AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021ರ ಏಪ್ರಿಲ್‌ನಿಂದ ಕೊವಿಡ್‌ಗೆ ಬಲಿಯಾದ ಶಿಕ್ಷಕರು, ಉಪನ್ಯಾಸಕ ಕುರಿತು ವರದಿ ಸಲ್ಲಿಸಲು ಸೂಚಿಸಿದ ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ 1.70 ಲಕ್ಷ ಪ್ರಾಥಮಿಕ ಸರ್ಕಾರಿ ಶಿಕ್ಷಕರಿದ್ದಾರೆ. ಇದರಲ್ಲಿ 262 ಸರ್ಕಾರಿ ಶಾಲಾ ಶಿಕ್ಷಕರು ಕೊರೊನಾ‌ ಸಾವನ್ನಪ್ಪಿದ್ದಾರೆ. ಜತೆಗೆ ಖಾಸಗಿ ಶಾಲೆಗಳ 422 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.

2021ರ ಏಪ್ರಿಲ್‌ನಿಂದ ಕೊವಿಡ್‌ಗೆ ಬಲಿಯಾದ ಶಿಕ್ಷಕರು, ಉಪನ್ಯಾಸಕ ಕುರಿತು ವರದಿ ಸಲ್ಲಿಸಲು ಸೂಚಿಸಿದ ಸಚಿವ ಸುರೇಶ್ ಕುಮಾರ್
ಸಚಿವ ಎಸ್. ಸುರೇಶ್ ಕುಮಾರ್
guruganesh bhat
|

Updated on: May 16, 2021 | 3:51 PM

Share

ಬೆಂಗಳೂರು: ಕೊವಿಡ್ ಕಾರ್ಯದಲ್ಲಿ‌ ನಿರತರಾದ ಹಾಗೂ ಉಪ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಹಲವು ಶಿಕ್ಷಕರು ಹಾಗೂ ಪದವಿಪೂರ್ವ ಉಪನ್ಯಾಸಕರು ಸಾವನ್ನಪ್ಪಿದ್ದಾರೆ ಎಂಬ ಮಾಧ್ಯಮಗಳ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವ ಎಸ್. ಸುರೇಶ್ ಕುಮಾರ್‌ ಮೃತಪಟ್ಟ ಶಿಕ್ಷಕರ ಮತ್ತು ಉಪನ್ಯಾಸಕರ ವಿವರಗಳನ್ನು ಕೂಡಲೇ ಸಲ್ಲಿಸಲು ಸಚಿವ ಸುರೇಶ್ ಕುಮಾರ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. 2021ರ ಏಪ್ರಿಲ್‌ನಿಂದ ಕೊವಿಡ್‌ಗೆ ಬಲಿಯಾದ ಶಿಕ್ಷಕರು ಮತ್ತು ಉಪನ್ಯಾಸಕರ‌‌ ವಯಸ್ಸು, ಸಾವಿಗೆ ಖಚಿತ ಕಾರಣ ಸಮೇತ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ರಾಜ್ಯದಲ್ಲಿ 1.70 ಲಕ್ಷ ಪ್ರಾಥಮಿಕ ಸರ್ಕಾರಿ ಶಿಕ್ಷಕರಿದ್ದಾರೆ. ಇದರಲ್ಲಿ 262 ಸರ್ಕಾರಿ ಶಾಲಾ ಶಿಕ್ಷಕರು ಕೊರೊನಾ‌ ಸಾವನ್ನಪ್ಪಿದ್ದಾರೆ. ಜತೆಗೆ ಖಾಸಗಿ ಶಾಲೆಗಳ 422 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ವಿಜಾಪುರ ಜಿಲ್ಲೆಯಲ್ಲಿ ಒಂದರಲ್ಲಿಯೇ 56 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಜತೆಗೆ ಬಸವಕಲ್ಯಾಣ, ಮಸ್ಕಿ, ಬೀದರ್ ವಿಧಾನಸಭಾ ಉಪ ಚುನಾವಣೆ ಮತ್ತು ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ‌ ಮಾಡಿದ 35 ಶಿಕ್ಷಕರು ಕೊವಿಡ್​ನಿಂದ ನಿಧನರಾಗಿದ್ದಾರೆ.

ಕಳೆದ ಏಪ್ರಿಲ್ 2021ರಿಂದ ಇಲ್ಲಿಯವರೆಗೆ ಕೊವಿಡ್ ಕಾರಣದಿಂದ‌ ಮೃತಪಟ್ಟ ಶಿಕ್ಷಕರು ಹಾಗೂ ಉಪನ್ಯಾಸಕರ‌‌ ವಯೋಮಾನ ಸಹಿತವಾಗಿ ಮೃತಪಟ್ಟ ಖಚಿತ ಕಾರಣಗಳೊಂದಿಗೆ ಅತಿ ಶೀಘ್ರದಲ್ಲೇ ತಮಗೆ ವರದಿ ಮಂಡಿಸಬೇಕೆಂದು ಶಿಕ್ಷಣ‌ ಇಲಾಖೆಯ ಆಯುಕ್ತರು ಹಾಗೂ ಪದವಿಪೂರ್ವ ಶಿಕ್ಷಣ ನಿರ್ದೇಶಕರಿಗೆ ಸೂಚಿಸಿರುವ ಸಚಿವರು, ಇದು ದುರದೃಷ್ಟಕರವಾದ ಸಂಗತಿಯಾಗಿದ್ದು, ಶಿಕ್ಷಕರ ಕುಟುಂಬಗಳ ಬಗ್ಗೆ ತಮ್ಮ ತೀವ್ರವಾದ ಸಂತಾಪವಿದೆ ಎಂದಿದ್ದಾರೆ. ಮೃತರೆಲ್ಲರಿಗೂ ಒಂದು ಕೋಟಿ ಪರಿಹಾರಕ್ಕೆ ಶಿಕ್ಷಕರ ಸಂಘ ಒತ್ತಾಯಿಸಿದೆ.

ಇದನ್ನೂ ಓದಿ: ‘ಭಾರತಕ್ಕಾಗಿ ನನ್ನ ಹೃದಯ ಮಿಡಿಯುತ್ತಿದೆ’ , ಕೊವಿಡ್ ಪರಿಸ್ಥಿತಿ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಭಾವುಕ ಬರಹ 

ಕೊವಿಡ್ ಸಂಬಂಧಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ; ಯುಐಡಿಎಐ ಸ್ಪಷ್ಟನೆ

(Karnataka Education Minister S Suresh Kumar directs give report on teachers died by Covid)

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ