AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ ಶಾಕ್​​: ಎಸ್ಕಾಂಗಳಿಂದ ಹಳೆ ಬಾಕಿ ವಸೂಲಿ; ಯಾವ ವರ್ಗಕ್ಕೆ ಎಷ್ಟು ದರ ಏರಿಕೆ?

ರಾಜ್ಯದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ವಿದ್ಯುತ್ ಬಳಕೆದಾರರಿಗೆ ದರ ಏರಿಕೆಯ ಬಿಸಿ ತಟ್ಟಲಿದೆ. KERC ಅನುಮೋದಿತ ಈ ಪರಿಷ್ಕೃತ ದರವು ಏಪ್ರಿಲ್ 2025-ಮಾರ್ಚ್ 2026ರ ಅವಧಿಯ ಬಳಕೆಗೆ ಅನ್ವಯವಾಗಿದ್ದು, 2026-27ರ ಬಿಲ್‌ಗಳಲ್ಲಿ ವಸೂಲಾಗಲಿದೆ. ESCOM ನಷ್ಟ ಸರಿದೂಗಿಸಲು ಈ ಕ್ರಮ. ಇದರ ಜೊತೆಗೇ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವಿದ್ಯುತ್ ಬಳಕೆ ದಾಖಲೆ ಮಟ್ಟಕ್ಕೇರಿದ್ದು, ಬೇಸಿಗೆ ಮತ್ತು ನೀರಾವರಿ ಇದಕ್ಕೆ ಪ್ರಮುಖ ಕಾರಣ.

ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ ಶಾಕ್​​: ಎಸ್ಕಾಂಗಳಿಂದ ಹಳೆ ಬಾಕಿ ವಸೂಲಿ; ಯಾವ ವರ್ಗಕ್ಕೆ ಎಷ್ಟು ದರ ಏರಿಕೆ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Mar 31, 2026 | 4:58 PM

Share

ಬೆಂಗಳೂರು, ಮಾ,31: ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾ ವಿದ್ಯುತ್ ಬಳಕೆದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ವಿದ್ಯುತ್ ಸರಬರಾಜು ಕಂಪನಿಗಳ (ESCOMs) ನಷ್ಟವನ್ನು ಸರಿದೂಗಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ದರ ಪರಿಷ್ಕರಣೆಗೆ ಹಸಿರು ನಿಶಾನೆ ತೋರಿಸಿದ್ದು, ಏಪ್ರಿಲ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ವಿಶೇಷವೆಂದರೆ, ಈ ದರ ಏರಿಕೆಯು 2025-26ರ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ ಘೋಷಿಸಲಾಗಿದೆ. ಅಂದರೆ, ಏಪ್ರಿಲ್ 2025 ರಿಂದ ಮಾರ್ಚ್ 2026 ರವರೆಗೆ ಬಳಕೆ ಮಾಡಿರುವ ವಿದ್ಯುತ್‌ಗೆ ಬಳಕೆದಾರರು ಈಗ ಹೆಚ್ಚುವರಿ ಹಣವನ್ನು ಪಾವತಿಸಬೇಕಾಗುತ್ತದೆ. ಈ ಬಾಕಿ ಮೊತ್ತವನ್ನು ಬೆಸ್ಕಾಂ (BESCOM) ಸೇರಿದಂತೆ ಎಲ್ಲಾ ಎಸ್ಕಾಂಗಳು 2026-27ರ ಆರ್ಥಿಕ ವರ್ಷದ ಬಿಲ್‌ಗಳಲ್ಲಿ ವಸೂಲಿ ಮಾಡಲಿವೆ.

ಕೈಗಾರಿಕೆ ಮತ್ತು ಹೋಟೆಲ್, ಸಿನಿಮಾ ಹಾಲ್‌ಗಳಂತಹ ವಾಣಿಜ್ಯ ಸಂಕೀರ್ಣಗಳಿಗೆ ಗರಿಷ್ಠ ದರ ಏರಿಕೆ ಮಾಡಲಾಗಿದ್ದು, ಇದು ಉತ್ಪಾದನಾ ವೆಚ್ಚ ಮತ್ತು ಸೇವಾ ದರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಇನ್ನು ಇತ್ತೀಚಿನ ವರದಿಗಳ ಪ್ರಕಾರ ರಾಜ್ಯದ ವಿದ್ಯುತ್​​ ಬಳಕೆಗಳು ಹೆಚ್ಚಾಗಿದೆ. ದಾಖಲೆ ಮಟ್ಟದಲ್ಲಿ ಈ ಭಾರೀ ಕರೆಂಟ್​​ ಉಪಯೋಗಿಸಲಾಗಿದೆ ಎಂದು ಹೇಳಿದೆ.

ಇನ್ನು ಬೆಂಗಳೂರಿನಲ್ಲಿ ಹೆಚ್ಚು ವಿದ್ಯುತ್​​ ಉಪಯೋಗಿಸಲಾಗುತ್ತಿದೆ ಎಂದು ಹೇಳಲಾಗಿದೆ. ಈ ತಿಂಗಳು ರಾಜ್ಯದ ಒಟ್ಟು ವಿದ್ಯುತ್ ಬಳಕೆ 373.6 ಮಿಲಿಯನ್ ಯೂನಿಟ್ ತಲುಪುವ ನಿರೀಕ್ಷೆಯಿದೆ. ಒಂದು ಸಣ್ಣ ರಾಜ್ಯ ಬಳಸುವ ವಿದ್ಯುತ್ ಅನ್ನು ಕೇವಲ ಬೆಂಗಳೂರು ನಗರವೊಂದೇ ಬಳಸುತ್ತಿದೆ ಎಂಬ ಅಚ್ಚರಿಯ ವಿಚಾರವೊಂದು ಹೊರಬಂದಿದೆ. ಬೆಂಗಳೂರಿನ ಪೀಕ್ ಡಿಮ್ಯಾಂಡ್ 2,000 ರಿಂದ 2,500 ಮೆಗಾವ್ಯಾಟ್ (MW) ತಲುಪಿದೆ.

ಇದನ್ನೂ ಓದಿ: ದಾಖಲೆ ಬರೆದ ರಾಜ್ಯದ ವಿದ್ಯುತ್ ಬೇಡಿಕೆ: ಬೆಂಗಳೂರಿನ ಎಸಿ ಅಬ್ಬರಕ್ಕೆ ಬೆವರುತ್ತಿದೆ ಪವರ್ ಗ್ರಿಡ್!

ಮಾರ್ಚ್ ತಿಂಗಳಲ್ಲಿ ಎರಡು ಪ್ರಮುಖ ಕಾರಣಗಳಿಂದಾಗಿ ವಿದ್ಯುತ್ ಬಳಕೆ ಹೆಚ್ಚಾಗಿದೆ. ಬೇಸಿಗೆಯ ಶಾಖದಿಂದಾಗಿ ನಗರವಾಸಿಗಳು ಎಸಿಗಳ ಮೇಲೆ ಅವಲಂಬಿತರಾಗಿದ್ದಾರೆ.ಗ್ರಾಮೀಣ ಕರ್ನಾಟಕದಲ್ಲಿ ರೈತರು ಬೇಸಿಗೆ ಬೆಳೆಗಾಗಿ ನೀರಾವರಿ ಪಂಪ್‌ಸೆಟ್‌ಗಳನ್ನು ನಿರಂತರವಾಗಿ ಬಳಸುತ್ತಿದ್ದಾರೆ.ಅಡುಗೆ ಅನಿಲದ ಕೊರತೆಯೂ ವಿದ್ಯುತ್ ಬೇಡಿಕೆ ಹೆಚ್ಚಲು ಕಾರಣವಾಗಬಹುದು. ಹೋಟೆಲ್‌ಗಳು ಮತ್ತು ಮನೆಗಳು ಗ್ಯಾಸ್ ಬದಲು ಇಂಡಕ್ಷನ್ ಸ್ಟೌವ್ ಅಥವಾ ಹೀಟರ್‌ಗಳಿಗೆ ಬದಲಾದರೆ, ಗ್ರಿಡ್ ಮೇಲೆ ಮತ್ತೆ 400 ರಿಂದ 500 ಮೆಗಾವ್ಯಾಟ್ ಹೆಚ್ಚುವರಿ ಹೊರೆ ಬೀಳುವ ಆತಂಕವಿದೆ ಎಂದು ಹೇಳಲಾಗಿದೆ.

ವರದಿ: ಲಕ್ಷ್ಮೀ ನರಸಿಂಹ ಮೆಟ್ರೋ 

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ