AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಮುಖ್ಯ ಎಂದ ಹೈಕೋರ್ಟ್​; ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಆನೆ ಬಲ!

S Suresh Kumar: ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ (Karnataka high court) ಸಕಾಲಿಕ ನಿರ್ಧಾರವನ್ನು ಕೈಗೊಂಡಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದೆ. ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಮುಖ್ಯ ಎಂದ ಹೈಕೋರ್ಟ್​; ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಆನೆ ಬಲ!
’ಶಿಕ್ಷಣ ಸಚಿವ’ ಸುರೇಶ್ ಕುಮಾರ್​
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 12, 2021 | 4:27 PM

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಎಸ್ಎಲ್​ಸಿ  ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್​ ತಿರಸ್ಕರಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಮುಖ್ಯ ಎಂದು ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದರಿಂದ ಕಳೆದ ರ್ಷದಂತೆ ಈ ಬಾರಿಯೂ ಶತಾಯಗತಾಯ ಎಸ್ಎಸ್ಎಲ್​ಸಿ  ಪರೀಕ್ಷೆ ನಡೆಸಿಯೇ ನಡೆಸುತ್ತೇವೆ ಎಂದು ಪಣತೊಟ್ಟಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ( S Suresh Kumar) ಆನೆ ಬಲ ಬಂದಂತಾಗಿದೆ. ಇದರಿಂದ ಮಹಾಮಾರಿ ಕೊರೊನಾ ಸೋಂಕಿನ ಸಮ್ಮುಖದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವ ವಿಷಯದಲ್ಲಿ ಅರ್ಧ ಯುದ್ಧ ಗೆದ್ದಂತಾಗಿದೆ. 

ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದಕ್ಕೆ ( SSLC Examination 2021) ಕೊರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದ ನಡೆಗೆ ಸಚಿವ ಸುರೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ನಿಜಕ್ಕೂ ಇದು ಭರವಸೆ ಮೂಡಿಸಿದ ತೀರ್ಪು. ಈ ವರ್ಷದ ಎಸ್ಎಸ್ಎಲ್​ಸಿ  ಪರೀಕ್ಷೆ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಉಚ್ಚ ನ್ಯಾಯಾಲಯವು ಪಿಐಎಲ್ ಅನ್ನು ತಿರಸ್ಕರಿಸಿದೆ. ಅದರೊಂದಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದರಿಂದ ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಂತಸ ಹಂಚಿಕೊಂಡಿದ್ದಾರೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ ಮತ್ತು ರಾಜ್ಯ ಆರೋಗ್ಯ ಇಲಾಖೆಯ ಎಸ್ಒಪಿ ಉಪಕ್ರಮಗಳ ಕುರಿತಂತೆ ಸರ್ಕಾರದ ವೈಜ್ಞಾನಿಕ ಆಲೋಚನೆಗಳನ್ನು ಕೊರ್ಟ್ ಪುರಸ್ಕರಿಸಿದೆ. ಇದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಉಪಕ್ರಮವಾಗಿದೆ ಎಂದು ಸ್ವತಃ ಹೈಕೋರ್ಟ್ ಹೇಳಿದೆ. ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸುವುದನ್ನು ಉಚ್ಚ ನ್ಯಾಯಾಲಯ ತುಂಬು ಮನಸ್ಸಿನಿಂದ ಶ್ಲಾಘಿಸಿದೆ ಎಂದು ಸಚಿವ ಸುರೇಶ್ ಕುಮಾರ್ (Karnataka Education minister) ಸಂತಸಪಟ್ಟಿದ್ದಾರೆ.

ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ (Karnataka high court) ಸಕಾಲಿಕ ನಿರ್ಧಾರವನ್ನು ಕೈಗೊಂಡಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದೆ. ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಕಳೆದ ವರ್ಷವೂ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧದಲ್ಲಿ ಇದೇ ರೀತಿಯಲ್ಲಿ ಹೈಕೋರ್ಟ್ ತೀರ್ಪು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸಲ್ಲಿಸಿದ್ದ ಎಸ್.ಎಲ್.ಪಿ. ಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು ರಾಜ್ಯದ ಕ್ರಮವನ್ನು ಪುರಸ್ಕರಿಸಿತ್ತು.

Karnataka SSLC Exam 2021: ಎಸ್ಎಸ್ಎಲ್​ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

(Karnataka Education minister S Suresh Kumar welcomes high court judgement on SSLC Examination 2021)

Published On - 4:27 pm, Mon, 12 July 21

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ