AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ ಘೋಷಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

Ragi Malt with Mid day meals for Karnataka School Children: ಮುಂದಿನ ತಿಂಗಳಿಂದ ರಾಗಿ ಮಾಲ್ಟ್ ಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದೇವೆ. ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ರಾಗಿ ಮಾಲ್ಟ್ ನೀಡುವ ನಿರ್ಧಾರ ಕೈಗೊಂಡಿದ್ದೇವೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಭಾಗ್ಯ ಘೋಷಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ
ಮಧು ಬಂಗಾರಪ್ಪ
ಪ್ರಸನ್ನ ಗಾಂವ್ಕರ್​
| Edited By: |

Updated on:Nov 16, 2023 | 4:43 PM

Share

ಬೆಂಗಳೂರು, ನಬವೆಂಬರ್ 16: ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಗುರುವಾರ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗಾಗಿ ನಡೆಸುತ್ತಿರುವ ಮಾಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದೆ. ಮಕ್ಕಳಿಗೆ ಪೌಷ್ಟಿಕಾಹಾರ ನೀಡಲು ನಿರ್ಧಾರ ಮಾಡಲಾಗಿದೆ. ಹೀಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆ ರಾಗಿ ಮಾಲ್ಟ್ (Ragi Malt) ಕೊಡುವ ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.

ಮುಂದಿನ ತಿಂಗಳಿಂದ ರಾಗಿ ಮಾಲ್ಟ್ ಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದೇವೆ. ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ರಾಗಿ ಮಾಲ್ಟ್ ನೀಡುವ ನಿರ್ಧಾರ ಕೈಗೊಂಡಿದ್ದೇವೆ. ಒಂದು ಎನ್​ಜಿಒದವರು ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದರು. ಅದು ಯಶಸ್ವಿಯಾಗಿದೆ. ಹೀಗಾಗಿ ಇದನ್ನು ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ. ಕ್ಷೀರಭಾಗ್ಯದ ಹಾಲಿನ ಜೊತೆ ಬೆಳಗ್ಗೆ ರಾಗಿಗಂಜಿ ಕೊಡುವ ನಿರ್ಧಾರ ಕೂಡ ಕೈಗೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಇನ್ನು ಎಸ್​​ಇಪಿ (ರಾಜ್ಯ ಶಿಕ್ಷಣ ನೀತಿ) ಬಗ್ಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ SEP ಅನುಷ್ಠಾನ ಆಗಲಿದೆ. ಈ ಬಗ್ಗೆ ಮೊದಲ ಸಭೆ ಆಗಿದೆ. ಎಸ್​​ಇಪಿ ಜಾರಿ ಮೂಲಕ ಉತ್ತಮ ಶಿಕ್ಷಣ ವ್ಯವಸ್ಥೆ ನಿರ್ಮಾಣ ಆಗಲಿದೆ. ಎಸ್​ಇಪಿಗೆ ರಾಜ್ಯ ಪಠ್ಯ ಕ್ರಮವೋ, CBSE ಪಠ್ಯಕ್ಕೋ ಅಂತ ತಜ್ಞರ ವರದಿ ಬಂದ ಮೇಲೆ ಗೊತ್ತಾಗಲಿದೆ. ನಮ್ಮ ಸಿಲಬಸ್ CBSE ಗಿಂತ ಉತ್ತಮವಾಗಿ ಇರಲಿದೆ. ವರದಿ ಬಂದ ಬಳಿಕ ಸಿಎಂ ಜೊತೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಮಾಡ್ತೀವಿ ಎಂದು ಮಧು ಬಂಗಾರಪ್ಪ ತಿಳಿಸಿದರು.

ಇದನ್ನೂ ಓದಿ: ಕೆಲವೇ ದಿನಗಳಲ್ಲಿ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ: ಸಚಿವ ಮಧು ಬಂಗಾರಪ್ಪ ಶಾಕಿಂಗ್ ಹೇಳಿಕೆ

ಯತೀಂದ್ರ ವಿಡಿಯೋ ವೈರಲ್ ವಿಚಾರವಾಗಿ, ಅದು ಸಿಎಸ್​ಆರ್ ಫಂಡ್ ಬಗ್ಗೆ ಮಾತಾಡಿರೋದು ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರ ನನಗೆ ಗೊತ್ತೇ ಇಲ್ಲ. ಸಿಎಸ್​ಆರ್ ಫಂಡ್ ನನ್ನ ಇಲಾಖೆ ಬರೋದೇ ಇಲ್ಲ. ಅ ವಿಡಿಯೋ ಕೂಡಾ ನಾನು ನೋಡಿಲ್ಲ. ಸಿಎಂ ಶಾಲೆಗಳ ಸಿಎಸ್​ಆರ್ ಫಂಡ್ ಬಗ್ಗೆ ಮಾತಾಡಿದ್ರೆ ಅವರ ಬಳಿ ಮಾತಾಡಿ ಪ್ರತಿಕ್ರಿಯೆ ಕೊಡ್ತೀನಿ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Thu, 16 November 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!