AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ಮರೆತ ಮಂಡ್ಯ ಜನ; ಭಾನುವಾರದ ಕುರಿ ಸಂತೆಯಲ್ಲಿ ಜನ ಜಂಗುಳಿ

ಜಿಲ್ಲೆಯ ಜನ ಕೊರೊನಾ ಭೀತಿ ಮರೆತು ಮಾರುಕಟ್ಟೆಯಲ್ಲಿ ಸೇರಿದ್ದಾರೆ. ಕೆಆರ್ಎಸ್ನ ಭಾನುವಾರದ ಕುರಿ ಸಂತೆಯಲ್ಲಿ ಸಾವಿರಾರು ಜನ ಸೇರಿದ್ದಾರೆ. ಕೊರೊನಾ ಎರಡನೇ ಅಲೆ ತಗ್ಗುತ್ತಿದ್ದಂತೆ ಮೈ ಮರೆತ ಜನರು, ಮಾಸ್ಕ್ ಹಾಕಿಕೊಳ್ಳದೆ ಗುಂಪು ಗುಂಪಾಗಿ ನಿಂತು ಕುರಿ ವ್ಯಾಪಾರ ಮಾಡುತ್ತಿದ್ದಾರೆ.

ಕೊರೊನಾ ಭೀತಿ ಮರೆತ ಮಂಡ್ಯ ಜನ; ಭಾನುವಾರದ ಕುರಿ ಸಂತೆಯಲ್ಲಿ ಜನ ಜಂಗುಳಿ
ಕುರಿ ಸಂತೆಯಲ್ಲಿ ಜನ ಜಂಗುಳಿ
TV9 Web
| Edited By: |

Updated on: Jul 11, 2021 | 10:24 AM

Share

ಮಂಡ್ಯ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡ ಹಿನ್ನೆಲೆ ವೀಕೆಂಡ್ ಕರ್ಫ್ಯೂ ರುದ್ಧುಗೊಳಿಸಲಾಗಿದೆ. ಆದರೆ ಜನ ಕೆಲ ನಿಯಮಗಳನ್ನು ಅನುಸರಿಸದಿದ್ದರೆ ಮತ್ತೆ ಕೊರೊನಾ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಿದ್ದು, ಜಿಲ್ಲೆಯ ಜನ ಕೊರೊನಾ ಭೀತಿ ಮರೆತು ಮಾರುಕಟ್ಟೆಯಲ್ಲಿ ಸೇರಿದ್ದಾರೆ. ಕೆಆರ್ಎಸ್ನ ಭಾನುವಾರದ ಕುರಿ ಸಂತೆಯಲ್ಲಿ ಸಾವಿರಾರು ಜನ ಸೇರಿದ್ದಾರೆ. ಕೊರೊನಾ ಎರಡನೇ ಅಲೆ ತಗ್ಗುತ್ತಿದ್ದಂತೆ ಮೈ ಮರೆತ ಜನರು, ಮಾಸ್ಕ್ ಹಾಕಿಕೊಳ್ಳದೆ ಗುಂಪು ಗುಂಪಾಗಿ ನಿಂತು ಕುರಿ ವ್ಯಾಪಾರ ಮಾಡುತ್ತಿದ್ದಾರೆ.

ಆದರೆ ಯಾದಗಿರಿಯಲ್ಲಿ ವೀಕೆಂಡ್ ಕರ್ಫ್ಯೂ ರದ್ಧಾಗಿದ್ದರೂ ಮನೆ ಬಿಟ್ಟು ಜನ ಹೊರಗೆ ಬಂದಿಲ್ಲ. ಜಿಟಿ ಜಿಟಿ ಮಳೆ ಬರುತ್ತಿರುವ ಹಿನ್ನೆಲೆ ಜನ ಹೊರಗೆ ಬಂದಿಲ್ಲ. ಗ್ರಾಹಕರಿಲ್ಲದೆ ತರಕಾರಿ ಮಾರುಕಟ್ಟೆ ಖಾಲಿ ಖಾಲಿಯಾಗಿದೆ. ನಗರದ ಹಳೆ ಬಸ್ ನಿಲ್ದಾಣದ ಹಿಂಬದಿಯ ಮಾರುಕಟ್ಟೆಯಲ್ಲಿ ಹತ್ತಾರು ಮಂದಿ ಮಾತ್ರ ಮನೆಯಿಂದ ಹೊರ ಬಂದು ತರಕಾರಿಯನ್ನು ಖರೀದಿಸುತ್ತಿದ್ದಾರೆ.

ಕೋಲಾರದಲ್ಲೂ ಅನ್ಲಾಕ್ ನಂತರದ ಮೊದಲ ವೀಕೆಂಡ್ ಸಂಡೇಯಲ್ಲಿ ಜನರ ಓಡಾಟ ವಿರಳವಾಗಿದೆ. ಮಾರುಕಟ್ಟೆಯಲ್ಲೂ ಹೆಚ್ಚಿನ ಜನ ಕಂಡುಬಂದಿಲ್ಲ. ಶಿವಮೊಗ್ಗ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಜನ ಜಾತ್ರೆ ಸೇರಿದೆ ದೈಹಿಕ ಅಂತರವಿಲ್ಲದೇ ತರಕಾರಿ ಖರೀದಿಸುವಲ್ಲಿ ಜನ ಬ್ಯುಸಿಯಾಗಿದ್ದಾರೆ. ಇನ್ನು ಕಲಬುರಗಿಯಲ್ಲಿ ಅನ್​ಲಾಕ್​ ನಂತರ ಖರೀದಿಗೆ ಜನರು ಹೆಚ್ಚು ಆಸಕ್ತಿ ತೋರಿಸಿಲ್ಲ. ನಗರದ ಸೂಪರ್ ಮಾರ್ಕೇಟ್ ಖಾಲಿ ಖಾಲಿಯಾಗಿದ್ದು, ವೀಕೆಂಡ್ ಇದ್ದರು ಮನೆಯಿಂದ ಹೆಚ್ಚು ಜನ ಹೊರ ಬಂದಿಲ್ಲ.

ತುಮಕೂರು, ಮೈಸೂರು ಮಾರುಕಟ್ಟೆಯಲ್ಲಿ ಜನರ ಸಂಖ್ಯೆ ವಿರಳವಾಗಿದ್ದರೆ, ಚಿತ್ರದುರ್ಗ ಮತ್ತು ರಾಮನಗರ ತರಕಾರಿ ಮಾರುಕಟ್ಟೆಯಲ್ಲಿ ಜನಸಂದಣಿ ಸೇರಿದೆ. ಮಾಸ್ಕ್ ಧರಿಸದೆ ತರಕಾರಿ ವ್ಯಾಪಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಇನ್ನು ಬೆಂಗಳೂರಿನ ಕೆ.ಆರ್.ಮಾರ್ಕೆಟ್​ನಲ್ಲಿ ಎಂದಿನಂತೆ ವ್ಯಾಪಾರ ನಡೆಯುತ್ತಿದೆ. ದೈಹಿಕ ಅಂತರ ಮರೆತು, ಮಾಸ್ಕ್ ಧರಿಸದೆ ಜನರು ಓಡಾಡುತ್ತಿದ್ದಾರೆ.

ಇದನ್ನೂ ಓದಿ

ಸಂಸದ ಕರಡಿ ಸಂಗಣ್ಣ ಹಾಲುಮತ ಸಮಾಜದ ಕ್ಷಮೆ ಕೇಳಬೇಕು -ರುದ್ರಣ್ಣ ಗುಳಗುಳಿ ಆಕ್ರೋಶ

ಹಾಡಹಗಲೇ ಮನೆಗೆ ನುಗ್ಗಿ ಲ್ಯಾಪ್‌ಟಾಪ್‌ ಕಳ್ಳತನ; ಸೂಟು ಬೂಟು ಧರಿಸಿ ಬಂದ ಕಳ್ಳನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

(Karnataka Districts Buyers violated Corona rules)

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ