AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲೂಕು, ಜಿಲ್ಲಾ ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಬಿಗ್​ ಅಪ್ಡೇಟ್ ನೀಡಿದ ಚುನಾವಣೆ ಆಯುಕ್ತ

ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತ ಜಿ.ಎಸ್‌.ಸಂಗ್ರೇಶಿ ತಮ್ಮ ಮೊದಲ ಸುದ್ದಿಗೋಷ್ಠಿ ನಡೆಸಿದ್ದು, ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಸ್ಥಳೀಯ ಸಂಸ್ಥೆ ಚುನಾವಣೆಗಳು ಯಾವಾಗ ನಡೆಯಬಹುದು ಎನ್ನುವ ಬಗ್ಗೆ ಮಾತನಾಡಿದ್ದಾರೆ.

ತಾಲೂಕು, ಜಿಲ್ಲಾ ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಬಿಗ್​ ಅಪ್ಡೇಟ್ ನೀಡಿದ ಚುನಾವಣೆ ಆಯುಕ್ತ
ಕರ್ನಾಟಕ ಚುನಾವಣೆ ಆಯುಕ್ತ ಜಿ.ಎಸ್ ಸಂಗ್ರೇಶಿ
ಪ್ರಸನ್ನ ಗಾಂವ್ಕರ್​
| Edited By: |

Updated on: Aug 08, 2024 | 6:54 PM

Share

ಬೆಂಗಳೂರು, (ಆಗಸ್ಟ್​ 08): ಅವಧಿ ಮುಗಿದರೂ ಸಹ ಕಳೆದ ನಾಲ್ಕು ವರ್ಷಗಳಿಂದ ತಾಲೂಕು, ಜಿಲ್ಲಾ ಪಂಚಾಯಿತಿ  ಮತ್ತು ಬಿಬಿಎಂಪಿ ಚುನಾವಣೆ ನಡೆದಿಲ್ಲ. ಹೀಗಾಗಿ ಸರ್ಕಾರದ ವಿರುದ್ದ ಕೂಡ ನ್ಯಾಯಾಂಗ ಉಲ್ಲಂಘನೆ ಕೇಸ್ ದಾಖಲಿಸಿದ್ದೇವೆ. 2 ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ಬಾಕಿ ಇದೆ. ಈ ಪ್ರಕರಣ ಇತ್ಯರ್ಥವಾದ ತಕ್ಷಣವೇ ಚುನಾವಣೆ ನಡೆಸುವುದಾಗಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತ ಜಿ.ಎಸ್‌.ಸಂಗ್ರೇಶಿ ಸ್ಪಷ್ಟಪಡಿಸಿದ್ದಾರೆ.

ಅವಧಿ ಮುಗಿದ ಆರು ತಿಂಗಳ ಒಳಗೆ ಚುನಾವಣೆಗೆ ಸರ್ಕಾರ ಮುಂದುವರಿಯದೇ ಇದ್ದರೆ ನಾವು ನ್ಯಾಯಾಲಯಕ್ಕೆ ಹೋಗಬೇಕಾಗುತ್ತದೆ. ಮುಂದಿನ ವಾರ  ಮೈಸೂರು, ಶಿವಮೊಗ್ಗ, ತುಮಕೂರು ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಮಾಡುತ್ತೇವೆ. ಮೀಸಲಾತಿ ಇನ್ನೂ ಪ್ರಕಟ ಮಾಡಿಲ್ಲ. ಈ ಹಿಂದಿನ ಮೀಸಲಾತಿ ಆಧಾರದ ಮೇಲೆ ಚುನಾವಣೆ ಮಾಡುತ್ತೇವೆ. ಸುಪ್ರೀಂ ಕೋರ್ಟ್ ನಿರ್ದೇಶನ ಇದೆ. ಹೀಗಾಗಿ ನವೆಂಬರ್ ಒಳಗೆ ಚುನಾವಣೆ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಎಲ್ಲವೂ 10ನೇ ತಾರೀಕಿನ ನಂತರ ನೋಡ್ತಿರಿ: ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಚಲುವರಾಯಸ್ವಾಮಿ

ಕಳೆದ ನಾಲ್ಕು ವರ್ಷಗಳಿಂದ ಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಪಂಚಾಯತ ಚುನಾವಣೆ ನಡೆದಿಲ್ಲ. ಮುಕ್ತ ‌ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬೇಕು. ಇದರ ಹೊಣೆ ಚುನಾವಣಾ ಆಯೋಗದ ಮೇಲೆ ಇದೆ ರಾಜ್ಯ ಸರ್ಕಾರ ಆದಷ್ಟು ಬೇಗ ಸಹಕಾರ ಕೋಡಬೇಕು. ಇದುವರೆಗೆ ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿ ಸರ್ಕಾರ‌ ಮೀಸಲಾತಿ ಪಟ್ಟಿ ನೀಡುತ್ತಿಲ್ಲ. ಅವರು ಮೀಸಲಾತಿ ‌ಪಟ್ಟಿ‌ ಕೊಟ್ಟ ತಕ್ಷಣ ಚುನಾವಣೆ ನಡೆಸುತ್ತೇವೆ ಎಂದು ತಿಳಿಸಿದರು.

ಚುನಾವಣೆ ನಡೆಯದ ಕಾರಣ 15ನೇ ಹಣಕಾಸಿನ ಹಣ ಬರುತ್ತಿಲ್ಲ. ಫೆಬ್ರವರಿ ಒಳಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಯದಿದ್ದರೆ 15ನೇ ಹಣಕಾಸಿನ ಆಯೋಗದ ಸುಮಾರು 2000 ಕೋಟಿ ರೂ. ಹಣ ವಾಪಸ್ ಹೋಗುತ್ತದೆ. ಚುನಾವಣೆ ಆದರೆ ಮಾತ್ರ ನಮ್ಮ ಪಾಲಿನ ಹಣ ಬರುತ್ತೆ. ಮುಂದೆ ಅವಧಿ ಮುಗಿದ ಆರು ತಿಂಗಳ ಒಳಗೆ ಚುನಾವಣೆಗೆ ಸರ್ಕಾರ ಮುಂದುವರಿಯದೇ ಇದ್ದರೆ ನಾವು ನ್ಯಾಯಾಲಯಕ್ಕೆ ಹೋಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು