AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Tariff Hike: ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ?

Electricity Price Hike In Karnataka: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಹಾಲು, ಮೊಸರಿನ ದರ ಏರಿಕೆ ದೊಡ್ಡ ಹೊರೆಯಾದಂತಾಗಿದೆ. ಇದರ ಬೆನ್ನಲ್ಲೇ ಇದೀಗ ವಿದ್ಯುತ್‌ ದರ ಹೆಚ್ಚಳವಾಗಿದೆ. ಈ ಬಗ್ಗೆ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (ಕೆಇಆರ್‌ಸಿ) ಇಂದು (ಮಾರ್ಚ್ 27) ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಜನರಿಗೆ ವಿದ್ಯುತ್​ ಶಾಕ್​ ಕೊಟ್ಟಿದೆ. ಹಾಗಾದ್ರೆ, ಪ್ರತಿ ಯೂನಿಟ್​​ ವಿದ್ಯುತ್​​ಗೆ ಎಷ್ಟು ಹೆಚ್ಚಳ ಮಾಡಲಾಗಿದೆ ಎನ್ನುವ ಮಾಹಿತಿ ಇಲ್ಲಿದೆ.

Power Tariff Hike: ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ?
Power Tariff Hikes
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Mar 27, 2025 | 5:45 PM

Share

ಬೆಂಗಳೂರು, (ಮಾರ್ಚ್​ 27): ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು(ಮಾರ್ಚ್ 27) ನಡೆದ ಸಚಿವ ಸಂಪುಟದಲ್ಲಿ ನಂದಿನಿ ಹಾಲು (Nandini Milk) ಹಾಗೂ ಮೊಸರು ದರ ಏರಿಕೆಗೆ ಗ್ರೀನ್ ಸಿಗ್ನಲ್​ ನೀಡಿದೆ. ಹೀಗಾಗಿ ನಂದಿನಿ ಹಾಲು ಮತ್ತು ಮೊಸರು ಪ್ರತಿ ಲೀಟರ್​​ಗೆ ಬರೋಬ್ಬರಿ 4 ರೂಪಾಯಿ ಏರಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ಇಂದೇ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (ಕೆಇಆರ್‌ಸಿ) ಜನರಿಗೆ ವಿದ್ಯುತ್ ಶಾಕ್ ಕೊಟ್ಟಿದೆ. ಹೌದು…ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ ಇಂದು (ಗುರುವಾರ) ಅಧಿಕೃತ ಆದೇಶ ಹೊರಡಿಸಿದ್ದು, ಪರಿಷ್ಕೃತ ವಿದ್ಯುತ್ ದರ ಏಪ್ರಿಲ್‌ 1ರಿಂದಲೇ ಅನ್ವಯವಾಗಲಿದೆ. ಮುಂದಿನ ಮೂರು ವರ್ಷಗಳಿಗೆ ದರ ಏರಿಕೆ ಮಾಡಿ ಪಟ್ಟಿ ಆದೇಶಿಸಿದೆ.

ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಎಸ್ಕಾಂಗಳು ಕೆಇಆರ್‌ಸಿ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಹೀಗಾಗಿ ಇಂದು (ಮಾರ್ಚ್ 27) ಕೆಇಆರ್‌ಸಿ ಅಧಿಕೃತವಾಗಿ ಪ್ರತಿ ಯೂನಿಟ್​ ವಿದ್ಯುತ್​ಗೆ 36 ಪೈಸೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದಲೇ ಹೊಸ ದರ ಜಾರಿಯಾಗಲಿದ್ದು, ರಾಜ್ಯದ ಜನರಿಗೆ ವಿದ್ಯುತ್ ದರದ ಬಿಸಿ ತಟ್ಟಲಿದೆ.

ಇದನ್ನೂ ಓದಿ: Nandini Milk Price: ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬರೆ: ನಂದಿನಿ ಹಾಲು ಮತ್ತಷ್ಟು ದುಬಾರಿ, ಎಷ್ಟು ಗೊತ್ತಾ?

ಇತ್ತೀಚೆಗಷ್ಟೇ ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್​ಆರ್​ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಹಾಗೇ ಮದ್ಯದ ದರ ಏರಿಕೆ. ಹೀಗೆ ಸಾಲು ಸಾಲು ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಇಂದು ಹಾಲು ಹಾಗೂ ಮೋಸರು ದರ ಏರಿಕೆ ಬಿಸಿ ಮುಟ್ಟಿದೆ. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ವಿದ್ಯುತ್​​​ ಶಾಕ್ ಕೊಟ್ಟಿದೆ.

ಇದನ್ನೂ ಓದಿ
Image
ಮತ್ತೆ ಬೆಲೆ ಏರಿಕೆ ಬರೆ:ನಂದಿನಿ ಹಾಲಿನ ದರ ಏರಿಕೆಗೆ ಸಂಪುಟ ಗ್ರೀನ್ ಸಿಗ್ನಲ್
Image
ಸ್ಮಾರ್ಟ್ ಮೀಟರ್ ಹಗರಣ ಆರೋಪ: ಊಹಾಪೋಹಗಳಿಗೆ ಕೆಪಿಟಿಸಿಎಲ್​​ ಎಂಡಿ ಸ್ಪಷ್ಟನೆ
Image
ವಿದ್ಯುತ್ ದರ ಏರಿಕೆ, ಗ್ರಾಹಕರಿಗೆ ಶಾಕ್ ನೀಡಿದ ಕೆಇಆರ್​ಸಿ
Image
ಗೃಹಜ್ಯೋತಿ ದುಡ್ಡು ಜನರಿಂದಲೇ ವಸೂಲಿ ಆರೋಪ: ಸ್ಪಷ್ಟನೆ ನೀಡಿದ ಬೆಸ್ಕಾಂ ಎಂಡಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Thu, 27 March 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!