AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ ವಹಿಸಿದ ಸಿಎಂ ಡಿಕೆ ಶಿವಕುಮಾರ್: ತಕ್ಷಣ ಪ್ರವಾಸಕ್ಕೆ ಸೂಚನೆ

ರಾಜ್ಯದ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ನೀಡಿದ್ದಾರೆ. ತಕ್ಷಣ ಜಿಲ್ಲೆಗಳಿಗೆ ತೆರಳಿ ತಾಲೂಕುವಾರು ಪರಿಸ್ಥಿತಿ ಪರಿಶೀಲಿಸಿ ವಾಸ್ತವ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಡಿಸಿಎಂ ಹಾಗೂ ಕಂದಾಯ ಸಚಿವರಾಗಿರು ಡಾ. ಜಿ ಪರಮೇಶ್ವರಗೆ ಸಚಿವರು ವರದಿ ಸಲ್ಲಿಸಬೇಕಿದೆ. ಯಾವ ಜಿಲ್ಲೆಯ ಹೊಣೆ ಯಾರಿಗೆ ವಹಿಸಲಾಗಿದೆ ಎಂಬ ವಿವರ ಇಲ್ಲಿದೆ.

ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ ವಹಿಸಿದ ಸಿಎಂ ಡಿಕೆ ಶಿವಕುಮಾರ್: ತಕ್ಷಣ ಪ್ರವಾಸಕ್ಕೆ ಸೂಚನೆ
ಡಿಕೆ ಶಿವಕುಮಾರ್Image Credit source: tv9
ಗಣಪತಿ ಶರ್ಮಾ
|

Updated on: Aug 04, 2026 | 10:13 AM

Share

ಮುಖ್ಯಾಂಶಗಳು

  • ಸಚಿವರಿಗೆ ಜಿಲ್ಲಾವಾರು ಬರ ಅಧ್ಯಯನದ ಹೊಣೆ
  • ತಕ್ಷಣ ಪ್ರವಾಸಕ್ಕೆ ಸಿಎಂ ಖಡಕ್ ಸೂಚನೆ
  • ತಾಲೂಕುವಾರು ವಾಸ್ತವ ವರದಿ ಸಲ್ಲಿಸಲು ಸೂಚನೆ

ಬೆಂಗಳೂರು, ಆಗಸ್ಟ್ 4: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಜಿಲ್ಲಾವಾರು ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜವಾಬ್ದಾರಿ ವಹಿಸಿದ್ದಾರೆ. ತಮಗೆ ವಹಿಸಿರುವ ಜಿಲ್ಲೆಗಳಿಗೆ ತಕ್ಷಣ ಪ್ರವಾಸ ಕೈಗೊಂಡು, ಪ್ರತಿಯೊಂದು ತಾಲೂಕಿನಲ್ಲಿನ ವಾಸ್ತವ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆ.

ಸಚಿವರು ಸ್ಥಳೀಯ ಪರಿಸ್ಥಿತಿಯನ್ನು ಪರಿಶೀಲಿಸಿ, ಮಳೆ, ಬೆಳೆ ಹಾನಿ, ಬರದ ಸ್ಥಿತಿ ಸೇರಿದಂತೆ ವಾಸ್ತವಾಂಶಗಳ ವರದಿಯನ್ನು ತಕ್ಷಣ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಯಾವ ಜಿಲ್ಲೆಗೆ ಯಾರ ಉಸ್ತುವಾರಿ?

  • ಡಾ. ಜಿ. ಪರಮೇಶ್ವರ್ – ತುಮಕೂರು
  • ಟಿ. ರಘುಮೂರ್ತಿ – ಚಿತ್ರದುರ್ಗ
  • ಬಿ.ಎಸ್. ಸುರೇಶ್ (ಬೈರತಿ) – ಚಿಕ್ಕಬಳ್ಳಾಪುರ
  • ಕೆ.ಹೆಚ್. ಮುನಿಯಪ್ಪ- ಬೆಂಗಳೂರು ಗ್ರಾಮಾಂತರ
  • ರಾಮಲಿಂಗಾರೆಡ್ಡಿ – ಕೋಲಾರ
  • ಹೆಚ್.ಸಿ. ಬಾಲಕೃಷ್ಣ – ಬೆಂಗಳೂರು ದಕ್ಷಿಣ
  • ಬಿ.ಜೆ. ಜಮೀರ್ ಅಹ್ಮದ್ ಖಾನ್ – ವಿಜಯನಗರ
  • ಕೆ.ಜೆ. ಜಾರ್ಜ್ – ಚಿಕ್ಕಮಗಳೂರು
  • ಕೆ.ಎಂ. ಶಿವಲಿಂಗೇಗೌಡ – ಹಾಸನ
  • ಮಧು ಬಂಗಾರಪ್ಪ – ಶಿವಮೊಗ್ಗ
  • ಎಂ.ಬಿ. ಪಾಟೀಲ್ – ವಿಜಯಪುರ, ಬಾಗಲಕೋಟೆ
  • ವಿಜಯಾನಂದ ಕಾಶಪ್ಪನವರ – ದಾವಣಗೆರೆ
  • ಎಸ್.ಎಸ್. ಮಲ್ಲಿಕಾರ್ಜುನ- ದಾವಣಗೆರೆ
  • ರುದ್ರಪ್ಪ ಲಮಾಣಿ – ಹಾವೇರಿ
  • ಬಸವರಾಜ ರಾಯರೆಡ್ಡಿ – ಗದಗ
  • ಸತೀಶ್ ಜಾರಕಿಹೊಳಿ – ಬೆಳಗಾವಿ
  • ಸಂತೋಷ್ ಲಾಡ್- ಧಾರವಾಡ
  • ಲಕ್ಷ್ಮಣ ಸವದಿ – ಉತ್ತರ ಕನ್ನಡ
  • ಪ್ರಿಯಾಂಕ್ ಖರ್ಗೆ – ಕಲಬುರಗಿ
  • ಅಜಯ್ ಧರಂ ಸಿಂಗ್ – ರಾಯಚೂರು
  • ಈಶ್ವರ್ ಖಂಡ್ರೆ – ಬೀದರ್
  • ಪಿ.ಎಂ. ನರೇಂದ್ರಸ್ವಾಮಿ – ಕೊಡಗು
  • ಯು.ಟಿ. ಖಾದರ್ – ದಕ್ಷಿಣ ಕನ್ನಡ, ಉಡುಪಿ
  • ಯತೀಂದ್ರ ಸಿದ್ದರಾಮಯ್ಯ – ಮೈಸೂರು
  • ಚೆಲುವರಾಯಸ್ವಾಮಿ – ಮಂಡ್ಯ
  • ಪುಟ್ಟರಂಗಶೆಟ್ಟಿ – ಚಾಮರಾಜನಗರ
  • ಬಿ. ನಾಗೇಂದ್ರ – ಬಳ್ಳಾರಿ
  • ಶರಣ ಪ್ರಕಾಶ ಪಾಟೀಲ್ – ಯಾದಗಿರಿ
  • ಶಿವರಾಜ್ ಸಂಗಪ್ಪ ತಂಗಡಗಿ- ಕೊಪ್ಪಳ
  • ಕೃಷ್ಣ ಬೈರೇಗೌಡ – ಬೆಂಗಳೂರು ನಗರ

ರಾಜ್ಯದ ಕೆಲವೆಡೆ ಮಳೆ ಹೆಚ್ಚಾಗಿ ಅತಿವೃಷ್ಟಿಯ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಮತ್ತೊಂದೆಡೆ ಮಳೆ ಕೊರತೆಯಿಂದ ಬರದ ಆತಂಕ ಎದುರಾಗಿದೆ. ಹೀಗಾಗಿ ಜಿಲ್ಲಾವಾರು ಪರಿಸ್ಥಿತಿಯನ್ನು ಸಚಿವರು ನೇರವಾಗಿ ಪರಿಶೀಲಿಸಿ, ಸರ್ಕಾರಕ್ಕೆ ವಾಸ್ತವ ವರದಿ ಸಲ್ಲಿಸುವುದು ಮಹತ್ವ ಪಡೆದಿದೆ.

ಇದನ್ನೂ ಓದಿ: ಒಂದೆಡೆ ಭೀಕರ ಬರ, ಇನ್ನೊಂದೆಡೆ ಹಕ್ಕಿ ಜ್ವರದ ಭೀತಿ: ಕೊಪ್ಪಳ ಜನತೆಗೆ ಎದುರಾಯ್ತು ಮತ್ತೊಂದು ಕಂಟಕ!

ಸ್ಥಳೀಯ ಅಧಿಕಾರಿಗಳು, ರೈತರು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದು ಪರಿಸ್ಥಿತಿಯ ಸಮಗ್ರ ಚಿತ್ರಣವನ್ನು ಸರ್ಕಾರದ ಗಮನಕ್ಕೆ ತರುವಂತೆ ಸಚಿವರಿಗೆ ಸೂಚಿಸಲಾಗಿದೆ. ವರದಿಯ ಆಧಾರದ ಮೇಲೆ ಮುಂದಿನ ಬರ ನಿರ್ವಹಣೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

ವರದಿ: ಈರಣ್ಣ ಬಸವಾ, ಟಿವಿ9, ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!