AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಮುಖ್ಯ ಎಂದ ಹೈಕೋರ್ಟ್​; ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಆನೆ ಬಲ!

S Suresh Kumar: ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ (Karnataka high court) ಸಕಾಲಿಕ ನಿರ್ಧಾರವನ್ನು ಕೈಗೊಂಡಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದೆ. ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಮುಖ್ಯ ಎಂದ ಹೈಕೋರ್ಟ್​; ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಆನೆ ಬಲ!
’ಶಿಕ್ಷಣ ಸಚಿವ’ ಸುರೇಶ್ ಕುಮಾರ್​
TV9 Web
| Edited By: |

Updated on:Jul 12, 2021 | 4:27 PM

Share

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಎಸ್ಎಲ್​ಸಿ  ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್​ ತಿರಸ್ಕರಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಮುಖ್ಯ ಎಂದು ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದರಿಂದ ಕಳೆದ ರ್ಷದಂತೆ ಈ ಬಾರಿಯೂ ಶತಾಯಗತಾಯ ಎಸ್ಎಸ್ಎಲ್​ಸಿ  ಪರೀಕ್ಷೆ ನಡೆಸಿಯೇ ನಡೆಸುತ್ತೇವೆ ಎಂದು ಪಣತೊಟ್ಟಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ( S Suresh Kumar) ಆನೆ ಬಲ ಬಂದಂತಾಗಿದೆ. ಇದರಿಂದ ಮಹಾಮಾರಿ ಕೊರೊನಾ ಸೋಂಕಿನ ಸಮ್ಮುಖದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವ ವಿಷಯದಲ್ಲಿ ಅರ್ಧ ಯುದ್ಧ ಗೆದ್ದಂತಾಗಿದೆ. 

ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದಕ್ಕೆ ( SSLC Examination 2021) ಕೊರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದ ನಡೆಗೆ ಸಚಿವ ಸುರೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ನಿಜಕ್ಕೂ ಇದು ಭರವಸೆ ಮೂಡಿಸಿದ ತೀರ್ಪು. ಈ ವರ್ಷದ ಎಸ್ಎಸ್ಎಲ್​ಸಿ  ಪರೀಕ್ಷೆ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಉಚ್ಚ ನ್ಯಾಯಾಲಯವು ಪಿಐಎಲ್ ಅನ್ನು ತಿರಸ್ಕರಿಸಿದೆ. ಅದರೊಂದಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದರಿಂದ ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಂತಸ ಹಂಚಿಕೊಂಡಿದ್ದಾರೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ ಮತ್ತು ರಾಜ್ಯ ಆರೋಗ್ಯ ಇಲಾಖೆಯ ಎಸ್ಒಪಿ ಉಪಕ್ರಮಗಳ ಕುರಿತಂತೆ ಸರ್ಕಾರದ ವೈಜ್ಞಾನಿಕ ಆಲೋಚನೆಗಳನ್ನು ಕೊರ್ಟ್ ಪುರಸ್ಕರಿಸಿದೆ. ಇದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಉಪಕ್ರಮವಾಗಿದೆ ಎಂದು ಸ್ವತಃ ಹೈಕೋರ್ಟ್ ಹೇಳಿದೆ. ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸುವುದನ್ನು ಉಚ್ಚ ನ್ಯಾಯಾಲಯ ತುಂಬು ಮನಸ್ಸಿನಿಂದ ಶ್ಲಾಘಿಸಿದೆ ಎಂದು ಸಚಿವ ಸುರೇಶ್ ಕುಮಾರ್ (Karnataka Education minister) ಸಂತಸಪಟ್ಟಿದ್ದಾರೆ.

ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ (Karnataka high court) ಸಕಾಲಿಕ ನಿರ್ಧಾರವನ್ನು ಕೈಗೊಂಡಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದೆ. ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಕಳೆದ ವರ್ಷವೂ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧದಲ್ಲಿ ಇದೇ ರೀತಿಯಲ್ಲಿ ಹೈಕೋರ್ಟ್ ತೀರ್ಪು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸಲ್ಲಿಸಿದ್ದ ಎಸ್.ಎಲ್.ಪಿ. ಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು ರಾಜ್ಯದ ಕ್ರಮವನ್ನು ಪುರಸ್ಕರಿಸಿತ್ತು.

Karnataka SSLC Exam 2021: ಎಸ್ಎಸ್ಎಲ್​ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

(Karnataka Education minister S Suresh Kumar welcomes high court judgement on SSLC Examination 2021)

Published On - 4:27 pm, Mon, 12 July 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ