
ಬೆಂಗಳೂರು, ಆಗಸ್ಟ್ 4: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಜಿಲ್ಲಾವಾರು ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜವಾಬ್ದಾರಿ ವಹಿಸಿದ್ದಾರೆ. ತಮಗೆ ವಹಿಸಿರುವ ಜಿಲ್ಲೆಗಳಿಗೆ ತಕ್ಷಣ ಪ್ರವಾಸ ಕೈಗೊಂಡು, ಪ್ರತಿಯೊಂದು ತಾಲೂಕಿನಲ್ಲಿನ ವಾಸ್ತವ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆ.
ಸಚಿವರು ಸ್ಥಳೀಯ ಪರಿಸ್ಥಿತಿಯನ್ನು ಪರಿಶೀಲಿಸಿ, ಮಳೆ, ಬೆಳೆ ಹಾನಿ, ಬರದ ಸ್ಥಿತಿ ಸೇರಿದಂತೆ ವಾಸ್ತವಾಂಶಗಳ ವರದಿಯನ್ನು ತಕ್ಷಣ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.
ರಾಜ್ಯದ ಕೆಲವೆಡೆ ಮಳೆ ಹೆಚ್ಚಾಗಿ ಅತಿವೃಷ್ಟಿಯ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಮತ್ತೊಂದೆಡೆ ಮಳೆ ಕೊರತೆಯಿಂದ ಬರದ ಆತಂಕ ಎದುರಾಗಿದೆ. ಹೀಗಾಗಿ ಜಿಲ್ಲಾವಾರು ಪರಿಸ್ಥಿತಿಯನ್ನು ಸಚಿವರು ನೇರವಾಗಿ ಪರಿಶೀಲಿಸಿ, ಸರ್ಕಾರಕ್ಕೆ ವಾಸ್ತವ ವರದಿ ಸಲ್ಲಿಸುವುದು ಮಹತ್ವ ಪಡೆದಿದೆ.
ಇದನ್ನೂ ಓದಿ: ಒಂದೆಡೆ ಭೀಕರ ಬರ, ಇನ್ನೊಂದೆಡೆ ಹಕ್ಕಿ ಜ್ವರದ ಭೀತಿ: ಕೊಪ್ಪಳ ಜನತೆಗೆ ಎದುರಾಯ್ತು ಮತ್ತೊಂದು ಕಂಟಕ!
ಸ್ಥಳೀಯ ಅಧಿಕಾರಿಗಳು, ರೈತರು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದು ಪರಿಸ್ಥಿತಿಯ ಸಮಗ್ರ ಚಿತ್ರಣವನ್ನು ಸರ್ಕಾರದ ಗಮನಕ್ಕೆ ತರುವಂತೆ ಸಚಿವರಿಗೆ ಸೂಚಿಸಲಾಗಿದೆ. ವರದಿಯ ಆಧಾರದ ಮೇಲೆ ಮುಂದಿನ ಬರ ನಿರ್ವಹಣೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.
ವರದಿ: ಈರಣ್ಣ ಬಸವಾ, ಟಿವಿ9, ಬೆಂಗಳೂರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ