2021ರ ಏಪ್ರಿಲ್‌ನಿಂದ ಕೊವಿಡ್‌ಗೆ ಬಲಿಯಾದ ಶಿಕ್ಷಕರು, ಉಪನ್ಯಾಸಕ ಕುರಿತು ವರದಿ ಸಲ್ಲಿಸಲು ಸೂಚಿಸಿದ ಸಚಿವ ಸುರೇಶ್ ಕುಮಾರ್

|

Updated on: May 16, 2021 | 3:51 PM

ರಾಜ್ಯದಲ್ಲಿ 1.70 ಲಕ್ಷ ಪ್ರಾಥಮಿಕ ಸರ್ಕಾರಿ ಶಿಕ್ಷಕರಿದ್ದಾರೆ. ಇದರಲ್ಲಿ 262 ಸರ್ಕಾರಿ ಶಾಲಾ ಶಿಕ್ಷಕರು ಕೊರೊನಾ‌ ಸಾವನ್ನಪ್ಪಿದ್ದಾರೆ. ಜತೆಗೆ ಖಾಸಗಿ ಶಾಲೆಗಳ 422 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.

2021ರ ಏಪ್ರಿಲ್‌ನಿಂದ ಕೊವಿಡ್‌ಗೆ ಬಲಿಯಾದ ಶಿಕ್ಷಕರು, ಉಪನ್ಯಾಸಕ ಕುರಿತು ವರದಿ ಸಲ್ಲಿಸಲು ಸೂಚಿಸಿದ ಸಚಿವ ಸುರೇಶ್ ಕುಮಾರ್
ಸಚಿವ ಎಸ್. ಸುರೇಶ್ ಕುಮಾರ್
Follow us on

ಬೆಂಗಳೂರು: ಕೊವಿಡ್ ಕಾರ್ಯದಲ್ಲಿ‌ ನಿರತರಾದ ಹಾಗೂ ಉಪ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಹಲವು ಶಿಕ್ಷಕರು ಹಾಗೂ ಪದವಿಪೂರ್ವ ಉಪನ್ಯಾಸಕರು ಸಾವನ್ನಪ್ಪಿದ್ದಾರೆ ಎಂಬ ಮಾಧ್ಯಮಗಳ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವ ಎಸ್. ಸುರೇಶ್ ಕುಮಾರ್‌ ಮೃತಪಟ್ಟ ಶಿಕ್ಷಕರ ಮತ್ತು ಉಪನ್ಯಾಸಕರ ವಿವರಗಳನ್ನು ಕೂಡಲೇ ಸಲ್ಲಿಸಲು ಸಚಿವ ಸುರೇಶ್ ಕುಮಾರ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. 2021ರ ಏಪ್ರಿಲ್‌ನಿಂದ ಕೊವಿಡ್‌ಗೆ ಬಲಿಯಾದ ಶಿಕ್ಷಕರು ಮತ್ತು ಉಪನ್ಯಾಸಕರ‌‌ ವಯಸ್ಸು, ಸಾವಿಗೆ ಖಚಿತ ಕಾರಣ ಸಮೇತ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ರಾಜ್ಯದಲ್ಲಿ 1.70 ಲಕ್ಷ ಪ್ರಾಥಮಿಕ ಸರ್ಕಾರಿ ಶಿಕ್ಷಕರಿದ್ದಾರೆ. ಇದರಲ್ಲಿ 262 ಸರ್ಕಾರಿ ಶಾಲಾ ಶಿಕ್ಷಕರು ಕೊರೊನಾ‌ ಸಾವನ್ನಪ್ಪಿದ್ದಾರೆ. ಜತೆಗೆ ಖಾಸಗಿ ಶಾಲೆಗಳ 422 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ವಿಜಾಪುರ ಜಿಲ್ಲೆಯಲ್ಲಿ ಒಂದರಲ್ಲಿಯೇ 56 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಜತೆಗೆ ಬಸವಕಲ್ಯಾಣ, ಮಸ್ಕಿ, ಬೀದರ್ ವಿಧಾನಸಭಾ ಉಪ ಚುನಾವಣೆ ಮತ್ತು ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ‌ ಮಾಡಿದ 35 ಶಿಕ್ಷಕರು ಕೊವಿಡ್​ನಿಂದ ನಿಧನರಾಗಿದ್ದಾರೆ.

ಕಳೆದ ಏಪ್ರಿಲ್ 2021ರಿಂದ ಇಲ್ಲಿಯವರೆಗೆ ಕೊವಿಡ್ ಕಾರಣದಿಂದ‌ ಮೃತಪಟ್ಟ ಶಿಕ್ಷಕರು ಹಾಗೂ ಉಪನ್ಯಾಸಕರ‌‌ ವಯೋಮಾನ ಸಹಿತವಾಗಿ ಮೃತಪಟ್ಟ ಖಚಿತ ಕಾರಣಗಳೊಂದಿಗೆ ಅತಿ ಶೀಘ್ರದಲ್ಲೇ ತಮಗೆ ವರದಿ ಮಂಡಿಸಬೇಕೆಂದು ಶಿಕ್ಷಣ‌ ಇಲಾಖೆಯ ಆಯುಕ್ತರು ಹಾಗೂ ಪದವಿಪೂರ್ವ ಶಿಕ್ಷಣ ನಿರ್ದೇಶಕರಿಗೆ ಸೂಚಿಸಿರುವ ಸಚಿವರು, ಇದು ದುರದೃಷ್ಟಕರವಾದ ಸಂಗತಿಯಾಗಿದ್ದು, ಶಿಕ್ಷಕರ ಕುಟುಂಬಗಳ ಬಗ್ಗೆ ತಮ್ಮ ತೀವ್ರವಾದ ಸಂತಾಪವಿದೆ ಎಂದಿದ್ದಾರೆ. ಮೃತರೆಲ್ಲರಿಗೂ ಒಂದು ಕೋಟಿ ಪರಿಹಾರಕ್ಕೆ ಶಿಕ್ಷಕರ ಸಂಘ ಒತ್ತಾಯಿಸಿದೆ.

ಇದನ್ನೂ ಓದಿ: ‘ಭಾರತಕ್ಕಾಗಿ ನನ್ನ ಹೃದಯ ಮಿಡಿಯುತ್ತಿದೆ’ , ಕೊವಿಡ್ ಪರಿಸ್ಥಿತಿ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಭಾವುಕ ಬರಹ 

ಕೊವಿಡ್ ಸಂಬಂಧಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ; ಯುಐಡಿಎಐ ಸ್ಪಷ್ಟನೆ

(Karnataka Education Minister S Suresh Kumar directs give report on teachers died by Covid)