Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ಮರೆತ ಮಂಡ್ಯ ಜನ; ಭಾನುವಾರದ ಕುರಿ ಸಂತೆಯಲ್ಲಿ ಜನ ಜಂಗುಳಿ

ಜಿಲ್ಲೆಯ ಜನ ಕೊರೊನಾ ಭೀತಿ ಮರೆತು ಮಾರುಕಟ್ಟೆಯಲ್ಲಿ ಸೇರಿದ್ದಾರೆ. ಕೆಆರ್ಎಸ್ನ ಭಾನುವಾರದ ಕುರಿ ಸಂತೆಯಲ್ಲಿ ಸಾವಿರಾರು ಜನ ಸೇರಿದ್ದಾರೆ. ಕೊರೊನಾ ಎರಡನೇ ಅಲೆ ತಗ್ಗುತ್ತಿದ್ದಂತೆ ಮೈ ಮರೆತ ಜನರು, ಮಾಸ್ಕ್ ಹಾಕಿಕೊಳ್ಳದೆ ಗುಂಪು ಗುಂಪಾಗಿ ನಿಂತು ಕುರಿ ವ್ಯಾಪಾರ ಮಾಡುತ್ತಿದ್ದಾರೆ.

ಕೊರೊನಾ ಭೀತಿ ಮರೆತ ಮಂಡ್ಯ ಜನ; ಭಾನುವಾರದ ಕುರಿ ಸಂತೆಯಲ್ಲಿ ಜನ ಜಂಗುಳಿ
ಕುರಿ ಸಂತೆಯಲ್ಲಿ ಜನ ಜಂಗುಳಿ
Follow us
TV9 Web
| Updated By: sandhya thejappa

Updated on: Jul 11, 2021 | 10:24 AM

ಮಂಡ್ಯ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡ ಹಿನ್ನೆಲೆ ವೀಕೆಂಡ್ ಕರ್ಫ್ಯೂ ರುದ್ಧುಗೊಳಿಸಲಾಗಿದೆ. ಆದರೆ ಜನ ಕೆಲ ನಿಯಮಗಳನ್ನು ಅನುಸರಿಸದಿದ್ದರೆ ಮತ್ತೆ ಕೊರೊನಾ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಿದ್ದು, ಜಿಲ್ಲೆಯ ಜನ ಕೊರೊನಾ ಭೀತಿ ಮರೆತು ಮಾರುಕಟ್ಟೆಯಲ್ಲಿ ಸೇರಿದ್ದಾರೆ. ಕೆಆರ್ಎಸ್ನ ಭಾನುವಾರದ ಕುರಿ ಸಂತೆಯಲ್ಲಿ ಸಾವಿರಾರು ಜನ ಸೇರಿದ್ದಾರೆ. ಕೊರೊನಾ ಎರಡನೇ ಅಲೆ ತಗ್ಗುತ್ತಿದ್ದಂತೆ ಮೈ ಮರೆತ ಜನರು, ಮಾಸ್ಕ್ ಹಾಕಿಕೊಳ್ಳದೆ ಗುಂಪು ಗುಂಪಾಗಿ ನಿಂತು ಕುರಿ ವ್ಯಾಪಾರ ಮಾಡುತ್ತಿದ್ದಾರೆ.

ಆದರೆ ಯಾದಗಿರಿಯಲ್ಲಿ ವೀಕೆಂಡ್ ಕರ್ಫ್ಯೂ ರದ್ಧಾಗಿದ್ದರೂ ಮನೆ ಬಿಟ್ಟು ಜನ ಹೊರಗೆ ಬಂದಿಲ್ಲ. ಜಿಟಿ ಜಿಟಿ ಮಳೆ ಬರುತ್ತಿರುವ ಹಿನ್ನೆಲೆ ಜನ ಹೊರಗೆ ಬಂದಿಲ್ಲ. ಗ್ರಾಹಕರಿಲ್ಲದೆ ತರಕಾರಿ ಮಾರುಕಟ್ಟೆ ಖಾಲಿ ಖಾಲಿಯಾಗಿದೆ. ನಗರದ ಹಳೆ ಬಸ್ ನಿಲ್ದಾಣದ ಹಿಂಬದಿಯ ಮಾರುಕಟ್ಟೆಯಲ್ಲಿ ಹತ್ತಾರು ಮಂದಿ ಮಾತ್ರ ಮನೆಯಿಂದ ಹೊರ ಬಂದು ತರಕಾರಿಯನ್ನು ಖರೀದಿಸುತ್ತಿದ್ದಾರೆ.

ಕೋಲಾರದಲ್ಲೂ ಅನ್ಲಾಕ್ ನಂತರದ ಮೊದಲ ವೀಕೆಂಡ್ ಸಂಡೇಯಲ್ಲಿ ಜನರ ಓಡಾಟ ವಿರಳವಾಗಿದೆ. ಮಾರುಕಟ್ಟೆಯಲ್ಲೂ ಹೆಚ್ಚಿನ ಜನ ಕಂಡುಬಂದಿಲ್ಲ. ಶಿವಮೊಗ್ಗ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಜನ ಜಾತ್ರೆ ಸೇರಿದೆ ದೈಹಿಕ ಅಂತರವಿಲ್ಲದೇ ತರಕಾರಿ ಖರೀದಿಸುವಲ್ಲಿ ಜನ ಬ್ಯುಸಿಯಾಗಿದ್ದಾರೆ. ಇನ್ನು ಕಲಬುರಗಿಯಲ್ಲಿ ಅನ್​ಲಾಕ್​ ನಂತರ ಖರೀದಿಗೆ ಜನರು ಹೆಚ್ಚು ಆಸಕ್ತಿ ತೋರಿಸಿಲ್ಲ. ನಗರದ ಸೂಪರ್ ಮಾರ್ಕೇಟ್ ಖಾಲಿ ಖಾಲಿಯಾಗಿದ್ದು, ವೀಕೆಂಡ್ ಇದ್ದರು ಮನೆಯಿಂದ ಹೆಚ್ಚು ಜನ ಹೊರ ಬಂದಿಲ್ಲ.

ತುಮಕೂರು, ಮೈಸೂರು ಮಾರುಕಟ್ಟೆಯಲ್ಲಿ ಜನರ ಸಂಖ್ಯೆ ವಿರಳವಾಗಿದ್ದರೆ, ಚಿತ್ರದುರ್ಗ ಮತ್ತು ರಾಮನಗರ ತರಕಾರಿ ಮಾರುಕಟ್ಟೆಯಲ್ಲಿ ಜನಸಂದಣಿ ಸೇರಿದೆ. ಮಾಸ್ಕ್ ಧರಿಸದೆ ತರಕಾರಿ ವ್ಯಾಪಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಇನ್ನು ಬೆಂಗಳೂರಿನ ಕೆ.ಆರ್.ಮಾರ್ಕೆಟ್​ನಲ್ಲಿ ಎಂದಿನಂತೆ ವ್ಯಾಪಾರ ನಡೆಯುತ್ತಿದೆ. ದೈಹಿಕ ಅಂತರ ಮರೆತು, ಮಾಸ್ಕ್ ಧರಿಸದೆ ಜನರು ಓಡಾಡುತ್ತಿದ್ದಾರೆ.

ಇದನ್ನೂ ಓದಿ

ಸಂಸದ ಕರಡಿ ಸಂಗಣ್ಣ ಹಾಲುಮತ ಸಮಾಜದ ಕ್ಷಮೆ ಕೇಳಬೇಕು -ರುದ್ರಣ್ಣ ಗುಳಗುಳಿ ಆಕ್ರೋಶ

ಹಾಡಹಗಲೇ ಮನೆಗೆ ನುಗ್ಗಿ ಲ್ಯಾಪ್‌ಟಾಪ್‌ ಕಳ್ಳತನ; ಸೂಟು ಬೂಟು ಧರಿಸಿ ಬಂದ ಕಳ್ಳನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

(Karnataka Districts Buyers violated Corona rules)

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ