ಪಾಲಿಸುವಂತೆ ರಾಜ್ಯದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ನಿಯಮಗಳನ್ನು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳು ಮತ್ತು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ತಿಳಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್‌ಗಳ ಬಗ್ಗೆ ಪ್ರಾಥಮಿಕ ವಿಚಾರಣೆ ನಡೆಸದೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿರುವುದು ಕಂಡುಬಂದಿದ್ದು, ಇದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸಾರ್ವಜನಿಕರೊಂದಿಗೆ ಹೇಗೆ ವರ್ತಿಸಬೇಕು? ಪೊಲೀಸರಿಗೆ ಮಾರ್ಗಸೂಚಿ ಬಿಡುಗಡೆ

ಹೊಸ ಮಾರ್ಗಸೂಚಿಯ 8 ಪ್ರಮುಖ ಅಂಶಗಳು ಇಂತಿವೆ

ದೂರುದಾರರ ಅರ್ಹತೆ ಪರಿಶೀಲನೆ: ಮಾನಹಾನಿ ಅಥವಾ ಅಂತಹುದೇ ಪ್ರಕರಣಗಳಲ್ಲಿ ದೂರು ನೀಡುವವರು ಕಾನೂನಿನ ಪ್ರಕಾರ ‘ನೊಂದ ವ್ಯಕ್ತಿ’ ಆಗಿರಬೇಕು. ಸಂಬಂಧವಿಲ್ಲದ ಮೂರನೇ ವ್ಯಕ್ತಿ ನೀಡುವ ದೂರುಗಳನ್ನು (ಗಂಭೀರ ಅಪರಾಧಗಳನ್ನು ಹೊರತುಪಡಿಸಿ) ಸ್ವೀಕರಿಸಬಾರದು.

ಪ್ರಾಥಮಿಕ ವಿಚಾರಣೆ ಕಡ್ಡಾಯ:ದೂರಿನಲ್ಲಿ ಉಲ್ಲೇಖಿಸಲಾದ ವಿಷಯವು ಮೇಲ್ನೋಟಕ್ಕೆ ಅಪರಾಧವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಎಫ್‌ಐಆರ್ ದಾಖಲಿಸುವ ಮುನ್ನ ಕಡ್ಡಾಯವಾಗಿ ಪ್ರಾಥಮಿಕ ವಿಚಾರಣೆ ನಡೆಸಬೇಕು.

ಹಿಂಸಾಚಾರಕ್ಕೆ ಪ್ರಚೋದನೆ ಇದ್ದರೆ ಮಾತ್ರ ಕೇಸ್: ದ್ವೇಷ ಬಿತ್ತುವುದು, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದು ಅಥವಾ ದೇಶದ್ರೋಹದಂತಹ ಆರೋಪಗಳಿದ್ದಾಗ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವಂತಹ ಸ್ಪಷ್ಟ ಸಾಕ್ಷ್ಯಗಳಿದ್ದರೆ ಮಾತ್ರ ಪ್ರಕರಣ ದಾಖಲಿಸಬೇಕು. ಕೇದಾರನಾಥ್ ಸಿಂಗ್ ಮತ್ತು ಶ್ರೇಯಾ ಸಿಂಘಾಲ್ ಪ್ರಕರಣದ ತೀರ್ಪುಗಳನ್ನು ಇಲ್ಲಿ ಪರಿಗಣಿಸಬೇಕು.

ರಾಜಕೀಯ ಟೀಕೆಗಳಿಗೆ ರಕ್ಷಣೆ:ಕಟುವಾದ ಅಥವಾ ಆಕ್ಷೇಪಾರ್ಹ ರಾಜಕೀಯ ಭಾಷಣ/ಪೋಸ್ಟ್‌ಗಳಿಗೆ ಯಾಂತ್ರಿಕವಾಗಿ ಕೇಸ್ ದಾಖಲಿಸಬಾರದು. ಸಂವಿಧಾನದ 19(1)(ಎ) ಅಡಿಯಲ್ಲಿರುವ ವಾಕ್ ಸ್ವಾತಂತ್ರ್ಯವನ್ನು ಗೌರವಿಸಬೇಕು. ಪೋಸ್ಟ್‌ನಿಂದ ಸಾರ್ವಜನಿಕ ಶಾಂತಿಗೆ ತಕ್ಷಣದ ಅಪಾಯವಿದ್ದರೆ ಮಾತ್ರ ಕಾನೂನು ಕ್ರಮ ಕೈಗೊಳ್ಳಬೇಕು.

ಮಾನಹಾನಿ ಅಸಂಜ್ಞೇಯ ಅಪರಾಧ:ಮಾನಹಾನಿಯು ‘ಅಸಂಜ್ಞೇಯ ಅಪರಾಧ’ ಆಗಿರುವುದರಿಂದ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸುವಂತಿಲ್ಲ. ದೂರುದಾರರಿಗೆ ನ್ಯಾಯಾಲಯದ (ಮ್ಯಾಜಿಸ್ಟ್ರೇಟ್) ಮೊರೆ ಹೋಗಲು ಸೂಚಿಸಬೇಕು.

ಬಂಧನದ ನಿಯಮಗಳು:ಸುಪ್ರೀಂ ಕೋರ್ಟ್‌ನ ಅರ್ನೇಶ್ ಕುಮಾರ್ ಪ್ರಕರಣದ ಮಾರ್ಗಸೂಚಿಯಂತೆ, ಅನಗತ್ಯವಾಗಿ ಅಥವಾ ಯಾಂತ್ರಿಕವಾಗಿ ಯಾರನ್ನೂ ಬಂಧಿಸಬಾರದು.

ಕಾನೂನು ಸಲಹೆ ಪಡೆಯಬೇಕು :ರಾಜಕೀಯ ಪೋಸ್ಟ್‌ಗಳು ಅಥವಾ ಸೂಕ್ಷ್ಮ ವಿಚಾರಗಳಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವ ಮುನ್ನ ಸರ್ಕಾರಿ ಅಭಿಯೋಜಕರಿಂದ ಕಾನೂನು ಸಲಹೆ ಪಡೆಯುವುದು ಕಡ್ಡಾಯ.

ಒಂದು ವೇಳೆ ದೂರುಗಳು ಸುಳ್ಳು, ದ್ವೇಷಪೂರಿತ ಅಥವಾ ರಾಜಕೀಯ ಪ್ರೇರಿತ ಎಂದು ಕಂಡುಬಂದರೆ, ಅಂತಹ ಪ್ರಕರಣಗಳನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಸೆಕ್ಷನ್ 176(1) ಅಡಿಯಲ್ಲಿ ಮುಕ್ತಾಯಗೊಳಿಸಬೇಕು ಎಂದು ಮಾರ್ಗಸೂಚಿಯಲ್ಲಿ ಖಡಕ್ ಆಗಿ ಸೂಚನೆ ನೀಡಲಾಗಿದೆ. ಈ ಮೂಲಕ ಪ್ರತಿಯೊಂದಕ್ಕೂ ಎಫ್​ಐಆರ್ ದಾಖಲಿಸುವದಕ್ಕೆ ಕಡಿವಾಣ ಹಾಕಿದಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Mon, 9 February 26

Follow Us
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್: